ರಾಯಚೂರು | ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವಷ್ಟೇ ಮುಖ್ಯ: ಚನ್ನಬಸವ

Date:

ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು ತೊಲಗಿಸಿ ಸಹಕಾರದೊಂದಿಗೆ ಬದುಕುವಂತಾಗಬೇಕು. ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವುದರಷ್ಟೇ ಮುಖ್ಯ ಎಂದು ಎಐಡಿವೈಒ ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್‌ ಅಭಿಪ್ರಾಯಪಟ್ಟರು.

ನಗರದ ಮಾವಿನಕೆರೆ ಉದ್ಯಾನವನದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ರಾಜಿರಹಿತ ಪಂಥದ ನಾಯಕ ಚಂದ್ರಶೇಖರ್ ಆಜಾದ್ ಅವರ ಸ್ಮರಣ ದಿನವನ್ನು ಆಚರಿಸಿ ಮಾತನಾಡಿದ ಅವರು, “ಆಜಾದ್ ಅವರು ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ತಮ್ಮದೇ ಆದ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಬಲ ಶಕ್ತಿಗಳು ದುರ್ಬಲರ ಮೇಲೆ ನಡೆಸುತ್ತಿದ್ದ ಶೋಷಣೆಯನ್ನು ಕೊನೆಗಾಣಿಸಬೇಕು ಎಂಬುದು ಅವರ ಹೋರಾಟದ ಮುಖ್ಯ ಉದ್ದೇಶವಾಗಿತ್ತು. ಅಂತಹ ಮಹನೀಯರ ದೇಶಪ್ರೇಮ, ತ್ಯಾಗ, ಬಲಿದಾನಗಳೇ ಇಂದು ನಾವು ಸ್ವತಂತ್ರವಾಗಿ ಬದುಕಲು ಕಾರಣ” ಎಂದರು.

“ಬ್ರಿಟಿಷರ ವಿರುದ್ಧ ನಡೆದ ಗುಂಡಿನ ಕಾಳಗದಲ್ಲಿ ಆಜಾದ್ ಮರಣ ಹೊಂದಿದರು. ಹೋರಾಟದ ಕಿಚ್ಚು ಅಂದಿನ ಯುವ ಜನರಿಗೆ ಸ್ಪೂರ್ತಿಯ ಸೆಲೆಯಾಗಿತ್ತು. ಅವರ ಜೀವನಾದರ್ಶಗಳು ಇಂದಿಗೂ ಜೀವಂತ. ಅಂತಹ ವೀರ ನಾಯಕರನ್ನು ಮತ್ತೆ ಮತ್ತೆ ಸ್ಮರಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ಅಗತ್ಯವೆಂದು” ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಹಿರಿಯ ಉಪನ್ಯಾಸಕ ಅಮೃತ್, ಎನ್ಎಸ್ಎಸ್ ಅಧಿಕಾರಿ ರಂಜಿತ್ ಕುಮಾರ್, ಉಪನ್ಯಾಸಕ ನರೇಶ್ ಕುಮಾರ್, ಪ್ರವೀಣ್ ಹಾಗೂ ಹಲವು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...