ಹಾಸನ | ಬೇಲೂರು ರಥೋತ್ಸವದ ವೇಳೆ ಕುರಾನ್‌ ಪಠಣಕ್ಕೆ ವಿರೋಧ; ಪ್ರತಿಭಟನೆಗೆ ಕರೆ

Date:

  • ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವ ಹಂತದಲ್ಲಿರುವ ದೇವಸ್ಥಾನ
  • ಮಾ. 28ರಂದು ಪ್ರತಿಭನಾ ಮೆರವಣಿಗೆ ಕರೆ ನೀಡಿದ ಸಂಘಟನೆಗಳು

ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ರಥೋತ್ಸವ ಏಪ್ರಿಲ್‌ 4ರಂದು ನಡೆಯಲಿದೆ. ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡುವುದು ಇಲ್ಲಿನ ವಿಶೇಷವಾಗಿದ್ದು, ಇದು ಹಿಂದೂ – ಮುಸ್ಲಿಂ ಸಾಮರಸ್ಯಕ್ಕೆ ಕಾರಣವಾಗಿದೆ. ಆದರೆ, ಈಗ ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿರುವ ಕುರಾನ್ ಪಠಣವನ್ನು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

ರಥೋತ್ಸವಕ್ಕೂ ಮೊದಲು ಕುರಾನ್‌ ಪಠಣ ಬೇಡ ಎಂದು ಆಗ್ರಹಿಸಿ ಹಿಂದೂ ಸಘಟನೆಗಳು ಮಾರ್ಚ್‌ 28ಕ್ಕೆ ಬೇಲೂರಿನಲ್ಲಿ ಹೋರಾಟಕ್ಕೆ ಕರೆ ನೀಡಿವೆ. ಆ ಮೂಲಕ ಐತಿಹಾಸಿಕ ಬೇಲೂರು ಚನ್ನಕೇಶವ ರಥೋತ್ಸವದ ಮೇಲೆ ವಿವಾದದ ಕರಿನೆರಳು ಬಿದ್ದಿದೆ.

ಹೊಯ್ಸಳರ ಕಾಲದ ವಿಶ್ವ ವಿಖ್ಯಾತ ಐತಿಹಾಸಿಕ ಬೇಲೂರಿನ ಚನ್ನಕೇಶವಸ್ವಾಮಿ ದೇವಾಲಯ ತನ್ನ ವಾಸ್ತು ಶಿಲ್ಪ ಕಲೆಗಳ ಮೂಲಕ ಕೆಲವೇ ದಿನಗಳಲ್ಲಿ ವಿಶ್ವ ಪಾರಂಪರಿಕ ತಾಣವಾಗುವ ಹೊತ್ತಿನಲ್ಲಿ, ರಥೊತ್ಸವದ ವೇಳೆ ಪರಂಪರಾಗತವಾಗಿ ನಡೆಯುತ್ತಿದ್ದ ಕುರಾನ್ ಪಠಣಕ್ಕೆ ಹಿಂದೂ ಧರ್ಮ ವಿರೋಧ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಹಿಂದೂ ದೇವಾಲಯಗಳ ವ್ಯಾಪ್ತಿಯಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದು ಎಂಬ ವಿವಾದ ನಡೆದು, ಕೊನೆಗೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿದಿತ್ತು. ಕುರಾನ್ ಪಠಣದ ಮೂಲಕವೇ ಸಂಪ್ರದಾಯದಂತೆ ಜಾತ್ರೆ ನಡೆದಿತ್ತು.

ಎರಡು ದಿನಗಳ ಹಿಂದೆ ಹಾಸನದ ಡಾ. ಎನ್‌ ರಮೇಶ್ ರಚಿಸಿರುವ ‘ಬೇಲೂರಿನ ಶ್ರೀಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣ’ ಎಂಬ ಪುಸ್ತಕವನ್ನು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಬಿಡುಗಡೆ ಮಾಡಿದ್ದರು. ಈ ಪುಸ್ತಕದಲ್ಲಿ ‘1932ರಲ್ಲಿ ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡುವ ಸಂಪ್ರದಾಯವನ್ನು ದೇವಾಲಯದ ಮ್ಯಾನ್ಯುಯಲ್​ನಲ್ಲಿ ಸೇರಿಸುವ ಮೂಲಕ ಪರಂಪರೆಗೆ ಅಪಚಾರ ಎಸಗಲಾಗಿದೆ’ ಎಂಬುವುದನ್ನು ವಿವರಿಸಲಾಗಿದೆ.

“ಸೌಹಾರ್ದತೆ ಸರಿ, ಎಲ್ಲರೂ ಒಂದಾಗಿ ಇರಬೇಕು ಎಂಬುವುದು ಸರಿ. ಆದರೆ, ಚನ್ನಕೇಶವನ ಜಾತ್ರೆ ವೇಳೆ ಗೋವಿಂದ ನಾಮಸ್ಮರಣೆ ಮೊಳಗಬೇಕೇ ವಿನಃ ಕುರಾನ್ ಪಠಣ ಸರಿಯಲ್ಲ. ನಾವು ದರ್ಗಾಗೆ ಹೋಗಿ ಹನುಮಾನ್ ಚಾಲಿಸ ಹೇಳಲು ಸಾಧ್ಯವೇ? ಹಾಗೆಯೇ ಕೆಲವೇ ವರ್ಷಗಳ ಹಿಂದೆ ಸೇರಿಸಲಾಗಿರುವ ಇಂತಹ ಆಚರಣೆಯನ್ನು ಕೈಬಿಡಬೇಕು” ಎಂಬುದು ಪುಸ್ತಕದ ರಚನಕಾರ ಡಾ. ಎನ್‌ ರಮೇಶ್ ಅವರ ಒತ್ತಾಯವಾಗಿದೆ.

ಮುಂದುವರಿದು, ‘ಬೇಲೂರಿನ ಶ್ರೀಚನ್ನಕೇಶವನಿಗೆ ಬೇಕಿಲ್ಲ ಕುರಾನ್ ಪಠಣ’ ಎಂಬ ಪುಸ್ತಕ ಮತ್ತು ಕೆಲವು ದಾಖಲೆಗಳನ್ನು ಮುಂದಿಟ್ಟು ರಥೋತ್ಸವದ ವೇಳೆ ಕುರಾನ್ ಪಠಣೆ ನಿಲ್ಲಬೇಕು ಎಂದು ಹಿಂದೂ ಸಂಘಟನೆಗಳು ಹೋರಾಟಕ್ಕಿಳಿದಿವೆ. ಪುಸ್ತಕ ಬಿಡುಗಡೆಯಾದ ಬಳಿಕ ಮಾ. 26ರಂದು ಬೇಲೂರಿನಲ್ಲಿ ಹಿಂದೂ ಸಂಘಟನೆಗಳ ಮುಖಂಡರು ತಹಶೀಲ್ದಾರ್​ಗೆ ಮನವಿ ಸಲ್ಲಿಸಿ, ‘ಹಿಂದೂಗಳ ಭಾವನೆಗೆ ಧಕ್ಕೆ ತರುವ ಇಂತಹ ಆಚರಣೆ ಬೇಡ’ ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಒಟ್ಟಿನಲ್ಲಿ ಕಳೆದ ವರ್ಷ ವ್ಯಾಪಾರದ ವಿಚಾರಕ್ಕೆ ಆರಂಭವಾಗಿದ್ದ ವಿವಾದ ಮುಗಿದು ಈ ವರ್ಷ ಹೊಸ ವಿವಾದ ಹುಟ್ಟಿಕೊಂಡಿದೆ. ಹಿಂದೂ ದೇವರ ರಥೊತ್ಸವದ ವೇಳೆ ಕುರಾನ್​ ಪಠಣ ಸೌಹಾರ್ದತೆಯ ಸಂಕೇತ ಎಂದು ಹೇಳಲಾಗುತ್ತಿದ್ದ ವಿಚಾರವೇ ಈಗ ವಿವಾದದ ರೂಪ ಪಡೆದಿದ್ದು, ಈ ಆಚರಣೆಯನ್ನ ನಿಲ್ಲಿಸಲು ಆಗ್ರಹ ಕೇಳಿ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...