ರಾಯಚೂರು | ₹58 ಲಕ್ಷ ಸೈಬರ್ ವಂಚನೆ ಪ್ರಕರಣ; ₹18.29 ಲಕ್ಷ ರಿಕವರಿ

Date:

ಐದು ವರ್ಷಗಳ ಹಿಂದೆ 2020ರ ಏಪ್ರಿಲ್‌ನಲ್ಲಿ ನಡೆದ ಸೈಬರ್‌ ವಂಚನೆ ಪ್ರಕರಣವೊಂದನ್ನು ರಾಯಚೂರು ಜಿಲ್ಲಾ ಪೊಲೀಸರು ಭೇದಿಸಿದ್ದು, ಸುಮಾರು ₹18.29 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.

ಏನಿದು ಪ್ರಕರಣ: ರಾಯಚೂರಿನ ವಿದ್ಯಾನಗರದ ಲಕ್ಷ್ಮೀಕಾಂತ ಹಾಗೂ ಅವನ ಸಹೋದರ ಸಂಬಂಧಿ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ “Dread MDFS” ಎಂಬ ಲಿಂಕ್‌ ಮೂಲಕ ಹಣ ಹೂಡಿಕೆ ಮಾಡಿದರೆ ಲಾಭಾಂಶ ಸಿಗುತ್ತದೆ ಎಂಬ ಜಾಹೀರಾತಿಗೆ ಮರುಳಾಗಿ 2020ರ ಆಗಸ್ಟ್‌ 7ರಿಂದ 2021ರ ಏಪ್ರಿಲ್‌ 7ರ ವರೆಗೆ ಹಂತ ಹಂತವಾಗಿ ಒಟ್ಟು ₹58,57,450 ಹೂಡಿಕೆ ಮಾಡಿದರು. ಮೊದಲಿನ ದಿನಗಳಲ್ಲಿ ಲಾಭಾಂಶ ಸಿಗಬಹುದೆಂಬ ನಂಬಿಕೆಯಿಂದ ಹಣ ವರ್ಗಾವಣೆ ಮಾಡಿದ ಇವರಿಗೆ ಅನೇಕ ತಿಂಗಳುಗಳ ಕಾಲ ಯಾವುದೇ ಲಾಭಾಂಶ ಬಾರದಿದ್ದಾಗ ಸಂಶಯ ವ್ಯಕ್ತವಾಗಿ, ತಾವು ಮೋಸಕ್ಕೆ ಒಳಗಾಗಿರುವುದು ಅರಿವಿಗೆ ಬರುತ್ತದೆ.

ಇದರಿಂದ ಆಘಾತಕ್ಕೊಳಗಾದ ಲಕ್ಷ್ಮೀಕಾಂತ ಮತ್ತು ಸಂಬಂಧಿ 2021ರ ಅಕ್ಟೋಬರ್‌ 10ರಂದು ರಾಯಚೂರಿನ ಸೆನ್‌ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ. ಐದು ವರ್ಷಗಳ ಕಾಲ ವಿಸ್ತೃತ ತನಿಖೆ ನಡೆಸಿದ ಬಳಿಕ, 2025ರ ಅಕ್ಟೋಬರ್‌ 10ರಂದು ಆರೋಪಿಗಳ ಪತ್ತೆ ಮಾಡಿ, ವಿವಿಧ ಬ್ಯಾಂಕ್ ಖಾತೆಗಳಲ್ಲಿ ಜಮಾ ಆಗಿದ್ದ ₹18 ಲಕ್ಷವನ್ನು ವಶಪಡಿಸಿಕೊಂಡು ಸಂತ್ರಸ್ತರಿಗೆ ಹಿಂತಿರುಗಿಸಿದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಮಾಧ್ಯಮ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 14 at 3.53.44 PM

ಇದನ್ನೂ ಓದಿ: ರಾಯಚೂರು | ಕಾರು-ಬೈಕ್ ಮುಖಾಮುಖಿ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಾಯ

ತನಿಖೆಯಲ್ಲಿ, ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಬತುರುಸ್ಮಾನ್ ಎಂಬಾತ ಕತೆಯ ಮುಖ್ಯ ಸುಳಿವುಧಾರಿಯೆಂದು ತಿಳಿದುಬಂದಿದೆ. ಆತ ತನ್ನ ಸಂಬಂಧಿಕರ ವಿವಿಧ ಬ್ಯಾಂಕ್ ಖಾತೆಗಳನ್ನು ಬಳಸಿಕೊಂಡು ಹಣ ದುರುಪಯೋಗ ಮಾಡಿಕೊಂಡಿದ್ದ. ಆದರೆ ಆತ ಈಗಾಗಲೇ ಮೃತಪಟ್ಟಿರುವುದರಿಂದ, ಆತನ ವಿರುದ್ಧ ಅಬೆಟೆಡ್ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಎಸ್‌ಪಿ ಪುಟ್ಟಮಾದಯ್ಯ ಸ್ಪಷ್ಟಪಡಿಸಿದರು.

ಈ ಪ್ರಕರಣದ ತನಿಖೆಯಲ್ಲಿ ಸೈಬರ್‌ ಕ್ರೈಮ್ ಠಾಣೆಯ ಡಿಐಎಸ್ಪಿ ವೆಂಕಟೇಶ ಹೊಗಿಬಂಡಿ ಹಾಗೂ ಸಹಾಯಕ ತನಿಖಾಧಿಕಾರಿ ರಾಜಪ್ಪ ಮತ್ತು ಅವರ ತಂಡ ಮಹತ್ವದ ಪಾತ್ರವಹಿಸಿದ್ದು, ಅವರ ಸೇವೆಯನ್ನು ಎಸ್‌ಪಿ ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...