ರಾಯಚೂರು | ಕಮೀಷನರ್ ದಯಾನಂದ ಅವರ ಅಮಾನತು ಕೂಡಲೇ ಹಿಂಪಡೆಯಲು ಆಗ್ರಹ

Date:

ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವೆಂದು ಬಿಂಬಿಸಿ ರಾಜ್ಯ ಸರ್ಕಾರ ಬೆಂಗಳೂರು ನಗರ ಕಮಿಷನರ್ ದಯಾನಂದ ಅವರನ್ನು ಅಮಾನತ್ ಮಾಡಿರುವುದು ತೀವ್ರ ಖಂಡನೀಯ ಕೂಡಲೇ ರದ್ದುಗೊಳಿಸಿ ಹುದ್ದೆಯಲ್ಲಿ ಮುಂದುವರೆಸಬೇಕು ಎಂದು ವಾಲ್ಮೀಕಿ ನಾಯಕ ಸಂಘಟನೆಯಿಂದ ವತಿಯಿಂದ ದೇವದುರ್ಗ ತಹಶೀಲ್ದಾರ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸರಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ದಕ್ಷ ಪ್ರಾಮಾಣೀಕತೆಯಿಂದ ಕಾರ್ಯವನ್ನು ನಿರ್ವಹಿಸುತ್ತಿರುವ ನಾಯಕ ಸಮಾಜಕ್ಕೆ ಸೇರಿದವರಾದ ದಯಾನಂದ ಐ.ಪಿ.ಎಸ್ ಅಧಿಕಾರಿಯನ್ನು ವಿನಾಕಾರಣ ಅಮಾನತ್ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಹಾಗೂ ಇದೇ ಮೊದಲು ಬಾರಿಗೆ ಕಮಿಷನರ್‌ನನ್ನು ಅಮಾನತ್ ಮಾಡಿರುವದರ ಹಿಂದೆ ಜಾತಿ ರಾಜಕಾರಣ ಇದೆ ಎಂದು ಆಗ್ರಹಿಸಿದರು.

ಸರ್ಕಾರದ ನಿರ್ಲಕ್ಷ್ಯದಿಂದ ಸಂಭವಿಸಿದೆ ಹೊರತು ಅಧಿಕಾರಿಗಳ ನಿರ್ಲಕ್ಷ ತನದಿಂದ ಸಂಭವಿಸಿಲ್ಲ.ಡಿ.ಸಿ.ಎಂ ಹಾಗೂ ಸಿ.ಎಂ ನಡುವೆ ಗುಂಪುಗಾರಿಕೆಯಿಂದ ಅಮಾಯಕರ 11 ಜನರ ಪ್ರಾಣ ಹೋಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಸುಮಾರು ಮೂರ್ನಾಲ್ಕು ಲಕ್ಷ ಜನದಟ್ಟಣೆಗೆ ಒಂದು ವಾರ ಸಿದ್ಧತೆಯಾಗಿರಬೇಕು. ಸಿದ್ದತೆವಿಲ್ಲದೆ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಚನ್ನಬಸವಪ್ಪ ಬೆಟ್ಟದೂರು ನೆನಪಿನ ದಿನಾಚರಣೆ ; ಜೂನ್ 13 ರಂದು ಅಧ್ಯಯನ ಶಿಬಿರ

ಅಭಿವೃದ್ಧಿ ಕಾರ್ಯದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿದ್ದು, ತಮ್ಮ ತಪ್ಪನ್ನು ತಿರುಚಲು ತಮಗೆ ಬೇಕಾದಂತೆ ಅಧಿಕಾರಿಗಳ ಮೇಲೆ ದರ್ಪ ತೋರಿಸಿ ಅಮಾನತು ಮಾಡಿದ್ದಾರೆ.ಕೂಡಲೇ ಆದೇಶವನ್ನು ಹಿಂಪಡೆದು ಅದೇ ಹುದ್ದೆಯಲ್ಲಿ ಮುಂದುವರೆಸಲು ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಆಮ್ ಆದಿ ಪಾರ್ಟಿ ಜಿಲ್ಲಾಧ್ಯಕ್ಷ ಭೀಮರಾಯ ನಾಯಕ,ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...