ರಾಯಚೂರು | ಕಾಲೇಜು ಮಂಜೂರಿಗಾಗಿ ಶಾಸಕರ ಅಣಕು ಶವಯಾತ್ರೆ ನಡೆಸಿ ದಹಿಸಿ; ವಿದ್ಯಾರ್ಥಿಗಳು ಪ್ರತಿಭಟನೆ

Date:

ಹಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಿಗಾಗಿ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಎಸ್ ಎಫ್ ಐ ಸಂಘಟನೆ ನೇತೃತ್ವದಲ್ಲಿ ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ವಿರುದ್ಧ ಅಣಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.

ಪಟ್ಟಣದ ಕ್ಯಾಂಪ್ ಬಸ್ ನಿಲ್ದಾಣ, ಕೋಠಾ ಕ್ರಾಸ್ ಮೂಲಕ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಪ್ರತಿಭಟನಾಕಾರರು, ಶಾಸಕರ ಪ್ರತಿಕೃತಿ ಚಟ್ಟ (ಮಂಟಪ) ಹೆಗಲ ಮೇಲೆ ಹೊತ್ತುಕೊಂಡು ಬೀದಿಯುದ್ದಕ್ಕೂ ಘೋಷಣೆ ಕೂಗಿ ಹಳೆ ಬಸ್ ನಿಲ್ದಾಣದಲ್ಲಿ ಶವವನ್ನು ಸುಟ್ಟು ಆಗ್ರಹಿಸಿದರು.

ಶಾಲಾ ಆವರಣದಲ್ಲೇ ಧರಣಿ ಮುಂದುವರೆದಿದ್ದು ಧರಣಿಗೆ ಮೂರು ದಿನ ಕಳೆದರೂ ಶಾಸಕರು ಸ್ಥಳಕ್ಕೆ ಬಾರದಿರುವುದರಿಂದ ಕಾಲೇಜಿನ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಮ್ಮ ಹಕ್ಕುಗಳಿಗಾಗಿ ನಾವು ಶಾಂತಿಯುತ ಧರಣಿ ನಡೆಸುತ್ತಿದ್ದರೂ, ಶಾಸಕರು ಎಡವಟ್ಟಾಗಿ ನಮ್ಮ ಧ್ವನಿಗೆ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

1000157661

ಕಾಲೇಜುಗಳಲ್ಲಿ ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಹಾಗೂ ಪ್ರಯೋಗಾಲಯದಂತಹ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಹರಸಾಹಸಪಟ್ಟು ಓದಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಪೋಷಕರು ಸಭೆ ನಡೆಸಿ, ಶಾಸಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಏಷ್ಯಾ ಖಂಡದಲ್ಲಿಯೇ ಪ್ರಸಿದ್ಧ ಹಟ್ಟಿ ಚಿನ್ನದ ಗಣಿ ಪಟ್ಟಣವಾಗಿರುವ ಹಟ್ಟಿಯಲ್ಲಿ ಇಂದುವೂ ತಾಂತ್ರಿಕ ಶಿಕ್ಷಣಕ್ಕೆ ಅಗತ್ಯವಿರುವ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ಕಾಲೇಜುಗಳಿಲ್ಲ ಎಂಬುದು ದುರಂತದ ಸಂಗತಿಯಾಗಿದೆ. ಹಟ್ಟಿ ಚಿನ್ನದ ಗಣಿಯಲ್ಲಿ ಸುಮಾರು ಐದು ಸಾವಿರಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪರಿಣಾಮವಾಗಿ ಸ್ಥಳೀಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಜಿಲ್ಲೆಗೆ ಹೋಗಿ ಶಿಕ್ಷಣ ಪಡೆಯುವಂತಾಗಿದೆ ಎಂದು ಹೇಳಿದರು.

1000157649

ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕಾಲೇಜು ಮಂಜೂರು ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಟ್ಟಿ ವೇದಿಕೆ ವತಿಯಿಂದ ಹಟ್ಟಿ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ಮಾಡಿ ಶಾಲೆಯ ಬಾಗಿಲಿಗೆ ಮಲಗಿದ ಶಿಕ್ಷಕ

ಈ ವೇಳೆ ಎಸ್ ಎಫ್ ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು , ತಾಲೂಕಾಧ್ಯಕ್ಷ ಗೋವಿಂದ, ಕಟ್ಟಡ ಕಾರ್ಮಿಕ ತಾಲೂಕಾಧ್ಯಕ್ಷ ನಿಂಗಪ್ಪ ವೀರಾಪುರ, ಚನ್ನಬಸವ, ವನಜಾಕ್ಷಿ,ಯಲ್ಲಪ್ಪ ಪ್ಯಾಟೆಗೌಡ್ರು, ವಿನೋದ ಕುಮಾರ, ಸಾಹೇರಬಾನು, ಗಾಯಿತ್ರಿ , ದುರ್ಗಮ್ಮ,ದಾವುದ್, ನಜೀರ್, ಎಂ ಮಹಾಂತೇಶ ,ನರಸಮ್ಮ, ಇಮ್ರಾನ್,ರಿಯಾಜ್ ಕಾಲೇಜು ವಿದ್ಯಾರ್ಥಿಗಳು ಇನ್ನಿತರರು ಇದ್ದರು.

1000157652







WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...