ರಾಯಚೂರು | ಮಹಿಳೆಗೆ ಸಂಸಾರ ಮತ್ತು ಸಮಾಜವನ್ನು ಸರಿದೂಗಿಸಿಕೊಂಡು ಹೋಗುವ ಶಕ್ತಿ ಇದೆ: ಮುಕ್ತಾಂಬ ಬಸವರಾಜ

Date:

“ಮಹಿಳೆಯರಲ್ಲಿ ಸಂಸಾರ ಮತ್ತು ಸಮಾಜವನ್ನು ಸರಿದೂಗಿಸಿಕೊಂಡು ಹೋಗುವ ಶಕ್ತಿ ಇರುವುದರಿಂದ ಹುಟ್ಟಿದ ಮತ್ತು ಮೆಟ್ಟಿದ ಮನೆಯು ಪ್ರೀತಿಯಿಂದ ಬೆಳೆಯುತ್ತದೆ” ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮುಕ್ತಾಂಬ ಬಸವರಾಜ ಹೇಳಿದರು.

ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರಥಮ ಮಹಿಳಾ ಸಮಾವೇಶ ಹಾಗೂ ಸಾಧಕರಿಗೆ ಅಕ್ಕ ಪ್ರಶಸ್ತಿ ಪ್ರದಾನ ಮತ್ತು ತಾಲೂಕ ಘಟಕಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಮಹಿಳೆಯರಲ್ಲಿ ಶೇ.100 ಸಹನೆ ಇದೆ. ಜೊತೆಗೆ ಯಾವುದೇ ಕೆಲಸವನ್ನು ನೀಡಿದರೂ ಹೊಣೆಗಾರಿಕೆ ವಹಿಸಿಕೊಂಡು ನಿರ್ವಹಿಸಿಕೊಂಡು ಹೋಗುವ ಮೂಲಕ ಸ್ತ್ರೀಶಕ್ತಿಯಾಗಿದ್ದಾಳೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ನ್ಯಾಯಯುತವಾಗಿ ಬದುಕದೇ ಇದ್ದರೆ, ನಾವು ಬೌದ್ಧಿಕ ಜೀವನ ನಡೆಸಲಿಕ್ಕೆ ಸಾಧ್ಯವಿಲ್ಲ. ಆಧ್ಯಾತ್ಮದಲ್ಲಿ ಸಂಸ್ಕಾರ, ನಡೆ ಪರಂಪರೆಯನ್ನು ತಾಯಿ ಮಕ್ಕಳಿಗೆ ಕಟ್ಟುನಿಟ್ಟಾಗಿ ಕಲಿಸಿಕೊಡುತ್ತಾಳೆ. ಅದು ಜೀವನದ ಚೌಕಟ್ಟಾಗಿ ನಿರ್ಮಾಣವಾಗುತ್ತದೆ. ಅಂತಹ ಮಕ್ಕಳು ಕುಟುಂಬಕ್ಕಲ್ಲದೆ ಸಮಾಜದಲ್ಲಿಯೂ ನಿಲ್ಲುತ್ತಾರೆ” ಎಂದು ತಿಳಿಸಿದರು.

ಶಾಸಕ ಶಿವರಾಜ ಪಾಟೀಲ್ ಮಾತನಾಡಿ, “ಮುಂಬರುವ 2028-2029ರಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಾಗಿ ಭಾಗವಹಿಸಿ ಚುನಾಯಿತರಾಗಿ ಬರಬೇಕು. ಮಹಿಳೆಯರು ಧ್ವನಿ ಗಟ್ಟಿಯಾಗಿರುತ್ತದೆ. ಮಹಿಳೆಯರು ಹೋರಾಟಕ್ಕೆ ಬಲ ಸಿಕ್ಕಂತಾಗಲಿ. 70 ವರ್ಷಗಳ ಹೋರಾಟಕ್ಕೆ ಯಶಸ್ಸು ಸಿಗಲಿ. ಅಕ್ಕಮಹಾದೇವಿಯ ಸಂಸ್ಕೃತಿ, ಕಿತ್ತೂರು ಚೆನ್ನಮ್ಮಳ ದೈರ್ಯ ಎಲ್ಲರಿಗೂ ಶ್ರೀಶೈಲ ಮಲ್ಲಿಕಾರ್ಜುನ ಕರುಣಿಸಲಿ” ಎಂದು ಆಶಿಸಿದರು.

ವಿವಿಧ ತಾಲೂಕಿನಲ್ಲಿ ರಂಗೋಲಿ ಹಾಗೂ ವಚನ ಗಾಯನ ಸ್ಪರ್ಧೆ ನಡೆಸಿದ್ದು, ವಿಜೇತರಿಗೆ ಪ್ರಥಮ ಬಹುಮಾನ 5 ಸಾವಿರ, ದ್ವಿತೀಯ ಬಹುಮಾನ 3 ಸಾವಿರ, ತೃತೀಯ ಬಹುಮಾನ 1 ಸಾವಿರ ಬಹುಮಾನವನ್ನು ಶಾಸಕ ಶಿವರಾಜ ಪಾಟೀಲ್ ವಿತರಣೆ ಮಾಡಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಡಾ. ವಸುಂದರ ಪಾಟೀಲ್, ಗುರಮ್ಮ, ದೀಪಾಶ್ರೀ ಪಾಟೀಲ್, ಡಾ. ಸರ್ವ ಮಂಗಳ ಸಕ್ರಿ, ಶಕುಂತಲಮ್ಮ, ಆರ್.ಕೆ. ಕಮಲಮ್ಮ, ಲಕ್ಷ್ಮೀ ಮಾರೇಗೌಡ, ಶಕುಂತಲಾ, ಚಂದ್ರಕಲಾ, ಚನ್ನಮ್ಮ ಇವರಿಗೆ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಅವರು ಅಕ್ಕ ಪ್ರಶಸ್ತಿ ಪ್ರದಾನ ಮಾಡಿದರು.

ತುಮಕೂರು ವಿಶ್ವವಿದ್ಯಾಲಯ ವಿಶ್ರಾಂತ ಉಪನ್ಯಾಸಕಿ ಡಾ. ಮೀನಾಕ್ಷಿ ಕಂಡಿಮಠ, ಎಸ್‌ಎಸ್‌ಆರ್‌ಜಿ ಮಹಿಳಾ ಮಹಾ ವಿದ್ಯಾಲಯದ ಉಪನ್ಯಾಸಕಿ ಡಾ. ರಾಜೇಶ್ವರಿ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯರು, ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾದ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪೂರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಡಾ. ರೇಖಾ ಕೇಶವರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ವಿಜಯ ರಾಜೇಶ್ವರಿ ಗೋಪಿಶೆಟ್ಟಿ, ಸುಲೋಚನಮ್ಮ ಆಲ್ಕೂರು, ಪ್ರತಿಭಾ ಗೋನಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...