ರಾಯಚೂರು | ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧ; ರಾಜ್ಯ ರೈತ ಸಂಘ ಖಂಡನೆ

Date:

ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತಿಶ್ ಕೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಅವರಿಗೆ ಮನವಿ ಸಲ್ಲಿಸಿದರು.

ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಿಂದ ಭತ್ತದ ವ್ಯಾಪಾರಿಗಳು ತೆಲಂಗಾಣ ರಾಜ್ಯಕ್ಕೆ ಹೋಗುವಾಗ ಶಕ್ತಿನಗರ ಚೆಕ್‌ಪೋಸ್ಟ್ ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ಜಲಾಲ್‌ಪೂರ ಚೆಕ್ ಪೋಸ್ಟ್ ನಲ್ಲಿ ಭತ್ತ ಲಾರಿಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಈಗಾಗಲೇ ಎರಡು ದಿನಗಳ ಹಿಂದೆ ಸುಮಾರು 5ರಿಂದ 6 ಲಾರಿಗಳನ್ನು ನಿಲ್ಲಿಸಿ ಕೃಷ್ಣ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ ಹಿನ್ನೆಲೆಯಲ್ಲಿ ರೈತರಿಗೆ ಭತ್ತದ ಸಾಗಾಣಿಕೆಗೆ ಸಮಸ್ಯೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

IMG 20241216 WA0009

ಪ್ರತಿದಿನ ತೆಲಂಗಾಣ ರಾಜ್ಯದಿಂದ ರಾಯಚೂರು ಮಾರುಕಟ್ಟೆಗೆ 30ರಿಂದ 40 ಸಾವಿರ ಭತ್ತವೂ ಯಾವುದೇ ನಿರ್ಬಂಧವಿಲ್ಲ ಆವಕವಾಗುತ್ತಿವೆ. ಇದರಿಂದ ಸ್ಥಳೀಯ ಮಾರುಕಟ್ಟೆಯ ಭತ್ತದ ದರ ಕಡಿಮೆಯಾಗಿ ರೈತರಿಗೆ ನಷ್ಟವಾಗುತ್ತಿದೆ ಎಂದು ಸಮಸ್ಯೆ ವಿವರಿಸಿದರು.ಕಾರಣ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಿಸಲು ಹಾಕಿರುವ ನಿರ್ಬಂಧನೆಯನ್ನು ತೆರವುಗೊಳಿಸಬೇಕು, ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ, ಕೃಷ್ಣ ಸೇತುವೆ ಮೇಲೆ ರಸ್ತೆ ತಡೆ ಚಳುವಳಿ ನಡೆಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂದುವರೆದ ಬಾಣಂತಿಯರ ಸಾವು; ಕಲಬುರಗಿಯಲ್ಲಿ ಮತ್ತೊಬ್ಬ ಬಾಣಂತಿ ಬಲಿ

ಸಂಘದ ರಾಜ್ಯ ಗೌರಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ, ಪದಾಧಿಕಾರಿಗಳಾದ ಮಲ್ಲಣ್ಣ ಗೌಡೂರು, ಮಲ್ಲಿಕಾರ್ಜುನರಾವ್, ವ್ಯಾಪಾರಿ ವೆಂಕಟೇಶ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...