ರಾಯಚೂರು | ಖರೀದಿ ಕೇಂದ್ರದಲ್ಲೇ ತೊಗರಿ ಖರೀದಿಗೆ ಅನುಕೂಲ ಮಾಡಿಕೊಡಲು ಎಐಡಿವೈಒ ಒತ್ತಾಯ

Date:

ತೊಗರಿ ಖರೀದಿ ನೋಂದಣಿಯಲ್ಲಿ ಹಲವು ಸಮಸ್ಯೆಗಳಾಗುತ್ತಿದ್ದು, ಅದನ್ನು ಸರಳಗೊಳಿಸುವಂತೆ ಹಾಗೂ ಖರೀದಿ ಕೇಂದ್ರಗಳಲ್ಲೇ ತೊಗರಿಯನ್ನು ಖರೀದಿಸುವಂತೆ ಕ್ರಮ ಕೈಗೊಳ್ಳಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಎಐಕೆಕೆಎಂಎಸ್‌ ಸಂಘಟನೆಗಳು ಒತ್ತಾಯಿಸಿ ಲಿಂಗಸೂಗೂರು ಸಹಾಯಕ ಆಯುಕ್ತ ಶಿರಸ್ತೇದಾರ್ ಆದಪ್ಪ ಅವರಿಗೆ ಹಕ್ಕೊತ್ತಾಯ ಸಲ್ಲಿಸಲಾಯಿತು.

ರೈತರು ಹಲವಾರು ಸಂಕಷ್ಟಗಳ ಮಧ್ಯದಲ್ಲಿ ಈ ವರ್ಷದ ಕೃಷಿ ಹಂಗಾಮಿನಲ್ಲಿ ತೊಗರಿ ಬೆಳೆಯನ್ನು ಬೆಳೆದಿದ್ದಾರೆ. ಆದರೆ ತೊಗರಿ ಬೆಲೆ ಕುಸಿತದ ಪರಿಣಾಮದಿಂದಾಗಿ ಖರ್ಚು ಮಾಡಿದಷ್ಟು ಆದಾಯ ಸಿಗುತ್ತಿಲ್ಲ. ಇದರಿಂದ ರೈತರು ನೊಂದು ಆಘಾತಕ್ಕೆ ಗುರಿಯಾಗುತ್ತಿದ್ದಾರೆ ತಕ್ಷಣ ಖರೀದಿ ಕೇಂದ್ರ ಸ್ಥಾಪಿಸಿ ಖರೀದಿಗೆ ಅವಕಾಶ ನೀಡಬೇಕು ಎಂದು ಸಂಘಟನೆಯ ಮುಖಂಡರು ಮನವಿ ಮಾಡಿದರು.

“ಕೇಂದ್ರ ಸರ್ಕಾರ ಬೆಂಬಲ ಬೆಲೆಯಡಿ ಕ್ವಿಂಟಲ್‌ಗೆ 7550 ರೂ ನಿಗದಿ ಮಾಡಿದೆ. ರಾಜ್ಯ ಸರ್ಕಾರವು ರೈತ ಸಂಘಟನೆಗಳ ಒತ್ತಡಕ್ಕೆ ಮಣಿದು ಪ್ರತಿ ಕ್ವಿಂಟಲ್‌ಗೆ 450 ರೂ ಪ್ರೋತ್ಸಾಹಧನ ನೀಡುವ ಆದೇಶ ಮಾಡಿದೆ. ಹೀಗಾಗಿ ಪ್ರತಿ ಕ್ವಿಂಟಲ್‌ಗೆ 8 ಸಾವಿರ ರೂಗಳಂತೆ ಖರೀದಿಗೆ ಆದೇಶ ಮಾಡಿದಂತಾಗಿದೆ. ಇದರಿಂದಾಗಿ ರೈತರು ಅಲ್ಪಸ್ವಲ್ಪ ನಿಟ್ಟಿಸಿರು ಬಿಡುವಂತಾಗಿದೆ. ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗಾಗಿ ಜನವರಿ 2ನೇ ತಾರೀಕಿನಿಂದ ರೈತರಿಂದ ಅರ್ಜಿ ಸ್ವೀಕಾರ ಮಾಡಿ, ಖರೀದಿ ಆರಂಭಿಸುವುದಾಗಿ ಸಂಬಂಧಿಸಿದ ಇಲಾಖೆ ಪತ್ರಿಕೆಗಳಲ್ಲಿ ಪ್ರಕಟಿಸಿತ್ತು. ತಿಂಗಳು ಕಳೆದರೂ ಖರೀದಿ ಆರಂಭಿಸದೆ ಇರುವುದು ದುರದೃಷ್ಟಕರ. ಅಲ್ಲದೆ ರೈತರಿಂದ ಅರ್ಜಿ ತೆಗೆದುಕೊಳ್ಳುವ ಪ್ರಕ್ರಿಯೆ ಕೂಡ ಫೆಬ್ರವರಿ ಮೊದಲ ವಾರದಿಂದ ಆರಂಭ ಮಾಡಿದ್ದಾರೆ. ಅದು ಕೂಡ ಸಮರ್ಪಕವಾಗಿ ನಡೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಕ್ತ ಮಾರುಕಟ್ಟೆಯಲ್ಲಿ ತೊಗರಿ ಬೆಳೆ ಅತ್ಯಂತ ಕಡಿಮೆ ದರಕ್ಕೆ ಮಾರಾಟವಾಗುತ್ತಿದೆ. ಸರಿಯಾದ ಬೆಲೆಗೆ ಮಾರಾಟ ಮಾಡಲು ಆಗದೆ ರೈತರು ಕಂಗಾಲಾಗಿದ್ದಾರೆ. ಈಗಾಗಲೇ ತೊಗರಿ ಬೆಳೆ ರಾಶಿಯಾಗಿ ಮೂರು ತಿಂಗಳು ಕಳೆಯುತ್ತಾ ಬಂದಿದೆ. ಈಗಲಾದರೂ ಸರ್ಕಾರ ಇತ್ತ ಗಮನಹರಿಸಬೇಕು. ಬಡ, ಸಣ್ಣಪುಟ್ಟ ರೈತರಿಗೆ ಅನುಕೂಲವಾಗುವಂತೆ ತೊಗರಿ ಖರೀದಿ ನೋಂದಣಿಯನ್ನು ಸರಳಗೊಳಿಸಿ ರೈತರಿಗೆ ಅನುಕೂಲ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?:ರಾಯಚೂರು | ಪರಿಸರ ಹಾನಿಯಾಗದಂತೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ: ಡಿಸಿ ನಿತೀಶ್

ಪ್ರತಿಭಟನೆಯಲ್ಲಿ ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ, ಜಿಲ್ಲಾ ಕಾರ್ಯದರ್ಶಿ ಮಲ್ಲನಗೌಡ ಅಂಚೆಸೂಗುರು, ತಿರುಪತಿ ಗೋನವಾರ, ಶರಣಪ್ಪಗೌಡ ಹೊಸಮನಿ, ವೀರಬಧ್ರಪ್ಪ ಕವಿತಾಳ, ಬಸವರಾಜ ಕವಿತಾಳ, ಈರಣ್ಣ ಕಸಬಾ ಲಿಂಗಸೂಗೂರು, ಬಸನಗೌಡ ಎಂ ಹಳ್ಳಿ, ಬಾಲಜಿ ಗೋನವಾರ, ಚಂದ್ರಶೇಖರ ಸಾಹುಕರ, ಶರಣಪ್ಪ ಹೊಸಗೌಡ್ರ, ಶರಣಗೌಡ ಬಸಪುರ, ಬಸವರಾಜ ಅಂಗಡಿ, ಹಸನಸಾಬ ಗೋನವಾರ, ಗುಂಡಪ್ಪ ಗೋನವಾರ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...