ರಾಯಚೂರು | ಮತ್ತೊಂದು ಕಲುಷಿತ ನೀರಿನ ಪ್ರಕರಣ; 80 ಮಂದಿ ಅಸ್ವಸ್ಥ

Date:

ಕಲ್ಯಾಣ ಕರ್ನಾಟಕದ ಜಿಲ್ಲೆಯಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಲೇ ಇವೆ. ಅದರಲ್ಲೂ ರಾಯಚೂರು ಜಿಲ್ಲೆಯ ಕಲುಷಿತ ನೀರಿನಿಂದ ಕನಲಿ ಹೋಗಿದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಸಂಭವಿಸಿದ್ದು, ಗ್ರಾಮವೊಂದರಲ್ಲಿ ಕಲುಷಿತ ನೀರು ಕುಡಿದು ಸುಮಾರು 80 ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ.

ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು, ಆ ನೀರನ್ನು ಕುಡಿದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಅವರೆಲ್ಲರನ್ನೂ ನಾನಾ ಆಸ್ಪತ್ರೆಗಳಿಗೆ ದಾಖಲಿಸಾಗಿದೆ.

ಗ್ರಾಮಕ್ಕೆ ನೀರು ಸರಬರಾಜು ಮಾಡುವ ಚಿತ್ತಾಪುರ ಗ್ರಾಮ ಪಂಚಾಯತಿಯ ಬೇಜವಾಬ್ದಾರಿತನದಿಂದ ದುರ್ಘಟನೆ ನಡೆಸಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಜನರು ಅಸ್ವಸ್ಥಗೊಂಡಿದ್ದರು ಪಂಚಾಯತಿ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...