ರಾಯಚೂರು | ಬಿಜೆಪಿಯ ದುರಾಡಳಿತದಿಂದ ಕಾಂಗ್ರೆಸ್‌ಗೆ ಅಧಿಕಾರ: ಚಾಮರಸ ಮಾಲಿ ಪಾಟೀಲ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಕಾರ್ಡ್ ನೀಡಿದ್ದರಿಂದ ರಾಜ್ಯ ವಿಧಾನಸಭೆಯಲ್ಲಿ‌ ಬಹುಮತದಿಂದ ಗೆದ್ದಿದ್ದು ಎಂಬುದು ಅವೈಜ್ಞಾನಿಕ. ಬಿಜೆಪಿಯ ಮಿತಿಮೀರಿದ ಭ್ರಷ್ಟಾಚಾರ, ಕೋಮು‌ ಧೃವೀಕರಣ, ಜಾತಿವಾದದಿಂದ ಬೇಸತ್ತ ಜನರು ಬದಲಾವಣೆ ಬಯಸಿ ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಹಾಗಾಗಿ, ಕಾಂಗ್ರೆಸ್‌ ಈಗ ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು ಎಂದು ರೈತ ಸಂಘದ ಗೌರವ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ ಒತ್ತಾಯಿಸಿದರು.

ರಾಯಚೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಬಿಜೆಪಿ ಸರ್ಕಾರ ಹಲಾಲ್ ಕಟ್, ಹಿಜಾಬ್, ಜಾತ್ರೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ಬಹಿಷ್ಕಾರ ಸೇರಿದಂತೆ ಒಂದು ಸಮುದಾಯವನ್ನು ಗುರಿಯಾಗಿಸಿ ಸಮುದಾಯಗಳ ಮಧ್ಯೆ ಎತ್ತಿಕಟ್ಟುವ ಕೆಲಸ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಯ ದುರಾಡಳಿತ, ಜಾತಿವಾದವೇ ಕಾಂಗ್ರೆಸ್ ಗೆಲುವಿಗೆ ಕಾರಣ” ಎಂದು ಹೇಳಿದರು.

“ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಂದೆ ಅನೇಕ ಸವಾಲುಗಳು ಇವೆ. ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಚಾರ ಮೀತಿ ಮೀರಿದೆ. ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪಬೇಕು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 15 ವರ್ಷಗಳಿಂದ ಜಿಲ್ಲೆ ಮಂತ್ರಿ ಸ್ಥಾನದಿಂದ ವಂಚಿತವಾಗಿತ್ತು. ಪ್ರಸ್ತುತ ಸರ್ಕಾರದಲ್ಲಿ ಜಿಲ್ಲೆಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಸ್ವಾಗತಾರ್ಹ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿಜಾಮ ಕಾಲದಲ್ಲಿ ನಿರ್ಮಿಸಿದ ಕೆರೆಗಳು ಸಾಕಷ್ಟು ಇವೆ. ಅವುಗಳ ಪುನರುಜ್ಜಿವನಕ್ಕೆ ಮುಂದಾದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಸರ್ಕಾರ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ರಾಜ್ಯ ಮತ್ತು ಜಿಲ್ಲೆಯ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಶೀಘ್ರದಲ್ಲಿಯೇ ರೈತ ಸಂಘ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪರಿಹರಿಸಲು ಮನವಿ ಸಲ್ಲಿಸಲಾಗುವುದು‌ ಎಂದರು.

ಈ ಸುದ್ದಿ ಓದಿದ್ದೀರಾ? ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

“ಜಿಲ್ಲೆಯಲ್ಲಿ ನಿಗಧಿತ ದರಕ್ಕಿಂತ ಹೆಚ್ಚಿನ ದರಕ್ಕೆ ಹತ್ತಿ ಮತ್ತು ಮೆಣಸಿನ ಬೀಜ ಮಾರಾಟ ಮಾಡಲಾಗುತ್ತಿದೆ. ಕೃಷಿ ಇಲಾಖೆ ಆಕ್ರಮಕ್ಕೆ ಕಡಿವಾಣ ಹಾಕಬೇಕು. 400 ಗ್ರಾಂ ಹತ್ತಿ ಬೀಜ ₹700 ದರ ಇದ್ದು, ರೈತರಿಗೆ ₹2000ಕ್ಕೆ ಮಾರಾಟ ಮಾಡಿ ವಂಚನೆ ಮಾಡಲಾಗುತ್ತಿದೆ. ಹತ್ತಿ ಬೀಜ ಕೃತಕ ಅಭಾವ ಸೃಷ್ಟಿಸಿ ದುಪ್ಪಟ್ಟು ದರಕ್ಕೆ ಮಾರಾಟ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

“ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕ ಸಾವನ್ನಪ್ಪಿರುವುದು ದುರಂತ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಶುದ್ಧ ಕುಡಿಯುವ ನೀರು ಪೂರೈಕೆಗೆ ಸರ್ಕಾರ ಮುಂದಾಗಬೇಕು”ಎಂದು ಮನವಿ ಮಾಡಿದರು.

ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಬೂದೆಯ್ಯಸ್ವಾಮಿ ಗಬ್ಬೂರು, ಲಿಂಗಾರೆಡ್ಡಿ, ದೇವರಾಜ ನಾಯಕ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...