ರಾಯಚೂರು | ಸ್ವಚ್ಚತಾ ಅಭಿಯಾನಕ್ಕೆ, ಸಾರ್ವಜನಿಕರ ಸಹಕಾರದಿಂದ ನಗರ ಸ್ವಚ್ಛವಾಗಿರುತ್ತದೆ ; ಜಯಣ್ಣ

Date:

ಮಳೆಗಾಲದ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಕಂದಕ ಸ್ವಚ್ಚತಾ ಕಾರ್ಯ ಮಾಡಲಾಗಿದ್ದು, ಸ್ವಚ್ಚತೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕು. ಆಗ ಮಾತ್ರ ನಗರ ಸ್ವಚ್ಛತೆಯಾಗಿರುತ್ತದೆ ಎಂದು ಮಹಾನಗರ ಪಾಲಿಕೆ ಹಿರಿಯ ಸದಸ್ಯ ಜಯಣ್ಣ ಮನವಿ ಮಾಡಿದರು.

ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.ಪಾಲಿಕೆ ಸಕರಾತ್ಮಕ ಬೆಳೆವಣಿಗೆಗೆ ಮುಂದಾಗಿದೆ.ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ನಗರದ ಐತಿಹಾಸಕ ಕಂದಕದ ಸ್ವಚ್ಚತೆಗೆ ಮುಂದಾಗಿದ್ದು ಸಾರ್ವಜನಿಕರು ಆಂದೋಲನ ರೀತಿಯಲ್ಲಿ ಸ್ವಚತೆಗೆ ಬೆಂಬಲಿಸಿ ನಮ್ಮ ನಗರ, ಪಾಲಿಕೆ ನಮ್ಮದು ಎಂಬ ಅಭಿಮಾನದಿಂದ ಕಸ ವಿಲೇವಾರಿಗೆ ಸಹಕರಿಸಬೇಕೆಂದು ಹೇಳಿದರು.

ನಗರದ ಮಾರುಕಟ್ಟೆಗಳೂ ಸೇರಿದಂತೆ ಎಲ್ಲಡೆಯೂ ಕಸವನ್ನು ಎಲ್ಲೆಂದರಲ್ಲಿ ಹಾಕದೇ ನಗರವನ್ನು ಸ್ವಚ್ಚತೆಗೆ ತ್ಯಾಜ್ಯ ವಿಲೇವಾರಿಗೆ ಸಹಕರಿಸಬೇಕು.ಈ ಸ್ವಚ್ಚತಾ ಕಾರ್ಯಕ್ಕೆ ಸಮುದಾಯವು ಕೂಡ ಸಹಕಾರ ನೀಡಬೇಕೆಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದೇಶದಲ್ಲಿ ಇನ್ನೂ ಸ್ಲಂಗಳು ಜೀವಂತ,ಸರ್ಕಾರಗಳು ವಿಫಲ ; ವಸಂತ ಕುಮಾರ

ಈ ವೇಳೆ ಪಾಲಿಕೆ ಆಯುಕ್ತರಾದ ಜುಬಿನ್ ಮಹೋಪಾತ್ರ, ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಸಾಜೀದ ಸಮೀರ್ , ಸದಸ್ಯ ಜಿಂದಪ್ಪ.ತಿಮ್ಮಪ್ಪ ನಾಯಕ, ಹರಿಬಾಬು ರಾಂಪುರು, ನರಸಿಂಹಲು ಮಾಡಗಿರಿ, ಬಸವರಾಜ ಪಾಟೀಲ್ ಅತ್ತನೂರು ಸೇರಿದಂತೆ ಪಾಲಿಕೆ ತಾಂತ್ರಿಕ ವಿಭಾಗದ ಅಧಿಕಾರಿಗಳು,ಸಿಬ್ಬಂದಿಗಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...