ರಾಯಚೂರು | ವಕ್ಫ್‌ ಮಂಡಳಿ ಚುನಾವಣೆಯಲ್ಲಿ ಬೆದರಿಕೆ ಆರೋಪ: ಸ್ಪಷ್ಟನೆ ನೀಡಿದ ಮುತವಲ್ಲಿಗಳು

Date:

ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿ ಸದಸ್ಯರ ಚುನಾವಣೆಗೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇರೆಗೆ ಅಭ್ಯರ್ಥಿಗಳಾದ ಅನ್ವರ ಭಾಷಾ ಮತ್ತು ಸರವರ್ ಬೇಗ್ ಅವರಿಗೆ ಚುನಾವಣಾ ಅಧಿಕಾರಿ ಶೋಕಾಸ್ ನೋಟಿಸ್ ಜಾರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಯ 16 ಮತದಾರರೂ ಆಗಿರುವ ಮುತವಲ್ಲಿಗಳು ರಾಯಚೂರಿನ ಸಹಾಯಕ ಆಯುಕ್ತರಿಗೆ ತಮ್ಮ ಹೇಳಿಕೆ ದಾಖಲಿಸಿ ನಮಗೆ ಯಾರು ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯ ವಕ್ಫ್‌ ಸಲಹಾ ಸಮಿತಿಯ ಅಧ್ಯಕ್ಷ ಮೌಲಾನಾ ಫರೀದ್ ಖಾನ್ ಅವರು ಮತದಾರರಾದ ಮುತವಲ್ಲಿಗಳಿಗೆ ಕರೆ ಮಾಡಿ ಅನ್ವರ್ ಭಾಷಾ ಮತ್ತು ಸರವರ್ ಬೇಗ್ ಅವರಿಗೆ ಮತದಾನ ಮಾಡಬೇಕು ಎಂದು ಹೆದರಿಸುತ್ತಿದ್ದಾರೆ ಎಂದು ಮುಖಂಡ ಹಾರಿಸ್ ಸಿದ್ದೀಖಿ ಅವರು ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಅವರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇಬ್ಬರು ಅಭ್ಯರ್ಥಿಗೆ ನೋಟಿಸ್ ನೀಡಲಾಗಿತ್ತು ಹಾಗೂ 24 ಗಂಟೆಯೊಳಗೆ ಸ್ಪಷ್ಠನೆ ನೀಡದಿದ್ದಲ್ಲಿ ಶಿಸ್ತು ಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ 16 ಮುತವಲ್ಲಿಗಳು(ಮತದಾರರು) ರಾಯಚೂರು ಸಹಾಯಕ ಆಯುಕ್ತ ಗಜಾನನ ಬಾಳೆ ಅವರ ಮೂಲಕ ಚುನಾವಣಾ ಅಧಿಕಾರಿಗೆ ತಮ್ಮ ಹೇಳಿಕೆ ನೀಡಿದ್ದು, “ನಮಗೆ ವಕ್ಫ್ ಬೋರ್ಡ್ ಸಲಹಾ ಸಮಿತಿಯ ಜಿಲ್ಲಾಧ್ಯಕ್ಷ ಫರೀದ್ ಖಾನ್ ಯಾವುದೇ ಬೆದರಿಕೆ ಹಾಕಿಲ್ಲ. ದೂರುದಾರ ಹ್ಯಾರಿಸ್ ಸಿದ್ದೀಕಿ ಅವರಿಗೂ ವಕ್ಫ್ ಬೋರ್ಡ್ ಚುನಾವಣೆಗೆ ಹಾಗೂ ನಮಗೆ ಸಂಬಂಧವಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಕುಂದಾಪುರ | ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಲಾರಿ ಡಿಕ್ಕಿ: ಚಾಲಕನ ಸಹಿತ 8 ಮಂದಿ ಗಂಭೀರ

ಸ್ಪಷ್ಟನೆ ನೀಡಿದ 16 ಜನ ಮುತವಲ್ಲಿಗಳ ಪೈಕಿ ಡಾ.ಮೋಯಿನ್‌, ಮಹಮ್ಮದ್ ಅಲಿ‌ ಗುತ್ತೆದಾರ ಸಿರವಾರ ಹಾಗೂ ಮಹಮ್ಮದ್ ರಫಿ ಖುದ್ದಾಗಿ ಸಹಾಯಕ ಆಯುಕ್ತರಿಗೆ ಸ್ಪಷ್ಟನೆ ನೀಡಿದರೆ ಉಳಿದವರು ದೂರವಾಣಿ ಮೂಲಕ ಹೇಳಿಕೆ ನೀಡಿದ್ದಾರೆ.

ವಕ್ಫ್‌ ಬೋರ್ಡ್ ಚುನಾವಣೆ ಪಾರದರ್ಶಕವಾಗಿ ನಡೆಯಲಿ ಎಂಬ ನಿಟ್ಟಿನಲ್ಲಿ ದೂರು ನೀಡಲಾಗಿದೆ ಎಂದು ದೂರುದಾರ ಹ್ಯಾರಿಸ್ ಸಿದ್ದೀಕಿ ತಮ್ಮ ದೂರಿನಲ್ಲಿ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...