ರಾಯಚೂರು | ಕೇಂದ್ರ ಸರ್ಕಾರ 29 ರೂ.ಗೆ ಕೆಜಿ ʼಭಾರತ್‌ ಅಕ್ಕಿʼ ಜನರಿಗೆ ಅನುಕೂಲವಾಗಲಿದೆ: ಸಂಸದ ರಾಜಾ ಅಮರೇಶ್ವರ ನಾಯಕ

Date:

ಗುಣಮಟ್ಟದ ಆಹಾರ ಸಾಮಾನ್ಯ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗುಣಮಟ್ಟದ ಅಕ್ಕಿಯನ್ನು 29 ರೂ.ಗೆ ಕೆಜಿ ʼಭಾರತ್‌ ಅಕ್ಕಿʼಯನ್ನು ನೀಡುತ್ತಿದ್ದು, ಇದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಜನ ಸಾಮಾನ್ಯರು ಪಡೆದುಕೊಳ್ಳಬೇಕು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

ರಾಯಚೂರಿನ ಎಪಿಎಂಸಿ ಅವರಣದಲ್ಲಿ ಕೇಂದ್ರ ಸರ್ಕಾರ ಭಾರತ್‌ ಅಕ್ಕಿ ವಿತರಣೆ ಕಾರ್ಯಕ್ರಮದಲ್ಲಿ ಬಲೂನ್ ಹಾರಿಸಿ ಉದ್ಘಾಟಿಸಿದ ಅವರು ನಂತರ ಮಾತನಾಡಿದರು. “ಕೇಂದ್ರ ಸರ್ಕಾರ ಈಗಾಗಲೇ ಗರೀಬ್ ಕಲ್ಯಾಣ ಯೋಜನೆಯಡಿ ದೇಶದಾದ್ಯಂತವಾಗಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಐದು ಕೆಜಿ ಅಕ್ಕಿ ವಿತರಣೆ ಮಾಡುತ್ತಿದೆ. ಬಡ ಜನರಿಗೆ ಗುಣಮಟ್ಟದ ಅಕ್ಕಿಯನ್ನು ನೀಡುವ ಮೂಲಕ ದೇಶದಲ್ಲಿ ಯಾರೂ ಹಸಿವಿನಿಂದ ಇರದೇ ಬಡವರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ” ಎಂದರು.

ಇದೀಗ ಭಾರತ ಅಕ್ಕಿ ಯೋಜನೆಯಡಿ ಜಾರಿಗೊಳಿಸಿದ್ದು, ಯಾವ ಪ್ರದೇಶದಲ್ಲಿ ಆಹಾರ ಧಾನ್ಯ ಹೆಚ್ಚಾಗಿ ಬೆಳೆಯುವುದು ಮತ್ತು ಬಳಕೆ ಮಾಡುವುದು ಮಾಡುತ್ತಾರೆ ಆ ಭಾಗದಲ್ಲಿ ಅತ್ಯಂತ ಕಡಿಮೆ ಧರದಲ್ಲಿ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರದ ಯೋಜನೆಗಳನ್ನು ಜಿಲ್ಲೆಗೆ ತರುವ ಮೂಲಕ ಅಭಿವೃದ್ಧಿಗೆ ಆಧ್ಯತೆ ನೀಡಿದೆ, ಚತುಷ್ಪಥ ರಸ್ತೆ, 6 ವೇ ಲೈನ್ ರಸ್ತೆ ಜಿಲ್ಲೆಯಲ್ಲಿ ಮಾಡಲಾಗುತ್ತಿದೆ, ರಾಯಚೂರು ಸುತ್ತಲೂ ರಸ್ತೆ ನಿರ್ಮಾಣದಿಂದ ಜಿಲ್ಲೆ ಅಭಿವೃದ್ಧಿಯಾಗಲಿದೆ, ಏಮ್ಸ್ ರಾಯಚೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದರ ಜೊತೆಗೆ ನಿಯೋಗ ಭೇಟಿಯಾಗಿದೆ ಎಂದರು.

ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ಧಾರವಾಡದಲ್ಲಿ ಏಮ್ಸ್ ಸ್ಥಾಪನೆಗೆ ಶಿಫಾರಸು ಪತ್ರ ಹೋಗಿದ್ದು, ಅದನ್ನು ಪರಿಗಣ ಸಿಲ್ಲ, ಇದೀಗ ಕಾಂಗ್ರೆಸ್ ಸರ್ಕಾರವಿದ್ದು, ಏಮ್ಸ್ ರಾಯಚೂರಿನಲ್ಲಿ ಸ್ಥಾಪನೆಗೆ ಪತ್ರ ಬರೆದಿದೆ, ನಾವು ಕೇಂದ್ರಕ್ಕೆ ಪತ್ರ ಬರೆದು ಮಾತನಾಡಿದ್ದೇವೆ, ಎಂದು ತಿಳಿಸಿದರು.

ಕೇಂದ್ರದಿಂದ ತಂಡ ಕಳುಹಿಸಲು ಒಪ್ಪಿಗೆ ಸೂಚಿಸಿದ್ದು ತಂಡವು ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಭೂಮಿ ವೀಕ್ಷಣೆ ನೀರಿನ ಲಭ್ಯತೆ ಹಾಗೂ ವಿದ್ಯುತ್ ಸರಬರಾಜು ಬಗ್ಗೆ ಕೇಂದ್ರಕ್ಕೆ ವರದಿ ನೀಡಲಿದೆ ಎಂದು ತಿಳಿಸಿದರು.

ಶಾಸಕ ಶಿವರಾಜ ಪಾಟೀಲ್ ಮಾತನಾಡಿ, ಜಗತ್ತಿನ ಯಾವುದೆ ದೇಶದಲ್ಲಿ ಈ ವ್ಯವಸ್ಥೆ ಇಲ್ಲ, ಇಂತಹ ವ್ಯವಸ್ಥೆ ದೇಶದಲ್ಲಿ ಮಾತ್ರ ಕಾಣಬಹುದು, ದೇಶವು ಅಭಿವೃದ್ಧಿಯತ್ತ ಸಾಗುತಿದ್ದು, ಐದನೇ ಸ್ಥಾನದಲ್ಲಿದೆ. ದೇಶದಲ್ಲಿನ ಅತ್ಯಂತ ಕಡು ಬಡವರಿಗೆ ಗುಣಮಟ್ಟದ ಅಕ್ಕಿಯನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಮಾದರಿಯಾಗಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಕೆಜಿ ಅಕ್ಕಿ ಕೊಡಲು ಆಗದೇ ಖಾತೆಗೆ ಹಣ ಜಮಾ ಮಾಡುತ್ತಿದ್ದಾರೆ, ಅದೂ ಸಹ ಕೆಲವರಿಗೆ ಬಂದಿದೆ ಇನ್ನು ಕೆಲವರಿಗೆ ಬಂದಿಲ್ಲ, ಗೃಹಿಣ ಯರಿಗೆ 2 ಸಾವಿರ ಖಾತೆಗೆ ಜಮಾ ಮಾಡುತ್ತೇವೆ ಎಂದು ಹೇಳಿದ್ದು, ಅದೂ ಸಹ ಎಲ್ಲಿಗೂ ತಲುಪುತ್ತಿಲ್ಲ, ಉಚಿತ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದು ಯಾರಿಗೆ ಬರುತ್ತಿದೆ ಎಂದು ಕೇಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹರವಿ ನಾಗನಗೌಡ, ವರ್ತಕ ಲಕ್ಷ್ಮಿ ನಾರಾಯಣ, ಸುಂದರ್, ರಾಮಕಿಶೋರ್, ಶ್ರೀನಿವಾಸರೆಡ್ಡಿ, ನಾಗರಾಜ, ರವಿಂದ್ರ ಜಲ್ದಾರ್, ವಕ್ಫ್ ಬೋರ್ಡ್ ಅಧ್ಯಕ್ಷ ಸೈಯದ್ ಮುಕ್ತಿಯಾರ್ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...