ರಹ್ಮಾನ್ ಕೊಲೆ | ಕೆಲಸ ಮಾಡಿಸಿ ವೇತನ ಕೊಡಬೇಕಾದವರು ಕೊಲೆ ಮಾಡಿದ್ದು ಹೇಡಿತನದ ಕೃತ್ಯ : ಸ್ಪೀಕರ್ ಖಾದರ್

Date:

ದುಷ್ಕರ್ಮಿಗಳಿಂದ ಇತ್ತೀಚೆಗೆ ಕೊಲೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಹಾಗೂ ಗಾಯಾಳು ಕಲಂದರ್ ಶಾಫಿಯವರ ಮನೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದರು.

ಘಟನೆಯ ಸಂದರ್ಭದಲ್ಲಿ ಹಜ್ ಯಾತ್ರೆಗೆ ತೆರಳಿದ್ದ ಯು ಟಿ ಖಾದರ್, ಮಂಗಳವಾರ ಮಂಗಳೂರಿಗೆ ಹಿಂದಿರುಗಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಕೊಳತ್ತಮಜಲುವಿಗೆ ಭೇಟಿ ನೀಡಿ, ರಹ್ಮಾನ್ ತಂದೆ ತಾಯಿ ಮತ್ತು ಕುಟುಂಬಸ್ಥರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಪೀಕರ್ ಖಾದರ್, “ಯುವಕ ಅಬ್ದುಲ್ ರಹ್ಮಾನ್ ಅವರಲ್ಲಿ ಕೆಲಸ ಮಾಡಿಸಿ ವೇತನ ಕೊಡಬೇಕಾದವರು ಕೊಲೆ ಮಾಡಿದ್ದು ಹೇಡಿತನದ ಕೃತ್ಯ. ರಹ್ಮಾನ್ ಹತ್ಯೆಯನ್ನು ಸರ್ವ ಜನಾಂಗದವರು ಖಂಡಿಸಿದ್ದಾರೆ. ಯಾವ ಸಮಾಜ ಕೂಡ ಒಪ್ಪದಂತಹ ಕೃತ್ಯ ನಡೆಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 11 at 5.31.40 PM

“ರಹ್ಮಾನ್ ಕುಟುಂಬಕ್ಕೆ ಪರಿಹಾರ ಕೊಡುವ ವಿಚಾರದ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಸಿಎಂ ಜೊತೆಗೆ ಚರ್ಚಿಸಲು ತಿಳಿಸಲಾಗಿದೆ. ನಾನು ಹಜ್ ಗೆ ಹೋಗುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ಬದಲಾವಣೆ ನಿರ್ಧಾರ ಆಗಿತ್ತು. ಹಜ್ ಯಾತ್ರೆಯಲ್ಲಿರುವಾಗ ಆದೇಶ ಬರುವಾಗ ತಡವಾಗಿತ್ತು. ಈ ಮಧ್ಯೆಯೇ ರಹ್ಮಾನ್ ಅವರ ಹತ್ಯೆಯಾಗಿರುವುದು ನೋವಿನ ಸಂಗತಿ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬಂಟ್ವಾಳ | ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಸಂಚಾರ ನಿಷೇಧ: ಆದೇಶ ಹೊರಡಿಸಿದ ತಹಶೀಲ್ದಾರ್

ಈ ಸಂದರ್ಭದಲ್ಲಿ ಕಣಚೂರು ಮೋನು, ನಿವೃತ್ತ ಪೊಲೀಸ್ ಅಧಿಕಾರಿ ಜಿ ಎ ಬಾವಾ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...