ರಾಯಚೂರು | 5 ವರ್ಷಗಳಲ್ಲಿ 50 ಸಾವಿರ ಸರ್ಕಾರಿ ನೌಕರಿ ಭರ್ತಿ; ಸಚಿವ ಶರಣಪ್ರಕಾಶ ಪಾಟೀಲ್ ಭರವಸೆ

Date:

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ 07 ಜಿಲ್ಲೆಗಳಿಗೆ ವಿಶೇಷ ಪ್ರಾತಿನಿಧ್ಯ ನೀಡಿ, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಸರ್ಕಾರಿ ನೌಕರರ ಭರ್ತಿ ಮಾಡಿ, ಕೆಕೆ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸಲು ಪ್ರಯತ್ನ ಮಾಡಲಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಹೇಳಿದರು.

ಸಿಂಧನೂರು ನಗರದ ಆರ್‌ಜಿಎಂ ಶಾಲಾ ಮೈದಾನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 371(ಜೆ) ಕಲಂಗೆ ದಶಕದ ಸಂಭ್ರಮದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“2012ರಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ 371(ಜೆ) ಕಲಂಗೆ ತಿದ್ದುಪಡಿ ತಂದು ಕಾನೂನು ಜಾರಿಗೊಳಿಸಿ ಈ ಭಾಗಕ್ಕೆ ವಿಶೇಷ ಪ್ರಾತಿನಿಧ್ಯ ನೀಡಲಾಯಿತು. ಸರ್ಕಾರಿ ನೌಕರಿ ಭರ್ತಿಯಲ್ಲೂ ವಿಶೇಷ ಪ್ರಾತಿನಿಧ್ಯ ನೀಡಲಾಗಿದೆ. ಎಂಜಿನಿಯರ್, ಮೆಡಿಕಲ್ ಕಾಲೇಜು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸೌಕರ್ಯ ಕಲ್ಪಿಸಿ ಯುವಸಮೂಹದ ಬದುಕು ಹಸನು ಮಾಡಲು ದಿಟ್ಟ ಹೆಜ್ಜೆ ಇಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 2013 ರಿಂದ 18 ರವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಕೆಕೆ ಭಾಗಕ್ಕೆ 30 ಸಾವಿರ ನೌಕರಿಗಳನ್ನು ಕಲ್ಪಿಸಿಕೊಡಲಾಗಿತ್ತು. ನಂತರ ಬಂದ ಬಿಜೆಪಿ ಸರ್ಕಾರದ ನ್ಯೂನ್ಯತೆಗಳಿಂದ ಯಾವುದೇ ಹುದ್ದೆ ಭರ್ತಿಯಾಗಿಲ್ಲ. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು” ಎಂದು ಭರವಸೆ ನೀಡಿದರು.

“ಸ್ವಾತಂತ್ರ್ಯ ದಿನಾಚರಣೆ ನಿಮಿತ್ಯ ಸಿಂಧನೂರಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳು ಉತ್ತಮವಾದ ವಿಧ್ಯಾಭ್ಯಾಸ ಮಾಡುವ ಮೂಲಕ 371(ಜೆ) ಕಲಂನ ಸೌಲಭ್ಯ ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕುʼ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, “ಗಾಂಧಿಜಿ ನೇತೃತ್ವದಲ್ಲಿ ಸತ್ಯ, ಅಹಿಂಸೆ ಮತ್ತು ಶಿಸ್ತಿನ ಚಳವಳಿ ನಡೆಸುವ ಮೂಲಕ ಭಾರತ ಸ್ವಾತಂತ್ರ್ಯ ಪಡೆಯಿತು. ಸ್ವಾತಂತ್ರ್ಯ ಸಂಗ್ರಾಮಗಳನ್ನು ಮೆಲುಕು ಹಾಕುತ್ತಾ, ಯುವ ಪೀಳಿಗೆ ಸಾಮಾಜಿಕ, ರಾಜಕೀಯ, ಕೃಷಿ ಸೇರಿದಂತೆ ಇನ್ನಿತರ ಬದಲಾವಣೆಯ ಕಡೆ ಸಾಗುವ ಅನಿವಾರ್ಯತೆ ಇದೆ” ಎಂದರು.

“ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ದೇಶದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ 03 ತಿಂಗಳಲ್ಲಿ ಎಲ್ಲ ಗ್ಯಾರಂಟಿಗಳನ್ನು ಜಾರಿಮಾಡುವುದರೊಂದಿಗೆ ರಾಜ್ಯದ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ. ವಿದ್ಯಾರ್ಥಿಗಳು ದೇಶದ ಸ್ವಾಭಿಮಾನದ ಕಿಚ್ಚನ್ನು ಮೈಗೂಡಿಸಿಕೊಂಡು ಸುಭದ್ರ ದೇಶ ಕಟ್ಟಲು ಮುಂದಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪಡಿತರ, ಮನರೇಗಾ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಒತ್ತಾಯ

ಈ ಸಂದರ್ಭದಲ್ಲಿ ಶಾಸಕ ಆರ್ ಬಸನಗೌಡ ತುರವಿಹಾಳ, ವಿಧಾನಪರಿಷತ್ ಸದಸ್ಯ ಶರಣೇಗೌಡ ಬಯ್ಯಾಪುರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ ದೊಡ್ಡಬಸವರಾಜ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕರಾಂ ಪಾಂಡ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ನಿಖಿಲ್, ಲಿಂಗಸೂಗುರು ಸಹಾಯಕ ಆಯುಕ್ತ ಶಿಂಧೆ ಅವಿನಾಶ ಸೇರಿದಂತೆ ಹಲವು ಚುನಾಯಿತ ಪ್ರತಿನಿಧಿಗಳು, ತಾಲೂಕು ಮಟ್ಟದ ಹಲವು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...