ರಾಯಚೂರು | ಕುಡಿಯುವ ನೀರಿನ ಕೊರತೆ ನೀಗಿಸಲು ಕ್ರಮ: ಪೌರಾಡಳಿತ ಸಚಿವ

Date:

ರಾಯಚೂರು ಮತ್ತು ಸಿಂಧನೂರು ನಗರಸಭೆ ಸೇರಿದಂತೆ ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಿನ ಸಮಸ್ಯೆ ಪರಿಹರಿಸಲು ಶೀಘ್ರದಲ್ಲಿ ಪೌರಾಡಳಿತ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ ಎಲ್ಲ ಅಧಿಕಾರಿಗಳ ಸಭೆ ಆಯೋಜನೆ ಮಾಡುತ್ತೇವೆ ಎಂದು ಪೌರಾಡಳಿತ ಸಚಿವ ರಹೀಂಖಾನ್ ಹೇಳಿದ್ದಾರೆ.

ರಾಯಚೂರಿನಲ್ಲಿ ನಗರ ಸ್ಥಳೀಯ ಸಂಸ್ಥೆಗಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಜಿಲ್ಲೆ ಯಾವುದೇ ನಗರ, ಪಟ್ಟಣಗಳಲ್ಲಿ ನಿತ್ಯವೂ ನೀರು ಪೂರೈಕೆ ಮಾಡುತ್ತಿಲ್ಲ. ಲಭ್ಯವಿರುವ ನೀರಿನ ಆಧಾರದ ಮೇಲೆ ಬೇಸಿಗೆ ದಿನಗಳು ಗಂಭೀರವಾಗುವ ಮುನ್ಸೂಚನೆಗಳಿದ್ದು ಎಲ್ಲ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಬೇಕು” ಎಂದು ಸೂಚಿಸಿದರು.

“ಹಟ್ಟಿ ಪಟ್ಟಣ ಪಂಚಾಯ್ತಿಯಿಂದ ಜಲ ಜೀವನ ಮಿಷನ್ ಕಾಮಗಾರಿ ವ್ಯಾಪ್ತಿಗೆ ಒಳಪಟ್ಟಿದ್ದು, ಬಹುಗ್ರಾಮ ಯೋಜನೆಯಡಿ ಯೋಜನೆ ರೂಪಿಸಲಾಗಿದೆ. ಆದರೂ ನೀರು ಪೂರೈಕೆ ಸಾಧ್ಯವಾಗಿಲ್ಲ. ಕೂಡಲೇ ಸಮಸ್ಯೆಯಾತ್ಮಕ ವಾರ್ಡಗಳಿಗೆ ಟ್ಯಾಂಕರ್ ಮೂಲಕ ನೀರುಪೂರೈಸುವಂತೆ ಸೂಚಸಿದರು. ಕವಿತಾಳ ಗ್ರಾಮದಲ್ಲಿ ಎರಡು ದಿನಕ್ಕೊಮ್ಮೆ ನೀರು ಹರಿಸಲಾಗುತ್ತಿದೆ. ೧೬ ವಾರ್ಡಗಳಿಗೆ ೨ ತಿಂಗಳಿಗೆ ಆಗುವಷ್ಟು ನೀರು ಸಂಗ್ರಹವಿದೆ ಎಂದು ಮುಖ್ಯಾಧಿಕಾರಿಗಳು ತಿಳಿಸಿದರು. ಲಿಂಗಸೂಗೂರು ಪುರಸಭೆಯಲ್ಲ ಎನ್‌ಆರ್‌ಬಿಸಿ ನೀರಿನ ಮೇಲೆ ಅವಲಂಬಿತವಾಗಿದೆ ೨ ತಿಂಗಳಿಗೆ ಆಗುವಷ್ಟು ನೀರು ಸಂಗ್ರಹವಿದ್ದು, ಮೂರು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಮಾನವಿ ಪುರಸಭೆಯಿಂದ ೩ ದಿನಕೊಮ್ಮೆ ನೀರು ಸರಬರಾಜುಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ಮಾತನಾಡಿ, “ಕಳೆದ ಏಳು ವರ್ಷಗಳಿಂದ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿದೆ. 85 ಕೋಟಿ ರೂ. ವೆಚ್ಚ ಮಾಡಲಾಗಿದ್ದರೂ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿ ಕಾಮಗಾರಿ ಅಪೂರ್ಣವಾಗಿ ಉಳಿಸಿದೆ” ಎಂದ ಬೇಸರ ವ್ಯಕ್ತಪಡಿಸಿದರು.

“ಕಾಮಗಾರಿ ನಿರ್ಲಕ್ಷ್ಯಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಪೌರಾಡಳಿತ ಸಚಿವರು ಸೂಚಿಸಿದರು.

“ರಾಯಚೂರು ನಗರಸಭೆಯಿಂದ ಎರಡು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. 340 ಬೊರವೆಲ್‌ಗಳಿದ್ದು ದುರಸ್ತಿಗೆ ಕ್ರಿಯಾಯೋಜನೆ ಸಲ್ಲಿಸಲಾಗಿದೆ. ಎಂದು ಪೌರಾಯುಕ್ತ ಗುರುಸಿದ್ದಯ್ಯ ಹೀರೆಮಠ ಹೇಳಿದರು.

“24 ಗಂಟೆ ಕುಡಿಯುವ ನೀರಿನ ಯೋಜನೆ ಅಪೂರ್ಣವಾಗಿ ನಿಂತಿದೆ. ಗುತ್ತಿಗೆದಾರರು ಕೋರ್ಟ್‌ಗೆ ಹೋಗಿದ್ದಾರೆ. ಇನ್ನೂ ಆರು ಟ್ಯಾಂಕ್‌ಗಳಿಗೆ ನೀರು ಸಂಪರ್ಕ ನೀಡಲಾಗಿದೆ” ಎಂದು ಅವರು ತಿಳಿಸಿದರು.

“ಚಿಕ್ಕಸೂಗೂರು ಮತ್ತು ರಾಂಪೂರು ಜಲಾಶಯದಿಂದ ನೀರು ಪೂರೈಕೆ ಸಮಸ್ಯೆಯಾಗದಂತೆ ಮೋಟಾರ್, ಟಿಸಿ ಖರೀದಿಸಲು 5 ಕೋಟಿ ರೂ. ಅನುದಾನವನ್ನು ಕೆಕೆಆರ್‌ಡಿಬಿಯಿಂದ ಅನುದಾನ ಒದಗಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದರು.

ಸಭೆಯಲ್ಲಿ ಮಾನವಿ ಶಾಸಕ ಹಂಪಯ್ಯನಾಯಕ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹಾಗೂ ಯೋಜನಾಧಿಕಾರಿ ಜಗಧೀಶ ಸೇರಿದಂತೆ ನಗರ ಸ್ಥಳೀಯ ಸಂಸ್ಥೇಗಳ ಮುಖ್ಯಾಧಿಕಾರಿಗಳು, ಸಿಬ್ಬಂದಿಗಳಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...