ರಾಯಚೂರು | ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಝಿ ಕಾಯ್ದೆ ರದ್ದುಗೊಂಡಿಲ್ಲ: ಖಾಝೀಸ್ ವೆಲ್‌ಫೇರ್ ಟ್ರಸ್ಟ್‌

Date:

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಝಿ ಕಾಯ್ದೆ ರದ್ದುಗೊಂಡಿಲ್ಲ. ಆದರೂ ವಕ್ಫ್‌ ಇಲಾಖೆಯ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ಸಮುದಾಯದ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಖಾಝೀಸ್ ವೆಲ್‌ಫೇರ್ ಅಂಜುಮನ್ ಟ್ರಸ್ಟ್‌ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಖಾಝೀಸ್ ವೆಲ್‌ಫೇರ್ ಅಂಜುಮನ್ ಟ್ರಸ್ಟ್‌ ಕಾರ್ಯದರ್ಶಿ ಮೊಹಮ್ಮದ್ ಆದಂ ಖಾನ್, “ಒಂದು ತಿಂಗಳೊಳಗೆ ಕಲ್ಬುರ್ಗಿ ಹೈಕೋರ್ಟ್‌ ಆದೇಶದಂತೆ ಖಾಝಿಗಳಿಗೆ ಅವಕಾಶ ನೀಡದೆ ಹೋದಲ್ಲಿ ನ್ಯಾಯಾಂಗ ನಿಂದನೆ ಕೇಸು ದಾಖಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

“2012 ಮಾರ್ಚ್‌ 19ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿ ಕಲ್ಯಾಣ ಕರ್ನಾಟಕ ಜಿಲ್ಲೆ ಹೊರತುಪಡಿಸಿ ಖಾಝಿ ಕಾಯ್ದೆ ರದ್ದುಗೊಳಿಸಿದೆ. ಅಧಿಸೂಚನೆ ಕಲಂ 4(1) ಮತ್ತು (3)ರಲ್ಲಿ ಉಲ್ಲೇಖಿಸಿರುವಂತೆ ಖಾಝಿಗಳಿಗೆ ಮದುವೆ ಪ್ರಮಾಣ ಪತ್ರ ನೀಡಲು ಅಧಿಕಾರ ಮಂದುವರೆಸಿದೆ. ಆದರೆ ಕೆಲವು ಅಧಿಕಾರಿಗಳು ಖಾಝಿಗಳಿಗೆ ಅಧಿಕಾರ ರದ್ದುಗೊಂಡಿದ್ದು, ಮಸೀದಿ ಕಮಿಟಿಗಳಿಗೆ ಅಧಿಕಾರ ನೀಡಿರುವುದಾಗಿ ತಪ್ಪು ಮಾಹಿತಿ ನೀಡುತ್ತಿರುವ ಕುರಿತು ವಕ್ಫ್‌ ಸಚಿವರು, ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಝಿಗಳಿಗೆ ಇರುವ ಅಧಿಕಾರ ಕುರಿತಂತೆ ಕಲ್ಬುರ್ಗಿ ಹೈಕೋರ್ಟಿನಲ್ಲಿ ದೂರು ದಾಖಲಿಸಲಾಗಿತ್ತು. ದೂರಿನ ವಿಚಾರಣೆ ನಡೆಸಿ ಹೈಕೋರ್ಟ್‌ ಆದೇಶ ನೀಡಿದೆ. ಕಲ್ಯಾಣ ಕರ್ನಾಟಕದಲ್ಲಿ ಖಾಝಿಗಳಿಗೆ ಅಧಿಕಾರ ಮುಂದುವರೆಸಿದ್ದು, ಮಸೀದಿ ಕಮಿಟಿಗಳಿಗೆ ಅಧಿಕಾರವಿಲ್ಲ ಎಂದು ಸ್ಪಷ್ಟತೆಯನ್ನು ನೀಡಿದೆ. ವಕ್ಫ್‌ ಇಲಾಖೆಗೆ ಯಾವುದೇ ಅಧಿಕಾರ ಇಲ್ಲದೇ ಇದ್ದರೂ ಮಧ್ಯಪ್ರವೇಶಿಸಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಮೊಹಮ್ಮದ್ ಆದಂ ಖಾನ್ ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು

ವಕ್ಫ್‌ ಕಾಯ್ದೆ 1995ರಂತೆ ಖಾಝಿಗಳನ್ನು ನೇಮಿಸುವ ಅಧಿಕಾರ ವಕ್ಫ್‌ ಕಮಿಟಿಗೆ ಇಲ್ಲ. ಕಲ್ಯಾಣ ಕರ್ನಾಟಕ ಹೊರತುಪಡಿಸಿ ಉಳಿದ 24 ಜಿಲ್ಲೆಗಳಲ್ಲಿ ಮಾತ್ರ ಖಾಝಿ ಕಾಯ್ದೆ ಸಮಾಪನಗೊಂಡಿದೆ. ದುರುದ್ದೇಶಪೂರ್ವಕವಾಗಿ ಖಾಝಿಗಳ ಸೇವೆ ರದ್ದುಗೊಂಡಿದೆ ಸುಳ್ಳು ಹರಡುವದನ್ನು ನಿಲ್ಲಿಸಬೇಕು. ವಕ್ಫ್‌ ಸಚಿವರು ಕೂಡಲೇ ಸ್ಪಷ್ಟತೆ ನೀಡಬೇಕು. ಒಂದು ತಿಂಗಳೊಳಗೆ ಕ್ರಮವಾಗದೇ ಇದ್ದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಖಾಝೀಸ್ ವೆಲ್‌ಫೇರ್ ಅಂಜುಮನ್ ಟ್ರಸ್ಟ್‌ ಅಧ್ಯಕ್ಷ ಖಾಝಿ ಮೀರ್ ಇಬ್ರಾಹಿಂ ಅಲಿ, ಸೈಯದ್ ಜಾಫರ್ ಹುಸೇನ್ ಖಾದ್ರಿ, ಎಂ.ಡಿ.ಅಬ್ದುಲ್ಲಾ ಖಾಝಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಖಾಝಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...