ರಾಯಚೂರು | ಕೂಲಿಕಾರರ ಹೆಸರಲ್ಲಿ ಬೋಗಸ್ ಹಾಜರಾತಿ: ಜೆಇ, ಪಿಡಿಒ ಮೇಲೆ ಕ್ರಮಕ್ಕೆ ಲಿಂಗಣ್ಣ ಮಕಾಶಿ ಆಗ್ರಹ

Date:

ರಾಯಚೂರು ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನ ಮಾಡಲಾಗುತ್ತಿದ್ದ ನಾಲಾ ಅಭಿವೃದ್ಧಿ ಕೆಲಸಗಳಲ್ಲಿ ಕೂಲಿಕಾರರು ಇಲ್ಲದೆ ಬೋಗಸ್ ಹಾಜರಾತಿ ಮಾಡುತ್ತಿರುವ ಜೆಇ, ಪಿಡಿಓ ಮೇಲೆ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯಿಂದ ತಾಲೂಕು ಪಂಚಾಯತ್ ಸಹಾಯ ನಿರ್ದೇಶಕ ಅಣ್ಣರಾವ್ ಅವರಿಗೆ ಮನವಿ ಸಲ್ಲಿಸಲಾಯಿತು.

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಬಯಸಿ ಅರ್ಜಿ ಸಲ್ಲಿಸಿದ ಕೂಲಿಕಾರರಿಗೆ ತಕ್ಷಣ ಕೆಲಸ ನೀಡಬೇಕು, ಕೆಲಸದಲ್ಲಿ ಇರುವ ಕೂಲಿಕಾರರಿಗೆ ಸರಿಯಾದ ಹಾಜರಿ ಸಮರ್ಪಕ ಕೂಲಿ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಕೆಲಸ ಮಾಡದೇ ಮನೆಯಲ್ಲಿ ಇರುವ ಕೂಲಿಕಾರರ ಹೆಸರಲ್ಲಿ ಬೋಗಸ್ ಹಾಜರಾತಿ ಹಾಕಿ ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗುತ್ತಿದೆ‌. ಬೋಗಸ್ ಹಾಜರಾತಿಗೆ ಕಡಿವಾಣ ಮಾಡುವಂತೆ ಅನೇಕ ಬಾರಿ ಪಿಡಿಓ ಮತ್ತು ಜೆಇ ಅವರ ಗಮನಕ್ಕೆ ತರಲಾಗಿದೆ. ಆದರೆ ಈ ಬಗ್ಗೆ ಎಚ್ಚೆತ್ತುಕೊಳ್ಳದೇ ಮನಬಂದಂತೆ ಎನ್ಎಂಎಂಎಸ್ ಹಾಜರಾತಿ ಮಾಡಲು ಮುಂದಾಗಿದ್ದರಿಂದ ಬೋಗಸ್ ಹಾಜರಾತಿ ಪ್ರತಿಗಳೊಂದಿಗೆ ಉದ್ಯೋಗ ಖಾತ್ರಿ ನಿರ್ವಹಣೆಯ ಸಹಾಯ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಮನಗರ | ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಆದ್ಯತೆ: ಪ್ರಗತಿಪರ ಸಂಘಟನೆಗಳಿಂದ ಸ್ವಾಗತ

ಇಡೀ ತಾಲೂಕಿನಲ್ಲಿ ಜಾಲಹಳ್ಳಿ ಗ್ರಾಮ ಪಂಚಾಯತಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ಕೂಲಿಕಾರರ ಸಂಖ್ಯೆಯೂ ಹೆಚ್ಚಾಗಿದೆ. ಪಿಡಿಓ ಮತ್ತು ನರೇಗಾ ಸಿಬ್ಬಂದಿಗಳ ಬೇಜವಬ್ದಾರಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಹಣ ದುರ್ಬಳಕೆ ಮಾಡಲಾಗುತ್ತಿದ್ದರೂ ನಿಯಂತ್ರಿಸಲಾಗದ ಪಿಡಿಓ ಮತ್ತು ಎನ್ಎಂಎಂಎಸ್ ಬೋಗಸ್ ಹಾಜರಾತಿ ಮಾಡುತ್ತಿರುವ ಜೆಇ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ದುಡಿಯುವ ಕೂಲಿಕಾರರಿಗೆ ಕೆಲಸ ಕೂಲಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ‌.

ಇದೇ ಸಂದರ್ಭದಲ್ಲಿ ತಾಲೂಕು ಸಮಿತಿ ಅಧ್ಯಕ್ಷ ಲಿಂಗಣ್ಣ ಮಕಾಶಿ, ಕಾರ್ಯದರ್ಶಿ ಬಸವರಾಜ, ಶಿವರಾಜ ಇದ್ದರು.

ವರದಿ : ಶಿವರಾಮ ಕಟ್ಟಿಮನಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...