ರಾಯಚೂರು | ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು!

Date:


ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ-2 ಕಚೇರಿ ಸಿಂಧನೂರಿಗೆ ಸ್ಥಳಾಂತರ ಮಾಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೃಷಿ ಇಲಾಖೆಯವರಿಗೆ ಪತ್ರ ಬರೆದಿದ್ದಾರೆ. ತಾಲೂಕಿನ ರೈತರಿಗೆ ಹಾಗೂ ಲಿಂಗಸುಗೂರು ಜಿಲ್ಲೆಯಾಗಬೇಕೆಂಬ ಕನಸಿಗೆ ತಣ್ಣೀರೆರಚಿದಂತಾಗಿದ್ದು, ಸಾರ್ವಜನಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ.

ಇಷ್ಟೆಲ್ಲ ಬೆಳವಣಿಗೆಯಾಗಿದ್ದರೂ ಲಿಂಗಸುಗೂರು ತಾಲೂಕಿನ ಜನಪ್ರತಿನಿಧಿಗಳು ಮಾತ್ರ ಇದ್ಯಾವುದೂ ತಮಗೆ ಸಂಬಂದವಿಲ್ಲದಂತೆ ಕಣ್ಮುಚ್ಚಿಕೊಂಡು ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬ್ರಿಟಿಷರ ಕಾಲದಲ್ಲಿ ಜಿಲ್ಲೆಯಾಗಿದ್ದ ಛಾವಣಿ, ಸ್ವಾತ್ರಂತ್ಯದ ನಂತರ ಜಿಲ್ಲಾ ಕೇಂದ್ರವನ್ನು ರಾಯಚೂರಿಗೆ ಸ್ಥಳಾಂತರ ಮಾಡಿ ಉಪ ವಿಭಾಗವಾಗಿ ಮಾರ್ಪಡು ಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೆ ಹಲವಾರು ಕಚೇರಿಗಳನ್ನು ಸಿಂಧನೂರಿಗೆ ಸ್ಥಳಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಆರೋಪಗಳು ಚಾಲ್ತಿಯಲ್ಲಿರುವಾಗಲೇ, ಈಗ ಗಾಯದ ಮೇಲೆ ಬರೆ ಎಂಬಂತೆ ಕೃಷಿ ಉಪ ನಿರ್ದೇಶಕರ-2 ಕಚೇರಿಯ ಸ್ಥಳಾಂತರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಕೃಷಿ ಇಲಾಖೆಯವರು ಹುದ್ದೆಗಳ ಸಹಿತ ಕಚೇರಿಯನ್ನು ಸ್ಥಳಾಂತರ ಮಾಡಬೇಕೆಂದು ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳು!

ಸಿಂಧನೂರು ನಗರ ಲಿಂಗಸುಗೂರು ನಗರದಿಂದ ಕೇವಲ 55 ಕಿ.ಮೀ ದೂರದಲ್ಲಿದೆ. ಆದರೆ 90 ಕಿ.ಮೀ. ದೂರವಿದೆ ಎಂದು ಅಧಿಕಾರಿಗಳು ಸುಳ್ಳು ಮಾಹಿತಿಯನ್ನು ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೇ, ಮಸ್ಕಿ ತಾಲೂಕು ಘೋಷಣೆ ಆಗುವ ಮುಂಚೆ ಲಿಂಗಸುಗೂರು ತಾಲೂಕಿನ ಪಟ್ಟಣವಾಗಿತ್ತು. ಮಸ್ಕಿಯ ಕೆಲವು ಕಚೇರಿಗಳು ಲಿಂಗಸುಗೂರಿನಿಂದ ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿಯೂ ಕೃಷಿ ಇಲಾಖೆ ಕಚೇರಿ ಕೂಡ ಲಿಂಗಸುಗೂರ ಕಚೇರಿಯಿಂದ ಕಾರ್ಯ ನಿರ್ವಹಿಸುತ್ತಿವೆ.

ಲಿಂಗಸುಗೂರು ಮಸ್ಕಿ ಸೇರಿ ಸಾಗುವಳಿ ಕ್ಷೇತ್ರ 180,805 ಹೇಕ್ಟರ್ ಪ್ರದೇಶವಾಗಿದೆ. ಇನ್ನು ನೀರಾವರಿ 38,893 ಹೆಕ್ಟೇರ್ ಹಾಗೂ ಖುಷ್ಕಿ 141,912 ಹೆಕ್ಟೇರ್ ಪ್ರದೇಶವಿದೆ. ಆದರೆ ಸಿಂಧನೂರಿಗೆ ಸ್ಥಳಾಂತರಿಸಬೇಕೆಂಬ ಉದ್ದೇಶದಿಂದ ಲಿಂಗಸುಗೂರು ಮತ್ತು ಮಸ್ಕಿ ಪ್ರತ್ಯೇಕವಾಗಿ ತೋರಿಸಿ, ಸಿಂಧನೂರಿನಲ್ಲಿ ಹೆಚ್ಚು ಕೃಷಿ ಪ್ರದೇಶವಿದೆ ಎಂದು ಸುಳ್ಳು ಮಾಹಿತಿ ನೀಡಿ ಕೃಷಿ ನಿರ್ದೇಶಕ ಕಚೇರಿಯನ್ನು ಅಧಿಕಾರಿಗಳು ಸ್ಥಳಾಂತರಿಸಬೇಕು ಎಂದು ಹುನ್ನಾರ ಮಾಡಿದ್ದಾರೆ. ಇದಕ್ಕೆ ಮೇಲಾಧಿಕಾರಿಗಳು ಸಾಥ್ ನೀಡಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದ್ದು, ಇಷ್ಟೆಲ್ಲ ಬೆಳವಣಿಗೆ ನಡೆದಿದ್ದರೂ ಕ್ಯಾರೇ ಎನ್ನದ ಜನಪ್ರತಿನಿಧಿಗಳ ವಿರುದ್ಧ ಲಿಂಗಸುಗೂರಿನ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ಮಕ್ಕಳಿಗೆ ಗಾಯ

ಲಿಂಗಸುಗೂರು ಕ್ಷೇತ್ರ ರಾಜಕೀಯ ಕಾರ್ಖಾನೆ ಎಂಬ ಹೆಸರು ಪಡೆದಿದೆ. ಘಟಾನುಘಟಿ ನಾಯಕರು ಈ ಕ್ಷೇತ್ರದಿಂದಲೇ ಆಯ್ಕೆಯಾಗಿದ್ದಾರೆ. ಹಾಲಿ ಶಾಸಕರಾದ ಮಾನಪ್ಪ ವಜ್ಜಲ್, ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ, ಮಾಜಿ ಶಾಸಕ ಡಿಎಸ್ ಹೊಲಗೇರಿಯವರು ಈ ಕ್ಷೇತ್ರದಲ್ಲಿ ಇದ್ದಾರೋ ಅಥವಾ ಇಲ್ಲವೋ ಎಂಬ ಸಂಶಯ ಮೂಡುತ್ತಿದೆ. ಯಾಕೆಂದರೆ ಹಲವಾರು ಕಚೇರಿಗಳು ಸಿಂಧನೂರಿಗೆ ಸ್ಥಳಾಂತರಗೊಂಡರೂ, ಇವರಾರು ಮಾತಾಡದೇ ಮೌನವಾಗಿ ಕಣ್ಮುಚ್ಚಿಕೊಂಡು ಕುಳಿತಿದ್ದಾರೆ. ಕಾಣುತ್ತಿಲ್ಲವೇ ಎಂದು ಸ್ಥಳೀಯ ಮುಖಂಡರು ಪ್ರಶ್ನಿಸಿದ್ದಾರೆ.

ಸಿಂಧನೂರು
ಸರ್ಕಾರದ ಅಧೀನಕಾರ್ಯದರ್ಶಿಯವರು ಕೃಷಿ ಇಲಾಖೆಯವರಿಗೆ ಬರೆದ ಪತ್ರ

ತಾಲೂಕಿನಲ್ಲಿ ಏನು ನಡೆಯುತ್ತಿದೆ ಎಂಬ ಪರಿಜ್ಞಾನ ಇವರಿಗೆ ಇದೆಯೋ ಇಲ್ಲವೋ ತಿಳಿಯದಂತಾಗಿದೆ. ಈ ಕ್ಷೇತ್ರದ ಜನತೆ ಋಣ ತೀರಿಸುವ ಕಾಲ ಸನ್ನಿಹಿತವಾಗಿದೆ. ಕೂಡಲೇ ಹಾಲಿ ಮಾಜಿ ಶಾಸಕರುಗಳು ಎಚ್ಚೆತ್ತುಕೊಂಡು ತಾಲೂಕಿನಿಂದ ಸ್ಥಳಾಂತರವಾಗುತ್ತಿರುವ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಉಳಿಸಿಕೊಳ್ಳುತ್ತಾರೋ ಎಂದು ಕಾದು ನೋಡಬೇಕಿದೆ. ಈ ನಡುವೆ ಹಲವಾರು ಸಂಘಟನೆಗಳು ಕೂಡ, ಸ್ಥಳಾಂತರ ಮಾಡದಂತೆ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...