ರಾಯಚೂರು | ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಎಎಪಿ ಖಂಡನೆ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ರಾಯಚೂರು ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ದೇಶದಲ್ಲಿ ಲೋಕತಂತ್ರ ಹತ್ಯೆ ಮಾಡುವ ಕೆಲಸವಾಗಿದ್ದು, ಸಂವಿಧಾನದ ನಿಯಮವನ್ನು ಗಾಳಿಗೆ ತೂರಿ ಇಂದಿನ ಬಿಜೆಪಿ ಕೇಂದ್ರ ಸರ್ಕಾರ ದುರಾಡಳಿತ ಮಾಡುತ್ತಿರುವುದು ಖಂಡನೀಯ” ಎಂದರು.

“ಲೋಕಸಭಾ ಚುನಾವಣೆ ಘೋಷಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಕೇಂದ್ರ ಸರ್ಕಾರವು ಅರವಿಂದ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡುವ ಸಂದರ್ಭದಲ್ಲಿ ಯಾವುದೇ ತರಹದ ಆಧಾರಗಳಿಲ್ಲದೆ ಅರವಿಂದ್ ಕೆಜ್ರಿವಾಲ್ ಅವರನ್ನು ಬಂಧಿಸಿದ್ದು, ಲೋಕಸಭಾ ಚುನಾವಣೆಗೆ ಎದುರಾಳಿಗಳು ಇಲ್ಲದಂತೆ ಮಾಡಲು ಕೇಂದ್ರ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಮ್ ಆದ್ಮಿ ಪಕ್ಷ ದೇಶದಲ್ಲಿ ಎಲ್ಲ ಕಡೆ ಬೆಳವಣಿಗೆ ಮತ್ತು ಅಧಿಕಾರಕ್ಕೆ ಬರುತ್ತಿರುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಹಿಸಲಾಗುತ್ತಿಲ್ಲ. ಬಿಜೆಪಿ ಕೇಂದ್ರ ಸರ್ಕಾರವು ಸಿಬಿಐ ಮತ್ತು ಇಡಿ ಈ ಎರಡು ಇಲಾಖೆಯವರನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳನ್ನು ಬಂಧಿಸಿ ಜೈಲಿಗೆ
ಹಾಕುತ್ತಿದ್ದಾರೆ. ದೇಶದಲ್ಲಿ ಎಲ್ಲಿ ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡುತ್ತಾರೆನ್ನುವ ಭಯದ ವಾತಾವರಣ ಇದೆ. ದೇಶದಲ್ಲಿ ಹಿಟ್ಲರ್ ದೂರಾಡಳಿತ ಮಾಡುತ್ತಿರುವ ಮೋದಿ ಸರ್ಕಾರವು ದೇಶಕ್ಕೆ ಯಾವ ಕೊಡುಗೆಗಳನ್ನು ಕೊಟ್ಟಿದ್ದಾರೆಂಬುದು ಜನಸಾಮಾನ್ಯರಿಗೆ ಗೊತ್ತಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಬಂಧನದಿಂದ ಬಿಡುಗಡೆಗೊಳಿಸಬೇಕು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಅವರಿಗೆ ಸೂಕ್ತವಾದ ನ್ಯಾಯ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೇಸಿಗೆಯಲ್ಲಿ ಮೃಗಾಲಯದ ಪ್ರಾಣಿಗಳಿಗೆ ‘ಐಸ್‌’ನಂತೆ ತಂಪಾದ ಉಪಚಾರ

ಜಿಲ್ಲಾಧ್ಯಕ್ಷ ಡಿ ವಿರೇಶ ಕುಮಾರ, ಆನಂದ, ಸೈಯದ್ ನೂಸ್ರತ್ ಅಲಿ, ಮಕ್ಬೂಲ್ ಪಾಷಾ, ಶೇಖ್ ಖಾದರ್ ಪಾಷಾ, ರೂಫ್, ಸುನಿಲ್, ವೀರೇಶ, ಸಂಗಪ್ಪ, ಸೈಯದ್ ಬದ್ರಿ, ಡಾ.ಮಜೀದ್ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...