ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಗಣಿ ಕಾರ್ಮಿಕರ ಸಮುಚ್ಚಯ ಅಡಿಗಲ್ಲು ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿ.ಎಂ ಸಿದ್ದರಾಮಯ್ಯ ಕಾರ್ಯಕ್ರಮ ಹವಾಮಾನ ವೈಪರೀತ್ಯದಿಂದ ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದು ವರದಿಯಾಗಿದೆ.
ಸುಮಾರು 998 ರೂ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಸೇರಿದಂತೆ ವಿವಿಧ ಇಲಾಖೆಯ ಸಚಿವರು ಹಾಗೂ ಗಣ್ಯರು ಆಗಮಿಸುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ
ಹಟ್ಟಿ ಪಟ್ಟಣದಲ್ಲಿ ಸಂಜೆ 5:30 ರಿಂದ ರಾತ್ರಿ 7 ಗಂಟೆಯವರೆಗೆ ಸತತ ಮಳೆ ಸುರಿದಿದೆ ಹಾಗೂ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಮುಂದಿನ 5 ದಿನ ಮಳೆ ಸುರಿಯಲಿದ್ದು ಹವಾಮಾನ ಇಲಾಖೆಯಿಂದ ಎಲ್ಲೋ ಅಲೆರ್ಟ್ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಕೊಪ್ಪಳ ಹಾಗೂ ರಾಯಚೂರು ಜಿಲ್ಲಾ ಪ್ರವಾಸ ರದ್ದುಪಡಿಸಲಾಗಿದೆ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.





