ರಾಯಚೂರು | ಒಳಮೀಸಲಾತಿ ಜಾರಿಗೆ ಅಡ್ಡಿ; ಸಚಿವರು, ಅಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ

Date:

ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಅಡ್ಡಿ ಉಂಟು ಮಾಡುತ್ತಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ ಹಾಗೂ ಎಸ್.ಸಿ.ಪಿ., ಟಿ.ಎಸ್.ಪಿ. ಕೋ-ಆರ್ಡಿನೇಟರ್ ವೆಂಕಟಯ್ಯ ಸೇರಿ ಮೂವರನ್ನು ಬೇರೆ ಇಲಾಖೆಗೆ ವರ್ಗಾಯಿಸಬೇಕು ಎಂದು ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ರಾಯಚೂರು ಜಿಲ್ಲಾ ಘಟಕ ವತಿಯಿಂದ ಕೂಡಲೇ ವರ್ಗಾಯಿಸಿ ಎಂದು ಘೋಷಣೆ ಕೂಗಿ ಆಗ್ರಹಿಸಿದರು.

ಪ್ರತಿಭಟನೆ ಉದ್ದೇಶಿಸಿ ಎಸ್ ಮಾರೆಪ್ಪ ವಕೀಲ ಮಾತನಾಡಿ, “ರಾಜ್ಯ ಸರ್ಕಾರ ಕಳೆದ ಒಂದು ತಿಂಗಳಿನಿಂದ ಪರಿಶಿಷ್ಟ ಒಳ ಮೀಸಲಾತಿ ಸಂಬಂಧ ನಿರ್ಣಯಗಳನ್ನು ಕೈಗೊಂಡಿದೆ. ಆದರೆ ಆ ನಿರ್ಣಯಗಳಲ್ಲಿ ಹಲವಾರು ಲೋಪ ದೋಷಗಳಿದ್ದು, ಅಲೆಮಾರಿ ಸಮುದಾಯವನ್ನು ಸೇರಿಸುವ ಮೂಲಕ ಅನ್ಯಾಯ ಮಾಡಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 09 at 5.32.51 PM

ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳು ನಿರಂತರವಾಗಿ ದಾರಿ ತಪ್ಪಿಸುತ್ತಿದ್ದು, ಸರ್ಕಾರದಿಂದ ಬರುವ ಆದೇಶಗಳನ್ನು ಪಾಲನೆ ಮಾಡದೇ ಇರುವುದಾಗಿ ಅವರು ದೂರಿದರು. ಬಡ್ತಿ ಹಾಗೂ ಬ್ಲಾಕ್ ಲಾಗ್ ಸಂಬಂಧಿತ ವಿಷಯಗಳಲ್ಲಿಯೂ ತಡೆ ಉಂಟುಮಾಡುತ್ತಿರುವುದರಿಂದ ಸಾವಿರಾರು ಹಿಂದುಳಿದ ಸಮುದಾಯಗಳ ಜೊತೆಗೆ ಚಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಗಮೋಹನದಾಸ್ ಆಯೋಗದ ವರದಿಯನ್ನು ಸ್ವೀಕರಿಸಿ ಬಹಿರಂಗಪಡಿಸಿ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. 59 ಅಲೆಮಾರಿ ಸಮುದಾಯಗಳಿಗೆ ಶೇ.1 ರಷ್ಟು, 17 ಸಮುದಾಯಗಳುಳ್ಳ ಮಾದಿಗ-ಮಾದಿಗ ಸಂಬಂಧಿತ ಸಮುದಾಯಗಳಿಗೆ ಶೇ.6 ರಷ್ಟು, 19 ಸಮುದಾಯಗಳುಳ್ಳ ಛಲವಾದಿ-ಹೊಲೆ ಸಮುದಾಯಗಳಿಗೆ ಶೇ.5 ರಷ್ಟು ಸ್ಪೃಶ್ಯ ಸಮುದಾಯಗಳಾದ ಬಂಜಾರ, ವಡ್ಡ, ಕೊರಮ, ಕೊರಚ, 59 ಅಲೆಮಾರಿ ಸಮುದಾಯಗಳಿಗೆ ಶೇ.5 ರಂತೆ ಒಳಮೀಸಲಾತಿ ಕಲ್ಪಿಸಲಾಯಿತು. 2022 ನೇ ಸಾಲಿನ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದ ಡಿ.ಪಿ.ಎ.ಆರ್. ಕಡತವನ್ನು ದುರುದ್ದೇಶದಿಂದ ವಾಪಸ್ ಮಾಡುವ ಸಂಭವವಿದೆ. ಈ ಎಲ್ಲಾ ಗೊಂದಲಗಳಿಗೆ ಮುಖ್ಯ ಕಾರಣವೇ ಸಮಾಜ ಕಲ್ಯಾಣ ಇಲಾಖೆಯು ಒಂದೇ ಸಮುದಾಯದ ಹತೋಟಿಯಲ್ಲಿ ಇರುವುದರಿಂದ ಇತರೆ ಪರಿಶಿಷ್ಟ ಸಮುದಾ ಯಗಳ ಹಿತಾಸಕ್ತಿಯನ್ನು ಬಲಿಕೊಡಲಾಗುತ್ತದೆ ಎಂದು ದೂರಿದರು.

WhatsApp Image 2025 09 09 at 5.35.27 PM

ಸಮಾಜ ಕಲ್ಯಾಣ ಸಚಿವ ಮತ್ತು ಸಮಾಜ ಕಲ್ಯಾಣ ಇಲಾಖೆಯಲ್ಲಿನ ಪ್ರಮುಖ ಹುದ್ದೆಗಳನ್ನು ಹೊಂದಿದ ಹೊಲೆಯ-ಛಲವಾದಿ ಸಮುದಾಯದ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು, ಒಂದೇ ಸಮುದಾಯದ ಆಡಳಿತ ಆ ಸಮುದಾಯದ ಪಕ್ಷಪಾತಿತನವೇ ಆಗುತ್ತದೆ ಎಂದು ಆಪಾದಿಸಿದರು. ಹೊಲೆಯ-ಛಲವಾದಿ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಊಟಿ ಚಿನ್ನದ ಗಣಿ ರಸ್ತೆ ದುರಸ್ತಿಗೆ ಕೆಪಿಆರ್ ಎಸ್ ಆಗ್ರಹ

ಈ ಸಂದರ್ಭದಲ್ಲಿ ಹೇಮರಾಜ ಅಸ್ಕಿಹಾಳ, ಶಿವರಾಯ ಅಕ್ಕರಕಿ, ಎಸ್ ಮಾರೆಪ್ಪ ವಕೀಲ, ಹನುಮಂತ ಮನ್ನಾಪೂರ, ನರಸಿಂಹಲು ಮರ್ಚಟಾಳ, ಶ್ರೀನಿವಾಸ ಕೊಪ್ಪರ, ತಾಯಪ್ಪ ಗಧಾರ, ಲಕ್ಷ್ಮಣ ಕಲ್ಲೂರು, ಹನುಮಂತ ಕೋಟೆ ಸೇರಿದಂತೆ ಸಮುದಾಯದ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...