ರಾಯಚೂರು | ಕುಡಿಯುವ ನೀರಿಗೆ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

Date:

ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಹಲವು ಬಾರಿ ಹೋರಾಟ ನಡೆಸಿದರೂ ಪಂಚಾಯತಿ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರಾಯಚೂರಿನ ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

ಗ್ರಾಮದಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು ಹಲವು ಬಾರಿ ಪಂಚಾಯತಿ ಗಮನಕ್ಕೆ ತಂದಿದ್ದರೂ ಇಂದು ನಾಳೆಯೆಂದು ಆಶ್ವಾಸನೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಇದರಿಂದ ಬೇಸತ್ತು ಗ್ರಾಮಸ್ಥರು ಪಂಚಾಯತ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಕೆಲ ಕಾಲ ಪರಿಸ್ಥಿತಿ ಬಿಗಡಾಯಿಸಿತ್ತು.

ಗ್ರಾಮದ ಪಕ್ಕದಲ್ಲಿ ಕೃಷ್ಣಾ ನದಿ ಹರಿದರೂ ಚಿಂಚೋಡಿ, ಬುಂಕಲದೊಡ್ಡಿ, ಲಿಂಗದಹಳ್ಳಿ, ಯರಗುಡ್ಡ ಗ್ರಾಮದ ಜನರಿಗೆ ನೀರು ಸಿಗುತ್ತಿಲ್ಲ. ಅಲ್ಲಿ ಇಲ್ಲಿ ಬೋರ್‌ವೆಲ್ ನೀರು ತಂದು ಕುಡಿಯುವುದಾಗಿದೆ. ಶುದ್ಧ ಕುಡಿಯುವ ನೀರಿಲ್ಲದೆ ಹಲವಾರು ಜನ ರೋಗಗಳಿಗೆ ತುತ್ತಾಗಿದ್ದಾರೆ ಎಂದು ‌ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.

ಮಧ್ಯಾಹ್ನ ವೇಳೆ ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ತಾಲೂಕು ಪಂಚಾಯತಿ ಅಧಿಕಾರಿಗಳು ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ?:ರಾಯಚೂರು | ರಕ್ತದಾನಕ್ಕಿಂತ ಶ್ರೇಷ್ಠದಾನ ಇನ್ನೊಂದಿಲ್ಲ: ಲಾಲ್ ಪೀರ್

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ, ಶಬ್ಬೀರ್ ಜಾಲಹಳ್ಳಿ, ತಾಲೂಕು ಅಧ್ಯಕ್ಷ ಹನುಮಂತ ಗುರಿಕಾರ, ಬುಂಕಲದೊಡ್ಡಿ ಗ್ರಾಮ ಘಟಕ ಅಧ್ಯಕ್ಷ ಹನುಮಂತ ಬುಂಕಲದೊಡ್ಡಿ, ಬಸವರಾಜ ಲಿಂಗದಹಳ್ಳಿ, ಚಂದ್ರು ಲಿಂಗದಹಳ್ಳಿ, ಗ್ರಾಮಸ್ಥರು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...