ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿ

Date:

ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ ಕುತ್ತು ಬಂದಿದೆ.

ಬೆಕ್ಕುಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದೆ ಸಾವನ್ನಪ್ಪುತ್ತಿವೆ. ಪರ್ಶಿಯನ್ ಬೆಕ್ಕುಗಳನ್ನು ಸಾಕಿಕೊಂಡಿರುವ ಪ್ರಾಣಿಪ್ರಿಯರಲ್ಲಿ ಈಗ ಆತಂಕ ಹೆಚ್ಚಾಗುತ್ತಿದೆ. ಎಲ್ಲ ಜಾತಿಯ ಬೆಕ್ಕುಗಳಿಗೂ ಈ ವೈರಸ್ ಹರಡಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಳೆದ 20 ದಿನಗಳಲ್ಲಿ 70 ಬೆಕ್ಕುಗಳಲ್ಲಿ ವೈರಸ್ ಕಾಣಿಸಿಕೊಂಡಿದೆ. ಅದರಲ್ಲಿ 38 ಬೆಕ್ಕುಗಳು ಸಾವನ್ನಪ್ಪಿವೆ.


ವಿಚಿತ್ರ ಕಾಯಿಲೆಯಿಂದ ಬೆಕ್ಕುಗಳ ಸ್ಥಿತಿ ನೋಡಿ ಬೆಕ್ಕು ಸಾಕಿದ ಮಾಲೀಕರಲ್ಲಿ ಆತಂಕ ಸೃಷ್ಟಿಯಾಗಿದೆ.ಈ‌ ಬಗ್ಗೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಎಸ್.ಎಸ್.ಪಾಟೀಲ್ ಮಾತನಾಡಿ, ಈ ವೈರಸ್ ಇಂದು‌ ನಿನ್ನೆಯದ್ದಲ್ಲ ಅನೇಕ ವರ್ಷಗಳಿಂದ ಇದೆ ಆದರೆ ಬಯಲಿಗೆ ಬರುತ್ತಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ಕರ್ತವ್ಯಲೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು

ಬೆಕ್ಕುಗಳು ಚಿಕ್ಕ ಮೂರು ವಾರದ ಮರಿಗಳಿದ್ದಾಗಲೇ ವ್ಯಾಕ್ಸಿನೇಶನ್ ಮಾಡಬೇಕಿದೆ. ಅದಾದ ಬಳಿಕ ಬೂಸ್ಟರ್ ಡೋಸ್ ನೀಡಬೇಕು. ಆದರೆ, ಈ ವ್ಯಾಕ್ಸಿನ್ ಸರ್ಕಾರದಿಂದ ಪೂರೈಕೆಯಾಗುತ್ತಿಲ್ಲ. ಖಾಸಗಿಯವರಿಂದಲೇ ಖರೀದಿಸಬೇಕಿದ್ದು, 900 ರೂ. ಖರ್ಚಾಗುತ್ತದೆ. ಬೆಕ್ಕು ಸಾಕಿದವರು ವ್ಯಾಕ್ಸಿನ್ ಹಾಕಿಸಿದರೆ ಬೀದಿ ಬೆಕ್ಕುಗಳಿಗೆ ಯಾವುದೇ ವ್ಯಾಕ್ಸಿನ್ ಸಿಗದೆ ಬೇಗನೇ ವೈರಸ್‌ಗೆ ತುತ್ತಾಗುತ್ತಿವೆ. ಇದು ಬೆಕ್ಕುಗಳಿಂದ‌ ಬೆಕ್ಕುಗಳಿಗೆ ಮಾತ್ರ ಹರಡುತ್ತದೆ. ಈ ವೈರಸ್ ಮನುಷ್ಯರಿಗೆ ಯಾವುದೇ ಅಪಾಯ ತರುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...