ರಾಯಚೂರು | ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿಗೆ ಆಗ್ರಹ; ಜ.7ರಿಂದ ಅನಿರ್ದಿಷ್ಟಾವಧಿ ಧರಣಿ

Date:

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿ ಪಡಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜನವರಿ 7ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ ಎಂದು ಸಂಘದ ರಾಜ್ಯಾಧ್ಯಕ್ಷ ಸೋಮಶೇಖರ ಯಾದಗಿರಿ ಹೇಳಿದರು.

ರಾಯಚೂರು ನಗರದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಕಳೆದೆ ಫೆಬ್ರವರಿ 13 ಮತ್ತು 14ರಂದು ಪ್ರತಿಭಟನೆ ನಡೆಸಿದಾಗ ಧರಣಿ ಸ್ಥಳಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಶೀಘ್ರದಲ್ಲಿ ಸಭೆ ಕರೆದು ನಿರ್ಧರಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಒಂದು ವರ್ಷ ಕಳೆದಿದ್ದು, ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಲಿದ್ದಾರೆ” ಎಂದು ತಿಳಿಸಿದರು.

“ಎಲ್ಲ ಶಾಸಕರು, ಸಚಿವರಿಗೆ ಪ್ರತ್ಯೇಕ ಮನವಿ ನೀಡಿ ಅಧಿವೇಶನದಲ್ಲಿ ಚರ್ಚಿಸುವಂತೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ ನಿಗದಿಪಡಿಸುತ್ತಿಲ್ಲ. ಬದಲಾಗಿ ಮೊಬೈಲ್‌ಗಳನ್ನು ಆಶಾ ಕಾರ್ಯಕರ್ತೆಯರೇ ಖರೀದಿ ಮಾಡಿ ಆರೋಗ್ಯ ಸೇವೆಗಳನ್ನು ಒದಗಿಸಬೇಕೆಂದು ಹೇಳುತ್ತಿದೆ. ಸರ್ಕಾರ ದಿವಾಳಿಯಾಗಿದೆಯೋ, ಏನೋ ಗೊತ್ತಿಲ್ಲ. ಹತ್ತಾರು ಕೆಲಸಗಳನ್ನು ಆಶಾ ಕಾರ್ಯಕರ್ತೆಯರಿಂದಲೇ ಪಡೆಯುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಟ ವೇತನವನ್ನೂ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ಜಿಲ್ಲಾಧ್ಯಕ್ಷರ ನೇಮಕ

“ಪಶ್ಚಿಮ ಬಂಗಾಳ ಮಾದರಿಯಲ್ಲಿ ₹5 ಲಕ್ಷ ಸೇವಾ ನಿವೃತ್ತಿ ಯೋಜನೆ ಜಾರಿಗೊಳಿಸಬೇಕಿದೆ. ರಾಜ್ಯದಲ್ಲಿ ಸೇವಾ ನಿವೃತ್ತಿಗೊಂಡ ಆಶಾ ಕಾರ್ಯಕರ್ತೆಯರಿಗೆ ₹20,000 ಮಾತ್ರ ನೀಡಲಾಗುತ್ತಿದೆ. ಉದ್ಯೋಗ ಭದ್ರತೆಯಿಲ್ಲದೇ ಅತಿಹೆಚ್ಚು ಕೆಲಸ ಮಾಡಿ ಕಡಿಮೆ ವೇತನ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಆಗಮಿಸಲಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಎನ್ ಎಸ್ ವೀರೇಶ, ಮಹೇಶ ಚಿಕಲಪರ್ವಿ, ಈರಮ್ಮ, ರಾಧಾ, ಶ್ರೀದೇವಿ, ಮಲ್ಲಮ್ಮ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...