ರಾಯಚೂರು | ಒಳ ಮೀಸಲಾತಿ ಜಾರಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಬೈಕ್ ರ್ಯಾಲಿ, ಸಿ.ಎಂ ಪ್ರತಿಕೃತ ದಹಿಸಿ ಪ್ರತಿಭಟನೆ

Date:

ಎಸ್ ಸಿ,ಎಸ್ ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ವಿಫಲವಾದ ರಾಜ್ಯ ಸರ್ಕಾರದ ಕಾರ್ಯವೈಖರಿ ಖಂಡಿಸಿ ಕರ್ನಾಟಕ ರಾಜ್ಯ ಮಾದಿಗ ಪದವಿಧರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಬಾಬು ಜಗಜೀವನ್ ರಾಮ್ ವೃತ್ತದಿಂದ ಬೈಕ್ ರ್ಯಾಲಿ ನಡೆಸಿ ಬಳಿಕ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸಿಎಂ, ಡಿಸಿಎಂ, ಸಚಿವ ಮಹಾದೇವಪ್ಪ, ಶಿವರಾಜ ತಂಗಡಗಿ, ಪರಮೇಶ್ವರ, ಸೇರಿದಂತೆ ಇತರೆ ಸಚಿವರ ಭಾವಚಿತ್ರ ಧಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ.ಜಾತಿ, ಪ.ಪಂಗಡ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಸಂವಿಧಾನಬದ್ಧವಾಗಿ ಮಿಸಲಾತಿ ಪ್ರಮಾಣ ಹೆಚ್ಚಿಸಿ ಹಲವಾರು ವರ್ಷಗಳಿಂದ ಅನುಷ್ಟಾನ ಗೊಳಿಸುತ್ತಿರುವಾಗ ಜನಸಂಖ್ಯೆಗೆ ಅನುಗುಣವಾಗಿ ಸಿಗಬೆಕಾದ ಸಾಮಾಜಿಕ ನ್ಯಾಯದ ಪಾಲನ್ನು ನೀಡದೆ ಮೋಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಒಳ ಮೀಸಲಾತಿಯಲ್ಲಿ ಅನ್ಯಾಯ ಮಾಡುತ್ತಿರುವ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ಪ.ಜಾತಿಗೆ 15-17 ಮತ್ತು ಪ.ಪಂಗಡಕ್ಕೆ 3 -7 ಮಿಸಲು ಪ್ರಮಾಣ ಹೆಚ್ಚಳದಂತೆ ಉದ್ಯೋಗಗಳನ್ನು ನೀಡದೆ ಪರಿಶಿಷ್ಟ ಜಾತಿಗೆ ಶೇ.2 ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 4 ರಷ್ಟು ಮೀಸಲಾತಿ ನೀಡಿ ವಂಚಿಸಿದೆ. ಹೆಚ್ಚಿನ ಹುದ್ದೆಗಳನ್ನು ತಪ್ಪಿಸಿ 56432 ಹುದ್ದೆಗಳ ಭರ್ತಿಗೆ ಮುಂದಾದ ದಲಿತ ವಿರೋಧಿ ನೀತಿ ಹಿಂಪಡೆದು ಮತ್ತು 35 ವರ್ಷಗಳ ಸಾಮಾಜಿಕ ನ್ಯಾಯದ ಬೇಡಿಕೆ ಈಡೇರಿಸಿ ನೀಡಲಾದ ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರ ನಡೆಸಿರುವ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಮಾದಿಗ ಸಂಭಂದಿತ ಜಾತಿಗೆ ಪ.ಜಾತಿ ಪ್ರ ವರ್ಗ-ಎ ರಂತೆ ಸಿಗಬೇಕಾದ ಸುಮಾರು 3387ಕ್ಕು ಹೆಚ್ಚಿನ ಹುದ್ದೆಗಳನ್ನು ತಪ್ಪಿಸಲು ಕೈಗೊಂಡ ಸರ್ಕಾರದ ನಿರ್ಧಾರ ಹಿಂಪಡೆದುಕೊಳ್ಳಬೇಕು ಎಂದು ಅಗ್ರಹಿಸಿದರು.

ಶೇ.56 ರಷ್ಟು ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಿ ನ್ಯಾಯ ನೀಡಲು ಆಗದಿದ್ದಲ್ಲಿ ಪಜಾ 17 ರಷ್ಟು ಅಥವಾ 15 ರಷ್ಟು ಮೀಸಲಾತಿಯಲ್ಲಿ ಒಳ ಮಿಸಲಾತಿ ಕಲ್ಪಿಸಿ ಆದೇಶಸಿಸಬೇಕು, ಒಳ ಮೀಸಲಾತಿ ಇಲ್ಲದೆ ನೇಮಕಾತಿ ಮಾಡಲು ತರಾತುರಿಯಲ್ಲಿ ಹೊರಡಿಸಿರುವ ಸರ್ಕಾರದ ಆದೇಶ ಹಿಂಪಡೆಯಲು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದ್ವಿತೀಯ ಪಿಯು ಪರೀಕ್ಷೆ : ಮೊದಲ ದಿನ 16,434 ವಿದ್ಯಾರ್ಥಿಗಳು ಹಾಜರು, 1,067 ಗೈರು

ಪ್ರತಿಭಟನೆಯಲ್ಲಿ ಮಾದಿಗ ಸಮಾಜದ ಮುಖಂಡರುಗಳಾದ ಎಂ.ವಿರೂಪಾಕ್ಷಿ, ರವಿಂದ್ರ ಜಲ್ದಾರ್, ಎಸ್.ಮಾರೆಪ್ಪ ವಕೀಲ, ರಾಜು, ಹೇಮರಾಜ ಅಸ್ಕಿಹಾಳ, ಹನುಮಂತಪ್ಪ ಮನ್ನಾಪೂರ, ರಾಘವೇಂದ್ರ ಬೋರಡ್ಡಿ, ನರಸಿಂಹಲು, ಮಾದಿಗ ಪದವಿದರ ವೇದಿಕೆ ಅಧ್ಯಕ್ಷ ಶರಣು ತುಗ್ಗಲದಿನ್ನಿ, ರಾಜು ಮನ್ಸಲಾಪೂರ, ಮಲ್ಲಿಕಾರ್ಜುನ ಶಾಖವಾದಿ, ಗೊವಿಂದ ಬಾಪೂರ, ಸುರೇಶ ಬೋರಡ್ಡಿ, ನರಸಿಂಹ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...