ರಾಯಚೂರು | ಸೆ.8ರಂದು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Date:

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ರಾಜ್ಯ ಸರ್ಕಾರ ರೈತರ ಹಿತಾಕಾಯುವಲ್ಲಿ ವಿಫಲವಾಗಿದೆ. ಇನ್ನೂ ಬರ ಪ್ರದೇಶಗಳ ಘೊಷಣೆಯಾಗಿಲ್ಲ. ಕೂಡಲೇ ಬರ ಘೋಷಣೆ ಮಾಡಬೇಕು. ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೆಕು ಎಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಸೆ.8 ರಂದು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ್ ನೆಲಹಾಳ ಹೇಳಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು. “ಮಳೆ ಅಭಾವದಿಂದ ಬರ ಪರಸ್ಥಿತಿಯಿದೆ ಎಂದು ಹೇಳುವ ಸರ್ಕಾರ, ಬರ ಪ್ರದೇಶಗಳ ಘೋಷಣೆಗೆ ಮೀನಾಮೇಷ ಎಣಿಸುತ್ತಿದೆ. ಜಲಾಶಯಗಳು ಖಾಲಿಯಾಗಿ ನೀರಾವರಿ ಯೋಜನೆಗಳಿಗೂ ಸಮರ್ಪಕ ನೀರು ಪೂರೈಸುತ್ತಿಲ್ಲ. ವಿದ್ಯುತ್ ಕೊರತೆಯಿಂದ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತಿದೆ. ತುಂಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ನೀರು ಹರಿಸುವುದಾಗಿ ಭರವಸೆ ನೀಡಿದ್ದರೂ, ಇಂದಿಗೂ ಕೊನೆ ಭಾಗಕ್ಕೆ ನೀರು ಹರಿಸುತ್ತಿಲ್ಲ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರ ಹಿಡಿದು ನೂರು ದಿನ ಕಳೆಯುವಷ್ಟರಲ್ಲಿಯೇ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ, ಸರ್ಕಾರ ಸ್ಪಂದಸುತ್ತಿಲ್ಲ” ಎಂದು ಆರೋಪಿಸಿದ್ದಾರೆ.

“ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 4 ಸಾವಿರ ರೂ. ಪ್ರೋತ್ಸಾಹ ಧನವನ್ನೂ ನಿಲ್ಲಿಸಲಾಗಿದೆ. ರೈತರ ಮಕ್ಕಳಿಗೆ ಪ್ರೋತ್ಸಾಹಿಸಲು ಪ್ರಾರಂಭಿಸಲಾಗಿದ್ದ ರೈತ ವಿದ್ಯಾನಿಧಿ ಯೋಜನೆ, ಭೂ ಸಿರಿ ಯೋಜನೆಯ ಪ್ರೋತ್ಸಾಹ ಧನವೂ ಸ್ಥಗಿತಗೊಂಡಿದೆ. ಬೆಳೆ ಕೊಯ್ಲು ಮಾಡಲು ಬಿಜೆಪಿ ಸರ್ಕಾರ ನೂರು ಕೋಟಿ ರೂ. ಅನುದಾನ ನೀಡಿದ್ದ ರೈತಸಂಪದ ಯೋಜನೆಯನ್ನು ನಿಲ್ಲಿಸಲಾಗಿದೆ. ರೈತರ ಅಭಿವೃದ್ದಿಯನ್ನು ಮರೆತು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೂಡಿಕೆ ಮಾಡಲಾಗಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿಗೋಷ್ಠಿಯಲ್ಲಿ ಸುಲೋಚನಾ ಆಲ್ಕೂರು, ವಿಷ್ಣುವರ್ಧನರೆಡ್ಡಿ ಉಪಸ್ಥಿತರಿದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್, ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...