ರಾಯಚೂರು | ಪಿಡಿಒ ಪರೀಕ್ಷೆ ಮರು ನಿಗದಿಪಡಿಸುವಂತೆ ಎಐಡಿವೈಒ ಒತ್ತಾಯ

Date:

ಭಾನುವಾರ ನಡೆದ ಪಿಡಿಒ ನೇಮಕಾತಿ ಹುದ್ದೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದನ್ನು ಖಂಡಿಸಿ ಕೂಡಲೇ ಮರು ಪರೀಕ್ಷೆಯನ್ನು ನಿಗದಿ ಮಾಡುವಂತೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ರಾಜ್ಯಾಧ್ಯಕ್ಷ ಶರಣಪ್ಪ ಉದ್ಭಾಳ ಆಗ್ರಹಿಸಿದ್ದಾರೆ.

ಭಾನುವಾರದಂದು ಬೆಳಗ್ಗೆ ಪ್ರಶ್ನೆ ಪತ್ರಿಕೆ-1ರ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಒಂದು ಬ್ಲಾಕ್‌ನಲ್ಲಿ 24 ಜನ ಅಭ್ಯರ್ಥಿಗಳಿದ್ದರೆ, ಕೇವಲ 12 ಪ್ರಶ್ನೆ ಪತ್ರಿಕೆಗಳನ್ನು ಹಂಚಿಕೆ ಮಾಡಲಾಗಿದೆ. ಅಷ್ಟೇ ಅಲ್ಲದೆ, ಪ್ರಶ್ನೆ ಪತ್ರಿಕೆಯ ಬಂಡಲ್ ಅನ್ನು ಅಭ್ಯರ್ಥಿಗಳ ಮುಂದೆ ತೆರೆಯಬೇಕು ಎಂಬ ನಿಯಮವಿದ್ದರೂ ಅದನ್ನು ಗಾಳಿಗೆ ತೂರಿ ಮುಂಚಿತವಾಗಿಯೇ ತೆರೆಯಲಾಗಿದೆ ಎಂದು ಆರೋಪಿಸಿದರು.

24 ಅಭ್ಯರ್ಥಿಗಳಿಗೆ ಕೇವಲ 12 ಪ್ರಶ್ನೆ ಪತ್ರಿಕೆಗಳನ್ನು ಹಂಚಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಕೆಪಿಎಸ್ಸಿಯ ಈ ಬೇಜವಾಬ್ದಾರಿ ನಡೆಯಿಂದಾಗಿ ಅಭ್ಯರ್ಥಿಗಳಲ್ಲಿ ಅನುಮಾನ ಉಂಟಾಗಿದೆ ಎಂದು ಖಂಡಿಸಿದರು.ಕಲ್ಯಾಣ್ ಕರ್ನಾಟಕ ಭಾಗದಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿನ ಸರ್ಕಾರಿ ಪದವಿ ಕಾಲೇಜು ಸೇರಿ ಕಲಬುರ್ಗಿ, ಬೀದರನಲ್ಲಿಯೂ ಕೂಡ ಇದೇ ರೀತಿ ಜರುಗಿದೆ ಎಂದರೆ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳು ಹಲವಾರು ತಿಂಗಳುಗಳಿಂದ ಪರೀಕ್ಷಾ ತಯಾರಿ ನಡೆಸಿ, ತರಬೇತಿ ಪಡೆದು, ಹಗಲು ರಾತ್ರಿ ಅಭ್ಯಾಸ ನಡೆಸಿದ ಅಭ್ಯರ್ಥಿಗಳಿಗೆ ಸೋರಿಕೆಯಿಂದ ನಿರಾಸೆ ಉಂಟಾಗಿದೆ. ಇದಕ್ಕೆ ಕೆಪಿಎಸ್‌ಸಿಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ದೂರಿದರು. ಯಾವುದೇ ಪಕ್ಷ ಅಧಿಕಾರಕ್ಕೆ ಬಂದಿದ್ದರು ಸಹ ಕೆಪಿಎಸ್ಸಿಯ ಕರ್ಮಕಾಂಡಗಳನ್ನು ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.

ಇದೊಂದು ಪರೀಕ್ಷೆಯಲ್ಲ, ಪಿಎಸ್ಐ ನೇಮಕಾತಿ ಪ್ರಶ್ನೆ ಪತ್ರಿಕೆ ತಯಾರಿಕೆಯಲ್ಲಿ ಗೊಂದಲ, ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ- ಹಗರಣಗಳಿಲ್ಲದೆ ಪರೀಕ್ಷೆ ನಡೆಸಿದ ಇತಿಹಾಸವೆ ಕೆಪಿಎಸ್ಸಿ ಗೆ ಇಲ್ಲ. ಪ್ರತಿಯೊಂದು ಪರೀಕ್ಷೆ ನಡೆದಾಗ ಅಭ್ಯರ್ಥಿಗಳು ಇದೇ ರೀತಿ ಸಮಸ್ಯೆ ಅನುಭವಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ; ಪ್ರತಿಭಟಿಸಿದ್ದ ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್!

ಉದ್ಯೋಗದ ಭರವಸೆಯನ್ನು ಹೊಂದಿರುವ ಅಭ್ಯರ್ಥಿಗಳ ಬದುಕಿದ ಜೊತೆ ಕೆಪಿಎಸ್ಸಿಯು ಚೆಲ್ಲಾಟವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೆಪಿಎಸ್ಸಿ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಈ ಕೂಡಲೇ ಮರು ಪರೀಕ್ಷೆಯನ್ನು ನಡೆಸಬೇಕೆಂದು, ಈ ರೀತಿಯಾಗಿ ಎಡವಟ್ಟು ಜರುಗಿರುವ ಕುರಿತು ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...