ರಾಯಚೂರು | ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ ನಗರಕ್ಕೆ ಕರೆದೊಯ್ದ ಚಾಲಕ-ನಿರ್ವಾಹಕ

Date:

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬದ್ವಿನ್ನಿ ಎಸ್‌ ಗ್ರಾಮದಿಂದ ಹೂವಿನಭಾವಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ, ಮಸ್ಕಿಗೆ ಕರೆದೊಯ್ದ ಈಶಾನ್ಯ ಸಾರಿಗೆ ಬಸ್‌ನ ಚಾಲಕ-ನಿರ್ವಾಹನ ವಿರುದ್ಧ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ದಿನನಿತ್ಯ ಹೂವಿನಭಾವಿ ಗ್ರಾಮದ ವಿದ್ಯಾರ್ಥಿಗಳು ಬದ್ವಿನ್ನಿ ಗ್ರಾಮದಲ್ಲಿರುವ ಶಾಲೆಗೆ ತೆರಳುತ್ತಾರೆ. ಬುಧವಾರ ಶಾಲೆ ಮುಗಿದ ಬಳಿಕ ವಿದ್ಯಾರ್ಥಿಗಳು ಹೂವಿನಭಾವಿ ಮರಳಲು ಬಸ್‌ ಹತ್ತಿದ್ದಾರೆ. ಆದರೆ, ಹೂವಿನಭಾವಿ ತೆರಳಲು ನಿರಾಕರಿಸಿದ ಬಸ್‌ ಚಾಲಕ-ನಿರ್ವಾಹಕರು ಗ್ರಾಮದ ಗೇಟ್‌ ಬಳಿಯೇ ಇಳಿಸುತ್ತೇವೆ. ನಡೆದುಕೊಂಡು ಗ್ರಾಮಕ್ಕೆ ಹೋಗಿಯೆಂದು ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಇದನ್ನು ಒಪ್ಪದ ವಿದ್ಯಾರ್ಥಿಗಳನ್ನು ಚಾಲಕ-ನಿರ್ವಾಹಕ ಮಸ್ಕಿಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳನ್ನು ಮಸ್ಕಿ ಕರೆದೊಯ್ದಿರುವ ಬಗ್ಗೆ ತಿಳಿದ ಪೋಷಕರು ಮತ್ತು ಹೋರಾಟಗಾರರು ಮಸ್ಕಿ ಬಸ್‌ ನಿಲ್ದಾಣಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಮಸ್ಕಿ ಘಟಕದ ವ್ಯವಸ್ಥಾಪಕ ತೆರಳಿ, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಕ್ಷಮೆಯಾಚಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ಚಾಲಕ-ನಿರ್ವಹಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...