ರಾಯಚೂರು | ಭಗತ್ ಸಿಂಗ್ ಆಶಯಗಳನ್ನು ಮುನ್ನಡೆಸಬೇಕು: ಅಜೀಜ್ ಜಾಗೀರದಾರ

Date:

ದೇಶದಲ್ಲಿ ಹಸಿವು, ಬಡತನ, ನಿರುದ್ಯೋಗ ತಾಂಡವಾಡುತ್ತಿದೆ. ಜಾತಿ, ಧರ್ಮದ ವಿಷಬೀಜ ಬಿತ್ತುತ್ತಿರುವ ಕಾರ್ಪೊರೇಟ್ ಶಕ್ತಿಗಳ ಕೃಪಾಪೋಷಿತ ಮನುವಾದವು ದೇಶದ ಜನರ ಭಾವೈಕ್ಯತೆಯ ಅಭಿವೃದ್ಧಿಗೆ ಕಂಟಕವಾಗಿದೆ ಎಂದು ಯುವಮುಖಂಡ ಅಜೀಜ್ ಜಾಗೀರದಾರ ಹೇಳಿದರು.

ರಾಯಚೂರು ನಗರದ ಆಶಾಪೂರ ರಸ್ತೆಯಲ್ಲಿರುವ ಟಿಯುಸಿಐ ಕಾರ್ಮಿಕ ರಾಜ್ಯ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117ನೇ ಜನ್ಮದಿನೋತ್ಸವ ಉದ್ಘಾಟಿಸಿ ಮಾತನಾಡಿದರು.

“ಭಗತ್ ಸಿಂಗ್ ಅವರು ತನ್ನ ತಾರುಣ್ಯ ವಯಸ್ಸಿನಲ್ಲಿ ಕಟ್ಟಾ ಕ್ರಾಂತಿಕಾರಿಯಾಗಿದ್ದರು. ಕಾರ್ಲ್ ಮಾರ್ಕ್ಸ್, ಲೆನಿನ್‌ ಮೊದಲಾದವರ ಚಿಂತನೆಗಳಿಂದ ತೀವ್ರ ಪ್ರಭಾವಿತರಾಗಿದ್ದ ಭಗತ್‌ ಸಿಂಗ್‌ ಸಹಜವಾಗಿಯೇ ಸಮಾಜವಾದದೆಡೆಗೆ ಆಕರ್ಷಿತರಾಗಿದ್ದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧರ್ಮವು ಅಫೀಮು ಆಗಬಲ್ಲುದೆಂಬ ಸತ್ಯವನ್ನು ಅರಿತ ಭಗತ್‌ ಸಿಂಗ್‌, ತನ್ನ ಕ್ರಾಂತಿಕಾರಿ ಹೋರಾಟವನ್ನು ಧರ್ಮ ನಿರಪೇಕ್ಷತೆಯ ಆಧಾರದಲ್ಲೇ ನಡೆಸಬೇಕೆಂಬ ಧ್ಯೇಯ ಹೊಂದಿದ್ದು, ಅಂತೆಯೇ ನಡೆದರು. ನಾವು ಅವರ ಮಾರ್ಗದರ್ಶನದ ಆಶಯಗಳನ್ನು ಈಡೇರಿಸುವ ದೃಢಸಂಕಲ್ಪ ಮಾಡಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಓವರ್ ಡೋಸ್ ಇಂಜೆಕ್ಷನ್‌ಗೆ ಏಳು ವರ್ಷದ ಬಾಲಕ‌ ಬಲಿ: ವೈದ್ಯ ಪರಾರಿ

“ಸಮಸ್ತ ದುಡಿಯುವ ವರ್ಗವನ್ನು ಸಂಘಟಿಸಿ ಭಗತ್ ಸಿಂಗ್ ಕಂಡಂತಹ ಸಮಾನತೆಯ ಸಮಾಜಕ್ಕಾಗಿ ಹೋರಾಟ ಮಾಡಲು ವಿದ್ಯಾರ್ಥಿ-ಯುವಜನರು ಬೀದಿಗಿಳಿಯಬೇಕಾಗಿದೆ. ಶಿಕ್ಷಣ ಪಡೆದರೂ ನಿರುದ್ಯೋಗದಂತಹ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವ ಲಕ್ಷಾಂತರ ಯುವಜನರು ಉದ್ಯೋಗದ ಹಕ್ಕಿಗಾಗಿ ಕ್ರಾಂತಿಕಾರಿ ಹೋರಾಟಗಳನ್ನು ಮುನ್ನೆಡೆಸುವುದು ಇಂದಿನ ಯುವ ಪೀಳಿಗೆಯ ಧ್ಯೇಯವಾಗಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರುಗಳಾದ ನಿರಂಜನ್ ಕುಮಾರ್, ಎಲ್ಲಪ್ಪ, ರವಿಚಂದ್ರನ್, ಆನಂದ್ ಕುಮಾರ್, ಹನೀಫ್ ಅಬಕಾರಿ, ಸಂತೋಷ್, ಮಾರೆಪ್ಪ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...