ರಾಯಚೂರು | ಏಮ್ಸ್ ಹೋರಾಟ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ;ಸರ್ವ ಪಕ್ಷಗಳ ನಿಯೋಗ, ಕೇಂದ್ರಕ್ಕೆ ಒತ್ತಾಯಿಸಲಿ ; ಬಸವರಾಜ್ ಕಳಸ

Date:

ಸತತ ಮೂರು ವರ್ಷಗಳ ಕಾಲ ನಿರಂತರವಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿ ಹೋರಾಟ ನಡೆಯುತ್ತಿದ್ದು,ಇದೆ ಮೇ.13 ರಂದು ಏಮ್ಸ್ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಡಲಿದೆ. ರಾಜ್ಯ ಸರ್ಕಾರ ಕೂಡಲೇ ಸರ್ವ ಪಕ್ಷಗಳ ನಿಯೋಗದೊಂದಿಗೆ ದೆಹಲಿಗೆ ತೆರಳಿ ಏಮ್ಸ್ ಮಂಜೂರು ಮಾಡಿಸಲು ಮುಂದಾಗಬೇಕು ಎಂದು ಏಮ್ಸ್ ಹೋರಟ ಸಮಿತಿಯ ಪ್ರದಾನ ಸಂಚಾಲಕ ಬಸವರಾಜ ಕಳಸ ಹೇಳಿದರು.


ಅವರಿಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 2022 ರ ಮೇ.13 ರಂದು ಏಮ್ಸ್ ಹೋರಾಟ ಸಮಿತಿಯಿಂದ ಹೋರಾಟ ಪ್ರಾರಂಭವಾಗಿದ್ದು, ಮುಂಬರು ಮೇ.13 ರಂದು ನಾಲ್ಕನೇ ವರ್ಷಕ್ಕೆ ಮುಂದುವರೆಯುತ್ತಿದೆ. ಆದರೆ ಕೇಂದ್ರ ಮಟ್ಟದಲ್ಲಿ ಯಾವುದೇ ಬೆಳವಣಿಗೆ ಕಾಣುತ್ತಿಲ್ಲ ಎಂದರು.

ಏಮ್ಸ್ ಹೋರಾಟ ಸಮಿತಿಯಿಂದ ನಿರಂತರವಾಗಿ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪನೆ ಮಾಡಬೇಕೆಂಬ ಒತ್ತಾಯದೊಂದಿಗೆ ಶಿಸ್ತುಬದ್ದವಾಗಿ ಹಾಗೂ ಕಾನೂನು ನಿಯಮಗಳನ್ನು ಪಾಲಿಸುತ್ತಾ ಸಾಕಷ್ಟು ಪ್ರತಿಭಟನೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಮ್ಸ್ ಗಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದು, ಬಿಟ್ಟರೇ ಸರ್ಕಾರದ ಮಟ್ಟದಲ್ಲಿ ಯಾವುದೇ ಕೆಲಸಗಳು ಆಗಿಲ್ಲ. ಕೂಡಲೇ ರಾಜ್ಯಸರ್ಕಾರ ಸಂಪುಟ ಜಾಸಭೆಯಲ್ಲಿ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪನೆಯಾಗಬೇಕೆಂಬ ನಿರ್ಧಾರವನ್ನು ಕೈಗೊಂಡು ದೆಹಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೇ 17,18 ರಂದು ಸಿಂಧನೂರಿನಲ್ಲಿ ಮೇ ಸಾಹಿತ್ಯ ಮೇಳ

ರಾಯಚೂರಿಗೆ ಏಮ್ಸ್ ಮಂಜೂರು ಮಾಡುವುದು ಬಿಜೆಪಿ ಪಕ್ಷದ ಜವಾಬ್ದಾರಿಯೂ ಆಗಿದೆ. ಆದರೆ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರುಗಳು ಶಕ್ತಿ, ಬುದ್ದಿ ಎಂಬ ಮಾತುಗಳನ್ನಡುತ್ತಾ ವೈಯಕ್ತಿಕವಾಗಿ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ ಅವರ ಸವಾಲು, ಜವಾಬು ನಮಗೆ ಬೇಡ ರಾಯಚೂರಿನಲ್ಲಿ ಏಮ್ಸ್ ಮಂಜೂರು ಮಾಡಿಸಬೇಕು ಎಂದು ತಿಳಿಸಿದರು.

ಮೂರು ವರ್ಷಗಳಾದರೂ ಏಮ್ಸ್ ಹೋರಾಟಕ್ಕೆ ಅಂತ್ಯವಿಲ್ಲದಂತಾಗಿದೆ. ಏಮ್ಸ್ ವಿಚಾರದಲ್ಲಿ ಕಾಲಹರಣ ಮಾಡುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನವಾದಂತಾಗಿದೆ. ಮಾನವೀಯತೆ ದೃಷ್ಠಿಯಿಂದಾದರೂ, ರಾಜಕೀಯ ವ್ಯಕ್ತಿಗಳು ರಾಯಚೂರಿಗೆ ಏಮ್ಸ್ ಕೊಡಿಸುವ ಇಚ್ಛಾಶಕ್ತಿಯನ್ನು ತೋರಿಸಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಮುಖರಾದ ಅಶೋಕಕುಮಾರ ಜೈನ್, ಜಾನ್ ವೆಸ್ಲಿ, ವೀರಭದ್ರಯ್ಯ ಸ್ವಾಮಿ, ಗುರುರಾಜ ಕುಲಕರ್ಣಿ, ಜಗದೀಶ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...