ರಾಯಚೂರು | ತೆಲಂಗಾಣದ ಲಿಂಗತ್ವ ಅಲ್ಪಸಂಖ್ಯಾತರಿಂದ ದೌರ್ಜನ್ಯ; ಕ್ರಮಕ್ಕೆ ಆಗ್ರಹ

Date:

ತೆಲಂಗಾಣದಿಂದ ಬರುವ ಲಿಂಗತ್ವ ಅಲ್ಪಸಂಖ್ಯಾತರು ಸ್ಥಳೀಯರ ಮೇಲೆ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕುತ್ತಿರುವುದನ್ನು ತಡೆಯಲು ಸರ್ಕಾರ ಕ್ರಮ ವಹಿಸುವಂತೆ ಆಪ್ತಮಿತ್ರ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಸೇವಾ ಸಂಸ್ಥೆ ಅಧ್ಯಕ್ಷೆ ಪ್ರಗತಿ ಆಗ್ರಹಿಸಿದರು.

ರಾಯಚೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸ್ಥಳೀಯ ಹುಲಿಗೆಮ್ಮ ಎಂಬುವವರು ತೆಲಂಗಾಣದ ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಸೇರಿಕೊಂಡು ಗುಂಪು ರಚಿಸಿಕೊಂಡಿದ್ದಾರೆ. ಒಮ್ಮೆ 40-50 ಮಂದಿ ಬಂದು ಜಿಲ್ಲೆಯಲ್ಲಿ ಭಿಕ್ಷಾಟನೆ ಮಾಡುತ್ತಾರೆ. ಸ್ಥಳೀಯರಿಗೆ ಕಿರುಕುಳ ನೀಡಿ, ದೌರ್ಜನ್ಯ ಎಸಗಿ, ಕಲೆಕ್ಷನ್‌ಗೆ ಬರದಂತೆ ತಡೆಯುತ್ತಿದ್ದಾರೆ” ಎಂದು ಆರೋಪಿಸಿದರು.

“ಮೂರು ದಿನಗಳಿಂದ ಪೋನ್ ಕರೆ ಮಾಡಿ ತೆಲಂಗಾಣ ಗುಂಪಿಗೆ ಸೇರುವಂತೆ ಒತ್ತಾಯಿಸುತ್ತಿದ್ದಾರೆ. ಪ್ರಶ್ನಿಸಿದರೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿವೈಎಸ್‌ಪಿಗೆ ದೂರು ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸರು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಿಂಧನೂರು, ಅನಂತಪುರ ಸೇರಿದಂತೆ ಅನೇಕ ಕಡೆ ಗಲಾಟೆ ಮಾಡಿಕೊಂಡಿದ್ದು, ಭಿಕ್ಷಾಟನೆ ಮಾಡಿ ಬದುಕುತ್ತಿರುವ ಸ್ಥಳೀಯರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯೋಗ ಸೇರಿದಂತೆ ಇತರೆ ಕೆಲಸಗಳನ್ನು ನೀಡುತ್ತಿಲ್ಲ. ಕುಟುಂಬದಿಂದ ದೂರವಾಗಿ, ಸಮಾಜದಿಂದ ತಿರಸ್ಕಾರಕ್ಕೆ ಒಳಗಾಗಿ ಬದುಕುತ್ತಿರುವ ಲಿಂಗತ್ವ ಅಲ್ಪಸಂಖ್ಯಾತರು ಕೆಲವರಿಂದ ಇಲ್ಲದ ಆರೋಪಕ್ಕೆ ತುತ್ತಾಗುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಯಲಸೀಮಾ ಸೇರಿ ಆಂಧ್ರಪ್ರದೇಶಕ್ಕೆ ಹೋಗಿ ನಮ್ಮವರು ಭಿಕ್ಷಾಟನೆ ಮಾಡಿದರೂ ಬೆದರಿಸುತ್ತಿದ್ದಾರೆ. ಅಲ್ಲಿಯವರು ಇಲ್ಲಿ ಬಂದು ನಮ್ಮವರನ್ನೇ ಹೆದರಿಸುತ್ತಿದ್ದಾರೆ. ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಣಿಪುರ ಮಹಿಳೆಯರ ಮೇಲೆ ದೌರ್ಜನ್ಯ; ವಿದ್ಯಾರ್ಥಿಗಳ ಖಂಡನೆ

ಲಕ್ಷ್ಮಣ ಮಾತನಾಡಿ, ಮಂಗಳಮುಖಿಯರಿಗೆ ಬಿಕ್ಷಾಟನೆ ಬಿಟ್ಟು ಬೇರೆ ಯಾವ ಕೆಲಸಗಳು ನೀಡುತ್ತಿಲ್ಲ. ಸಮಾಜ, ಕುಟುಂಬದಿಂದ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ಅವರನ್ನು ಭಿಕ್ಷೆ ಬೇಡಿ ಬದುಕಲೂ ಸಹ ಬಿಡದೇ ಇರುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಕ್ಷಣೆ ನೀಡಬೇಕು” ಎಂದರು.

ಈ ಸಂದರ್ಭದಲ್ಲಿ ಕಾಜಲ್, ಶಿರಿಷಾ, ಸೀಮಾ, ವಂದನಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...