ರಾಯಚೂರು | ಜೂ.23 ಕ್ಕೆ ಸಿಎಂ ಆಗಮನ : ಭೂಮಿ ವಸತಿ ಪರಿಹಾರಕ್ಕೆ ಘೇರಾವ್ ; ಮಾರೆಪ್ಪ ಹರವಿ

Date:

ಭೂಮಿ ಮತ್ತು ವಸತಿ ರಹಿತರ ಬೇಡಿಕೆಗಳಿಗೆ ಕೂಡಲೇ ಸ್ಪಂದಿಸಿ ಸಾಗುವಳಿ ಚೀಟಿ, ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಜೂ.23 ರಂದು ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳನ್ನು ಘೇರಾವ್ ಹಾಕಿ ಮನವಿ ಸಲ್ಲಿಸಲಾಗುವುದು ಎಂದು ಭೂಮಿ ಮತ್ತು ವಸತಿ ರಹಿತರ ಹೋರಾಟ ಸಮಿತಿ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಬಗರಹುಕುಂ ಸಾಗುವಳಿದಾರರಿಗೆ ಚೀಟಿ ನೀಡುವುದಾಗಿ ಸರ್ಕಾರ ಭರವಸೆ ನೀಡಿರುವದು ಸ್ವಾಗತಾರ್ಹ. ಆದರೆ ಕೆಳ ಹಂತದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೇ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಹತ್ತಾರು ವರ್ಷ ಹೋರಾಟಕ್ಕೆ ಇಲ್ಲಿಯವರಗೆ ಕೇವಲ ಭರವಸೆ ಮಾತ್ರ ದೊರಕಿದೆ. ಕೂಡಲೇ ಸಾಗುವಳಿದಾರರಿಗೆ ಪಟ್ಟ ನಿಡಬೇಕೆಂದು ಆಗ್ರಹಿಸಿ ಘೇರಾವ್ ಹಾಕಲಾಗುವುದು ಎಂದು ತಿಳಿಸಿದರು.

ಈಗಾಗಲೇ ಫಾರಂ 53, 57 ಸೇರಿದಂತೆ ಅರ್ಜಿ ಸಲ್ಲಿಸಿರುವ ರೈತರಿಗೆ ಇನ್ನಷ್ಟು ದಿನ ಕಾಲಹರಣ ಮಾಡದೇ ಕೂಡಲೇ ಸಾಗುವಳಿ ಚೀಟಿ ನೀಡುವುದು, ದೇವನಹಳ್ಳಿ ಹೋರಾಟ ಬೆಂಬಲಿಸಿ ಭಾಗವಹಿಸುವುದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸ್ ನಿಲ್ಲಿಸಲು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈ ಸಂದರ್ಬದಲ್ಲಿ ಆಂಜಿನೇಯ್ಯಕುರುಬದೊಡ್ಡಿ, ಶ್ರೀನಿವಾಸ ಕೊಪ್ಪರ, ಮಾರೆಮ್ಮ ಭೀಮಣ್ಣ ನಗನೂರು, ಗಂಗಪ್ಪ ತೋರಣದಿನ್ನಿ,ಚಾಂದಪಾಷಾ ಬೆಳಿಗನೂರು, ಶಂಶಾಲ ಪೋತಗಲ್, ವಿರೇಶ ನಾಯಕ, ರಂಗಾರೆಡ್ಡಿ, ಶಿವರಾಜ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...