ರಾಯಚೂರು | ಮೆಣಸಿನಕಾಯಿ ಬೆಳೆಗಾರರಿಗೆ ಹಣ ನೀಡದೆ ಮೋಸ : ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

Date:

ಮೆಣಸಿನಕಾಯಿ ಮಾರಾಟ ಮಾಡಿದ್ದ ರೈತರಿಗೆ ಹಣ ಬಾಕಿ ಉಳಿಸಿಕೊಂಡು ದಲ್ಲಾಳಿಯೋರ್ವ ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಘಟನೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

ದೇವದುರ್ಗ ತಾಲೂಕಿನ ಸುಮಾರು 50ಕ್ಕಿಂತ ಹೆಚ್ಚು ರೈತರು ಮೆಣಸಿನಕಾಯಿ ಬೆಳೆದು ಮಸರಕಲ್ ಗ್ರಾಮದ ಅಲಿ ಪಾಷಾ ಎನ್ನುವ ವ್ಯಕ್ತಿಯ ಮಧ್ಯಸ್ಥಿಕೆಯಲ್ಲಿ ಆಂಧ್ರ ಮೂಲದ ಬ್ಯಾಡಗಿ ಸ್ವಾಮಿ ಎಂಬಾತನಿಗೆ ಸುಮಾರು 500 ಕ್ವಿಂಟಾಲ್ ಮಾರಾಟ ಮಾಡಿದ್ದಾರೆ. ಒಟ್ಟು 3 ಕೋಟಿ ರೂಪಾಯಿ ಮೊತ್ತದ ಬೆಳೆಯನ್ನು ಖರೀದಿಸಿದ್ದ ಸ್ವಾಮಿ ಹಣ ಪಾವತಿಸದೇ ಮೋಸ ಮಾಡಿದ್ದು, ಆಂಧ್ರಕ್ಕೆ ಪರಾರಿಯಾಗಿದ್ದಾನೆ ಎಂದು ರೈತರು ದೂರಿದ್ದಾರೆ.

ಸಾಲ ಮಾಡಿ ಬೆಳೆದಿದ್ದ ಮೆಣಸಿನಕಾಯಿ ಬೆಳೆದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದೇ ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿ ವರ್ಷ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಪರದಾಡುತ್ತಿದ್ದರು. ಈ ಬಾರಿಯಾದರೂ ನಮಗೆ ಅಲ್ಪಸ್ವಲ್ಪ ಲಾಭ ಸಿಗಬಹುದು ಎಂದು ಕಾತರದಿಂದ ಕಾಯುತ್ತಾ ಇರುವಾಗಲೇ, ದಲ್ಲಾಳಿ ಮಾಡಿದ ಮೋಸದಿಂದ ಮತ್ತೆ ಸಂಕಟ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮೆಣಸಿನಕಾಯಿ ಬೆಳೆದ ರೈತ ಪ್ರಭಾಕರ ಇಂಗಳದಾಳ ಮಾತನಾಡಿ, “ನಾವು ಮೆಣಸಿನಕಾಯಿ ಬೆಳೆಯಲು ಸಾಕಷ್ಟು ಶ್ರಮಪಟ್ಟಿದ್ದೆವು. ಕೈಗೆ ಹಣ ಸಿಗುವ ಹುಮ್ಮಸ್ಸಿನಲ್ಲಿ ರೈತರು ಕಾದು ಕುಳಿತಿದ್ದರು. ಕಳೆದ ವರ್ಷ ಹೀಗೆ ರೈತರು ಮಾರಾಟ ಮಾಡಿದಾಗ ಹಣ ಜಮಾ ಆಗಿತ್ತು. ಆದರೆ ಈ ಬಾರಿ ಅದೇ ನಂಬಿಕೆಯಿಂದ ಅಲಿ ಪಾಷಾ ಎಂಬ ದಲ್ಲಾಳಿಯ ಮಧ್ಯಸ್ಥಿಕೆಯಲ್ಲಿ ಸ್ವಾಮಿ ಎನ್ನುವ ವ್ಯಕ್ತಿಗೆ ಮಾರಾಟ ಮಾಡಿದ್ದೆವು. ನಮಗೆ ಮೋಸ ಮಾಡಿ, ಪರಾರಿಯಾಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದೇವೆ” ಎಂದು ನೋವು ತೋಡಿಕೊಂಡಿದ್ದಾರೆ.

meNsi

ಗಬ್ಬೂರು ಪೊಲೀಸ್ ಠಾಣೆಯಲ್ಲಿ ರೈತರ 15 ಜನರ ಒಂದೊಂದು ತಂಡವಾಗಿ ಮಾಡಿ 5 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇಲ್ಲಿಯವರೆಗೂ ಯಾವುದೇ ರೀತಿಯ ಪರಿಹಾರ ದೊರಕಿಲ್ಲ ಹಾಗೂ ದಲ್ಲಾಳಿ ವಿರುದ್ಧ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ದಾವಣಗೆರೆ | ಒಳಮೀಸಲಾತಿ: ಒಗ್ಗಟ್ಟಿನ ಹೋರಾಟಕ್ಕೆ ನಿರ್ಧರಿಸಿದ ಛಲವಾದಿ, ಮಾದಿಗ ಸಮಾಜದ ಮುಖಂಡರು

ರೈತರು ಕಷ್ಟಪಟ್ಟು ಸಾಲಸೋಲ ಮಾಡಿ ಹಗಲು ರಾತ್ರಿ ಎನ್ನದೆ ಕೃಷಿ ಕೆಲಸದಲ್ಲಿ ತೊಡಗಿ ವರ್ಷಕ್ಕೆ ಎರಡು ಮೂರು ಬೆಳೆ ಬೆಳೆದು ಬದುಕಿಗಾಗಿ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ ಎಂದು ತಿಳಿಸಿದ ಅವರು, ಈ ಬೆಳವಣಿಗೆಯಿಂದ ರೈತರ ಎಷ್ಟೋ ಕುಟುಂಬಗಳು ಬೀದಿಪಾಲಾಗುವ ಆತಂಕದಲ್ಲಿದ್ದಾರೆ. ಕೆಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು, ಪೂನಾ ಇನ್ನಿತರ ಕಡೆಗೆ ದುಡಿಯುವುದಕ್ಕೇ ಗುಳೆ ಹೊರಟಿದ್ದಾರೆ” ಎಂದು ರೈತ ಪ್ರಭಾಕರ ಇಂಗಳದಾಳ ತಿಳಿಸಿದರು.

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರೈತರಿಗೆ ಪರಿಹಾರ ದೊರಕಿಸಿಕೊಡಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...