ರಾಯಚೂರು | ಅಂಬೇಡ್ಕರ್‌ಗೆ ಅವಮಾನಿಸಿದ ಅಮಿತ್ ಶಾ ಗಡಿಪಾರಿಗೆ ಚಲವಾದಿ ಮಹಾಸಭಾ ಮಹಿಳಾ ಘಟಕ ಆಗ್ರಹ

Date:

ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ಮಹಿಳಾ ಘಟಕದ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಲೋಕಸಭಾ ಚಳಿಗಾಲ ಆದಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಡಿಸೆಂಬರ್‌ 18ರಂದು ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ಖಂಡನೀಯ” ಎಂದರು.

“ಅಂಬೇಡ್ಕ‌ರ್ ಹೆಸರು ಹೇಳುವುದು ಈಗ ಶೋಕಿಯಾಗಿಬಿಟ್ಟಿದೆ. ಇಷ್ಟೊಂದು ಬಾರಿ ದೇವರು ಹೆಸರು ಹೇಳಿದ್ದರೆ ಏಳು ಜನ್ಮಗಳವರಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತೆಂದು ಲೋಕಸಭಾ ಕಲಾಪದಲ್ಲಿ ನಾಲಿಗೆ ಹರಿಬಿಟ್ಟು ಬಾಬಾ ಸಾಹೇಬರಿಗೆ ಅವಮಾನ ಮಾಡುವ ಮೂಲಕ ರಾಷ್ಟ್ರದ್ರೋಹ ಕೃತ್ಯ ಎಸಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂಥ ಹೇಳಿಕೆ ಕೋಮು ಗಲಭೆಗಳಿಗೆ ಅವಕಾಶ ಕಲ್ಪಿಸುತ್ತಿದೆ. ಸಂವಿಧಾನದ ಅಡಿಯಲ್ಲಿ ಬಹುದೊಡ್ಡ ಜವಾಬ್ದಾರಿ ವಹಿಸಿಕೊಂಡ ಕೇಂದ್ರ ಗೃಹಸಚಿವ ಈ ರೀತಿ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ್ದು, ತಮ್ಮ ಸ್ಥಾನಕ್ಕೆ ಅಗೌರವ ತೋರಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಮಿತ್ ಶಾ ರಾಜೀನಾಮೆಗೆ ದಲಿತರಪರ ಹೋರಾಟಗಾರರ ಆಗ್ರಹ

“ದೇಶದಲ್ಲಿ ಹಿಂದೂ ಕೋಡ್ ಬಿಲ್ ಜಾರಿಗೆ ತಂದು ದೇಶದ ಎಲ್ಲ ಮಹಿಳೆಯರಿಗೆ ಸಮಾನ ಅವಕಾಶ ಮಾಡಿಕೊಡಲಾಗಿದೆ. ಅಂಬೇಡ್ಕರ್ ನಮಗೆ ನಿತ್ಯ ಸ್ಮರಣೆ. ಅವರನ್ನು ಈ ದೇಶದ ಪ್ರತಿ ಪ್ರಜೆಯೂ ಮರೆಯುವಂತಿಲ್ಲ” ಎಂದರು.

ಈ ಸಂದರ್ಭದಲ್ಲಿ ಈರಮ್ಮ, ಲಲಿತಾ ಆರೋಲೀ ಕರ್, ಅರ್ಚನಾ ಸುಂಕಾರಿ, ಸುಜಾತಾ ದಾದಾಸ್, ನಾಗರತ್ನ, ಲಕ್ಷ್ಮಿ, ಸಾವಿತ್ರಿ, ಪ್ರಿಯದರ್ಶಿನಿ ನಂದಿನಿ, ಮೀನಾಕ್ಷಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...