ರಾಯಚೂರು | ಕಲಂ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಲಿ: ಡಾ.ರಝಾಕ್ ಉಸ್ತಾದ್

Date:

ಮುಂದಿನ ಸಚಿವ ಸಂಪುಟ ಉಪ ಸಮಿತಿಯಲ್ಲಿ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಲವು ವಿಷಯಗಳ ಕುರಿತು ಪರಾಮರ್ಶೆ ನಡೆಸಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ ಡಾ ರಝಾಕ್ ಉಸ್ತಾದ್ ಅವರು 371(ಜೆ) ಅನುಷ್ಠಾನ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

“ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 2013ರಲ್ಲಿ ಭಾರತ ಸರ್ಕಾರ ಸಂವಿಧಾನದ ಅನುಚ್ಛೇದ 371(ಜೆ) ತಿದ್ದುಪಡಿ ಮೂಲಕ ವಿಶೇಷ ಸ್ಥಾನಮಾನ ಒದಗಿಸಿದೆ. ಸರ್ಕಾರ 371(ಜೆ) ಅನ್ವಯ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಮೀಸಲಾತಿ ನೀಡಿದೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಯುವಜನರಿಗೆ ರಾಜ್ಯ ಸರ್ಕಾರದಲ್ಲಿ ಉದ್ಯೋಗಾವಕಾಶ ಹಾಗೂ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅವಕಾಶ ಒದಗಿಸಿ ನಿಯಮಗಳನ್ನು ರಚಿಸಿ ಜಾರಿಗೊಳಿಸಲಾಗಿದೆ. ಆದರೂ ಸಮರ್ಪಕ ಅನುಷ್ಠಾನದ ಕೊರತೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಜನರಲ್ಲಿ ಆತಂಕವಿದ್ದು, ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ ಅನುಚ್ಛೇದ 371(ಜೆ) ಅನ್ವಯ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಸಮರ್ಪಕ ಅನುಷ್ಠಾನ ಮಾಡಲು ಮುಂದಿನ ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಸಂವಿಧಾನದ ಅನುಚ್ಛೇದ 371(ಜೆ) ಅನುಷ್ಠಾನಕ್ಕಾಗಿ ಸ್ವತಂತ್ರವಾಗಿ ಡಾ .ಡಿ ಎಂ ನಂಜುಂಡಪ್ಪ ಅವರ ವರದಿ ಅನುಷ್ಠಾನ ಸಮಿತಿ ಮಾದರಿಯಲ್ಲಿ “ಕಲ್ಯಾಣ ಕರ್ನಾಟಕಕ್ಕೆ 371(ಜೆ) ಅನುಷ್ಠಾನ ಪ್ರಾಧಿಕಾರ” ರಚಿಸಿ, ಸೂಕ್ತ ಅಧಿಕಾರ ನೀಡಬೇಕು. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು 371(ಜೆ) ಮೀಸಲಾತಿ ಕೋರಿದ್ದು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಲ್ಲಿ ಮೊದಲಿಗೆ ಮೆರಿಟ್ ಆಧಾರದಲ್ಲಿ ಮಿಕ್ಕುಳಿದ ವೃಂದದಲ್ಲಿ ಪರಿಗಣಿಸಬೇಕು. ಇನ್ನುಳಿದ ಅಭ್ಯರ್ಥಿಗಳನ್ನು ಸ್ಥಳೀಯ ವೃಂದದಲ್ಲಿ ಪರಿಗಣಿಸಬೇಕೆಂದು ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯದ ಸುತ್ತೋಲೆಯನ್ನು ಹೊರಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಉಕ್ಕು, ಬೃಹತ್ ಕೈಗಾರಿಕೆ ಸಚಿವ ಭೂಪತಿರಾಜು ಅವರ ಭೇಟಿ

ರಾಯಚೂರು ಲೋಕಸಭಾ ಸಂಸದ ಜಿ ಕುಮಾರ್ ನಾಯಕ ಅವರು ದೆಹಲಿಯ ಉದ್ಯೋಗ ಭವನದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ಅವರನ್ನು ಭೇಟಿ ಮಾಡಿ ರಾಯಚೂರಿನಲ್ಲಿ ಕೈಗಾರಿಕೋದ್ಯಮ ಸ್ಥಾಪನೆ ಕುರಿತು ಮಾತನಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಲಕರ ವಸತಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಹುಳುಗಳು ಪತ್ತೆ

“ರಾಯಚೂರು ಜಿಲ್ಲೆಯನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಯಾಗಿ ಆಯ್ಕೆ ಮಾಡಲಾಗಿದೆ. ಈ ಭಾಗದ ಆರ್ಥಿಕ ಬಲವರ್ಧನೆಗಾಗಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಈ ಭಾಗದ ನಿರುದ್ಯೋಗ ಯುವಜನರಿಗೆ ಉದ್ಯೋಗ ಸೃಷ್ಟಿಸಬೇಕಾಗಿದೆ. ರಾಯಚೂರು ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗಾಗಿ ವಿಶಾಲವಾದ ಭೂಮಿ, ನೀರು, ಸಾರಿಗೆ ಹಾಗೂ ರೈಲ್ವೆ ಸಂಪರ್ಕವಿದೆ. ಅಲ್ಲದೆ ಈಗಾಗಲೆ ಅನುಮೋದಿಸಲಾಗಿರುವ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಯಲ್ಲಿ ರಾಯಚೂರು ಜಿಲ್ಲೆಯನ್ನು ಪರಿಗಣಿಸಬೇಕು” ಎಂದು ಸಚಿವರಲ್ಲಿ ಮನವಿ ಮಾಡಿದ್ದಾರೆ.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...