ರಾಯಚೂರು | ಚುನಾವಣಾ ಆಯೋಗವನ್ನು ಹಿತಾಸಕ್ತಿಗೆ ಬಳಸಲು ಕೇಂದ್ರ ಸರ್ಕಾರ-ಆರ್‌ಎಸ್‌ಎಸ್ ಸಂಚು: ಕೆ ಪ್ರಕಾಶ

Date:

ಚುನಾವಣಾ ಆಯೋಗವನ್ನು ಪೂರ್ಣವಾಗಿ ಹಿತಾಸಕ್ತಿಗೆ ಬಳಸಿಕೊಳ್ಳಲು ಕಾನೂನು ಬದ್ಧವಾಗಿ ಮಾಡಲು ಕೇಂದ್ರ ಬಿಜೆಪಿ ಸರ್ಕಾರ ಆರ್‍ಎಸ್‍ಎಸ್ ಜೊತೆಗೂಡಿಕೊಂಡು ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ನಡೆಸಲಾಗುತ್ತಿದೆ ಎಂದು ಸಿಪಿಐ(ಎಂ)ನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ ಹೇಳಿದರು.

ಅವರಿಂದು ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಎಸ್‍ಐಆರ್ ಹೆಸರಿನಲ್ಲಿ ಮತ ಅಧಿಕಾರಿ ನಿರಾಕರಣೆ ಕುರಿತು ದುಂಡು ಮೇಜಿನ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಸಂವಿಧಾನವನ್ನು ಸಮಗ್ರವಾಗಿ ತಿದ್ದುಪಡಿ ಮಾಡುವ ಮೂಲಕ ಹಿಂದೂ ರಾಷ್ಟ್ರ ಮಾಡುವ ಅವಕಾಶವನ್ನು ಬಯಸುತ್ತಿದ್ದರು. ಅದರ ಅವಕಾಶ ಸಿಕ್ಕಿಲ್ಲ
ಎಂಬುವ ಹಪಾಹಪಿ ಆರ್.ಎಸ್.ಎಸ್ ಮತ್ತು ಬಿಜೆಪಿಗೆ ಇದೆ. ಏನಾದರು ಮಾಡಬೇಕು ಎಂಬುವ ಹಿನ್ನೆಯಲ್ಲಿ ಬೇರೆ ಬೇರೆ ವಿಧಾನವನ್ನು ಮಾಡಲು ಮುಂದಾಗಿದ್ದಾರೆ. ಮುಖ್ಯವಾಗಿ ಚುನಾವಣಾ ಆಯೋಗವನ್ನು ಪೂರ್ಣವಾಗಿ ಹಿತಾಸಕ್ತಿಗೆ ಬಳಸಿಕೊಳ್ಳಲು ಕಾನೂನು ಬದ್ಧವಾಗಿ ಮಾಡಲು ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೆಯೂ ಎಸ್‍ಐಆರ್ ನಡೆದಿದೆ. ಆದರೆ ನಿಯಮಗಳು ಬೇರೆಯಾಗಿದ್ದವು. ರಾಜ್ಯದಲ್ಲಿ 2002ರಲ್ಲಿ ನಡೆದಿದೆ. ಆಗ ನಡೆದಿದ್ದೆ ಗೊತ್ತಾಗಿದ್ದಿಲ್ಲ. ಆದ್ದರಿಂದ ರಾಜ್ಯ ಚುನಾವಣಾ ಆಯೋಗಕ್ಕೆ ಆಗ ಕೇಳಿದ್ದ ದಾಖಲೆಗಳ ಪಟ್ಟಿಗಳನ್ನು ನೀಡಿ ಎಂದು ಕೇಳಲಾಗಿತ್ತು ಇಂದಿಗೂ ನೀಡಿಲ್ಲ, ಆ ಪಟ್ಟಿಯಲ್ಲಿ ಇಲ್ಲದಿರುವ ನಿಯಮಗಳು, ಈಗ ಬಂದಿವೆ ಆದ್ದರಿಂದಲೇ ಪಟ್ಟಿಯನ್ನು ಆಯೋಗ ನೀಡುತ್ತಿಲ್ಲ. ಈ ಕುರಿತು ಜನರನ್ನು ಜಾಗೃತಿಗೊಳಿಸಬೇಕಾಗಿದೆ ಎಂದರು.

ಇದೇ ವೇಳೆ ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ.ರಝಾಕ್ ಉಸ್ತಾದ್ ಮಾತನಾಡಿ, ಚುನಾವಣೆಗಳನ್ನು ಗೆಲ್ಲಲು ಬೇಕಾದ
ದಾರಿಗಳನ್ನು ಬಿಜೆಪಿ ಕೇಂದ್ರ ಸರ್ಕಾರ ಕಂಡುಕೊಳ್ಳುತ್ತಿದೆ. ಬಿಹಾರದಲ್ಲಿ 25 ಸಾವಿರಕ್ಕೂ ಹೆಚ್ಚಿನ ಓಟುಗಳನ್ನು ಡಿಲಿಟ್ ಮಾಡಲಾಗಿದೆ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ತೋರಿಸಲಾಯಿತು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲಾಯಿತು. ಇಡೀ ಕಾರ್ಯವನ್ನು ತಮಗೆ ಬೇಕಾದಂತೆ ಮಾಡಿಕೊಂಡಿದ್ದಾರೆ ಎಂಬುವುದು ತಿಳಿಯುತ್ತದೆ ಎಂದರು.

ಬಿಜೆಪಿ ಸರ್ಕಾರಕ್ಕೆ ದೇಶದಲ್ಲಿ ಜನರು ಶಾಂತಿಯಿಂದ ನೆಮ್ಮದಿಯಿಂದ ಬದುಕಬಾರದೆಂಬ ಮನಸ್ಸು ಆರ್.ಎಸ್.ಎಸ್ ಮತ್ತು ಬಿಜೆಪಿಗೆ ಇದೆ. ಅವರು ಆರೋಪ ಮಾಡುವುದೆಲ್ಲ ತಮ್ಮ ವಿರೋಧಿ ಪಕ್ಷದ ರಾಜ್ಯ ಸರ್ಕಾರಗಳ ಮೇಲೆ ಮಾಡುತ್ತಿದ್ದಾರೆ. ತಾವು ಜವಾಬ್ದಾರಿಯಿಂದ ನುಣಿಚಿಕೊಂಡು. ತಮ್ಮ
ಅಸಮರ್ಥತೆಯನ್ನು ದೇಶದ ಜನರ ಮೇಲೆ ಹೇರುವ ಕೆಲಸ
ಮಾಡುತ್ತಿದ್ದಾರೆ. ಆದ್ದರಿಂದ ಎಸ್‍ಐಆರ್ ಮೂಲಕ ಜನರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ತಿಳಿಸಿದರು. ಸಭೆಯನ್ನು ಉದ್ದೇಶೀಸಿ ಅನೇಕ ಮುಖಂಡರುಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನೆ ಕಳ್ಳತನ ; 88,000 ರೂ ಜಪ್ತಿ ಮೂವರ ಆರೋಪಿ ಬಂಧನ

ಈ ಸಂದರ್ಭದಲ್ಲಿ ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ
ಮಾಲೀಪಾಟೀಲ್, ಆಮ್ ಆದ್ಮಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ನಸರತ್, ಸಿಪಿಐಎಂಎಲ್‍ನ ನಾಗರಾಜ ಪೂಜಾರ್, ಸಿಪಿಎಂನ ರಾಜ್ಯ ಕಾರ್ಯದರ್ಶಿ ಚಂದ್ರಪ್ಪ ಹೊಸಕೇರೆ, ಜಿಲ್ಲಾ
ಕಾರ್ಯದರ್ಶಿ ಕೆ.ಜಿ.ವೀರೇಶ, ಖಾಜಾ ಅಸ್ಲಂ , ಜಾನವೆಸ್ಲಿ, ಜೈಭೀಮ್, ಡಿ.ಎಸ್.ಶರಣಬಸವ, ಎಚ್.ಪದ್ಮಾ , ಮಾರೆಪ್ಪ ಹರವಿ, ವಿಜಯಲಕ್ಷ್ಮಿ, ಅಜೀಜ್ ಜಾಗೀರದಾರ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...