ರಾಯಚೂರು | ಅಂಗನವಾಡಿ ಕೇಂದ್ರದಲ್ಲಿ 20 ದಿನಗಳಿಂದ ಉಪಹಾರವಿಲ್ಲ — ಸಾರ್ವಜನಿಕರ ಆಕ್ರೋಶ

Date:

ಸಿರವಾರ ತಾಲ್ಲೂಕು ಚಾಗಬಾವಿ ಗ್ರಾಮದ ವಾರ್ಡ್ ಸಂಖ್ಯೆ 1ರ ಅಂಗನವಾಡಿ ಕೇಂದ್ರ ಸಂಖ್ಯೆ 1ರಲ್ಲಿ ಕಳೆದ ಸುಮಾರು 20 ದಿನಗಳಿಂದ ಗ್ಯಾಸ್ ಖಾಲಿಯಾಗಿರುವ ಕಾರಣದಿಂದ ಮಕ್ಕಳಿಗೆ ಉಪಹಾರ ದೊರೆಯದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಕ್ಕಳಿಗೆ ಉಪಹಾರವಿಲ್ಲದೆ ಮೊಟ್ಟೆ ಕೈಯಲ್ಲಿ ಹಿಡಿದು ಮನೆಗೆ ಹಿಂತಿರುಗುವಂತಾದ ಘಟನೆ ನಡೆದಿದೆ.

ಸರ್ಕಾರ ಶಿಶು ಅಭಿವೃದ್ಧಿ ಇಲಾಖೆಗೆ ಕೋಟ್ಯಂತರ ರೂಪಾಯಿಗಳನ್ನು ಮಂಜೂರು ಮಾಡುತ್ತಿದ್ದರೂ, ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ಸ್ಥಳೀಯ ನಿವಾಸಿ ಮಾನವ ಬಂಧುತ್ವ ವೇದಿಕೆ ಮುಖಂಡ ಬಸವ ಛಾಗಭಾವಿ ಮಾತನಾಡಿ ಪಾಲಕರು ದಿನಗೂಲಿ ಕೆಲಸಕ್ಕೆ ತೆರಳುವ ಮುನ್ನ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳಿಸುತ್ತಾರೆ. ಮಕ್ಕಳು ಕೇಂದ್ರದಲ್ಲಿ ಉಪಹಾರ ಸೇವಿಸಿ ಮಧ್ಯಾಹ್ನ ಮನೆಗೆ ಬರುತ್ತಾರೆ ಎಂಬ ನಂಬಿಕೆಯಿಂದ ಅವರನ್ನು ಕಳುಹಿಸುತ್ತಿದ್ದರೂ, ಕಳೆದ 20 ದಿನಗಳಿಂದ ಕೇಂದ್ರದಲ್ಲಿ ಅಡುಗೆ ಸೌಲಭ್ಯವೇ ಇಲ್ಲದ ಸ್ಥಿತಿ ಉಂಟಾಗಿದೆ.

ಸಮಸ್ಯೆ ಬಗ್ಗೆ ಅಂಗನವಾಡಿ ಸಿಬ್ಬಂದಿಯವರು ಕೂಡ ಮೇಲಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ ಆದರೂ ಬಗೆಹರಿಸಿಲ್ಲ ಅಧಿಕಾರಿಗಳ ನಿರ್ಲಕ್ಷ್ಯ ಕಾರಣಕ್ಕೆ ಇಂತಹ ಪರಿಸ್ಥಿತಿ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯರಗೇರಾ ಹೋಬಳಿಗೆ ಬಸ್‌ ನಿಲ್ದಾಣ ನಿರ್ಮಾಣಕ್ಕೆ ; ಸಿಪಿಐಎಂಎಲ್ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ತಕ್ಷಣದ ಹಸ್ತಕ್ಷೇಪವನ್ನು ಬೇಡಿದ್ದಾರೆ. ಮಕ್ಕಳ ಪೌಷ್ಠಿಕತೆ ಹಾಗೂ ಆರೋಗ್ಯದ ವಿಚಾರದಲ್ಲಿ ಇಂತಹ ನಿರ್ಲಕ್ಷ್ಯ ಅಸಹ್ಯಕರ ಎಂದು ಗ್ರಾಮಸ್ಥರು ಖಂಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...