ಉಡುಪಿ | ಬಂಡವಾಳಶಾಹಿಗಳ ಬೆಂಬಲದಿಂದ ಪ್ಯಾಲೆಸ್ತೀನ್‌ನಲ್ಲಿ ನರಮೇಧ: ಸಾಹಿತಿ ರಘುನಂದನ

Date:

ಬಂಡವಾಳಶಾಹಿ ಪ್ರಪಂಚದ ಬೆಂಬಲದೊಂದಿಗೆ ಪ್ಯಾಲೆಸ್ತೀನ್ ಗಾಝಾದಲ್ಲಿ ಇಂದು ನಿರಂತರವಾಗಿ ನರಮೇಧ ಹಾಗೂ ಸಾಮೂಹಿಕ ಕಗ್ಗೊಲೆ ನಡೆಯುತ್ತಿದೆ. ಭಾರತ ಸ್ವಾತಂತ್ರ್ಯ ಪೂರ್ವದಿಂದಲೂ ಪ್ಯಾಲೆಸ್ತೀನ್‌ಗೆ ಬೆಂಬಲವಾಗಿ ನಿಂತು, ಅದಕ್ಕೆ ನ್ಯಾಯ ಸಿಗಬೇಕೆಂಬ ನಿಲುವನ್ನು ಹೊಂದಿದೆ. ಇಂದಿಗೂ ನಮ್ಮ ದೇಶದ ಅಧಿಕೃತ ನೀತಿ ಅದೇ ಆಗಿದೆ. ಆದರೆ ಅದನ್ನು ಈಗಿನ ಸರಕಾರ ಪಾಲಿಸುತ್ತಿಲ್ಲ. ಇಸ್ರೇಲ್‌ಗೆ ಸಶಸ್ತ್ರವನ್ನು ಕೂಡ ನಮ್ಮ ದೇಶ ನೀಡುತ್ತಿದೆ. ಉನ್ನತ ಮೌಲ್ಯವನ್ನು ಎತ್ತಿ ಹಿಡಿದಿದ್ದ ಭಾರತ ಇಂದು ಯಾವ ಸ್ಥಿತಿಗೆ ಬಂದಿದೆ ಎಂಬುದನ್ನು ಯೋಚಿಸಬೇಕಾಗಿದೆ ಎಂದು ಕವಿ, ಸಾಹಿತಿ ರಘುನಂದನ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ವತಿಯಿಂದ ಬುಧವಾರ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾದ ಮುದ್ದಣ ಸಾಹಿತ್ಯೋತ್ಸವದಲ್ಲಿ ಅವರು ‘ತುಯ್ತವೆಲ್ಲ ನವ್ಯದತ್ತ: ಅಂದತ್ತರ ಉಯ್ಯಾಲೆ ಮತ್ತು ಅದರ ಸುತ್ತ’ ಎಂಬ ಕೃತಿಗೆ ವಿ.ಎಂ.ಇನಾಂದರ್ ವಿಮರ್ಶಾ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು.

1005155443

ನಮ್ಮ ದೇಶದಲ್ಲಿ ಸಂವಿಧಾನಬದ್ಧವಾಗಿ ಹಾಗೂ ಶಾಂತಿಯುತವಾಗಿ ಪ್ರತಿಭಟಿಸಿದ ಅನೇಕ ಧೀಮಂತರನ್ನು ಜೈಲಿಗೆ ದೂಡಲಾಗಿದೆ. ಇವರೇ ಈ ದೇಶದ ನಿಜವಾದ ದೇಶಪ್ರೇಮಿಗಳು. 2020ರಲ್ಲಿ ದೆಹಲಿ ಗಲಭೆಯನ್ನು ಹುಟ್ಟುಹಾಕಿದ ಕೆಲವರನ್ನು ಜೈಲಿಗೆ ಹಾಕಲಾಗಿದೆ. ಅವರ ಮೇಲೂ ದೇಶದ್ರೋಹದ ಕೇಸುಗಳನ್ನು ದಾಖಲಿಸಲಾಗಿದೆ. ಅದೇ ರೀತಿ ಅನೇಕ ಆದಿವಾಸಿಗಳು ಬಡವರು ಇಂದು ಜೈಲಿನಲ್ಲಿದ್ದಾರೆ ಎಂದು ಅವರು ಖೇಧ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೋರ್ವ ಮುಖ ಅತಿಥಿಯಾಗಿ ಆಗಮಿಸಿದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಸಾಹಿತಿ ನರೇಂದ್ರ ರೈ ದೇರ್ಲ ‘ಯುವಜನತೆ ಮತ್ತು ಪರಿಸರ ಕಾಳಜಿ’ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ವಹಿಸಿದ್ದರು. ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ ನಾಯಕ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ, ಕಾಲೇಜಿನ ಉಪ ಪ್ರಾಂಶುಪಾಲ ಡಾ.ವಿಶ್ವನಾಥ ಪೈ ಎಂ. ಉಪಸ್ಥಿತರಿದ್ದರು. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ ಶೆಟ್ಟಿ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪುತ್ತಿ ವಸಂತ ಕುಮಾ‌ರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಅದಿತಿ ಪ್ರಶಸ್ತಿ ಪತ್ರ ವಾಚಿಸಿದರು. ಕನ್ನಡ ಉಪನ್ಯಾಸಕಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ವಂದಿಸಿದರು. ಕನ್ನಡ ಉಪನ್ಯಾಸಕ ರಾಘವೇಂದ್ರ ತುಂಗ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...