ರಾಯಚೂರು | ಗ್ಯಾರಂಟಿ ಭರವಸೆಗಳೊಂದಿಗೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ದ: ಸಚಿವ ಬೋಸರಾಜು

Date:

ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮೀಸಲಿಡುವ ಮೂಲಕ ಅಭಿವೃದ್ದಿ ಕಾರ್ಯಗಳೊಂದಿಗೆ ನಾವು ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯದಲ್ಲಿ ನುಡಿದಂತೆ ನಡೆದ ಸರ್ಕಾರ ಎಂದರೆ ನಮ್ಮ ಸರ್ಕಾರ. ಇನ್ನು ಹೆಚ್ಚಿನ ಅನುದಾನವನ್ನು ಈ ಭಾಗದ ಅಭಿವೃದ್ಧಿಗಾಗಿ ತರಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮೈಕ್ರೋ ಹಾಗೂ ಮ್ಯಾಕ್ರೋ ಯೋಜನೆಯಡಿ 14 ಕೋಟಿ 96 ಲಕ್ಷದ 10 ಸಾವಿರ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ, ಶಾಲೆಗಳಿಗೆ ಹೆಚ್ಚುವರಿ ಕೊಠಡಿ, ಹೊಸ ಅಂಗನವಾಡಿ ಕಟ್ಟಡ, ಬಸ್ ಶೆಲ್ಟರ್ ಸೇರಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಪೂಜೆ ಸಲ್ಲಿಸಿ ಮಾತನಾಡಿದರು.

ಶಾಸಕ ಹಂಪಯ್ಯ ನಾಯಕ್ ಮಾತನಾಡಿ, “ನೀವು ಸುಮಾರು 50 ವರ್ಷದಿಂದ ನಮ್ಮ ಮೇಲೆ ವಿಶ್ವಾಸವಿಟ್ಟು ಆಶೀರ್ವಾದ ಮಾಡುತ್ತಾ ಬಂದಿದ್ಧೀರಿ. ಅದಕ್ಕಾಗಿ ನಮ್ಮ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ತರುವ ಮೂಲಕ ಎಲ್ಲ ಭಾಗದಲ್ಲಿ ಹಂಚಿಕೆ ಮಾಡುತ್ತಿದ್ದೇವೆ. ಈ ಭಾಗದ ಶೈಕ್ಷಣಿಕ ಹಾಗೂ ವೈದ್ಯಕೀಯ ಸೇವೆಗಳಿಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಮುಂದೆ ಇನ್ನೂ ಹೆಚ್ಚಿನ ಅನುದಾನ ತರಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿಯಲ್ಲಿ ₹25 ಲಕ್ಷ ವೆಚ್ಚದಲ್ಲಿ ಬಸ್ ಶೆಲ್ಟರ್, ₹15 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ, ₹15 ಲಕ್ಷ ಸಿಸಿ ರಸ್ತೆ ಹಾಗೂ ಮೈಕ್ರೋ ಯೋಜನೆಯಡಿ ₹10 ಲಕ್ಷದ 3 ಸಿಸಿ ರಸ್ತೆ, ₹50 ಲಕ್ಷ ಅಡುಗೆ ಕೋಣೆ ಕಾಮಗಾರಿಗಳು ಸೇರಿದಂತೆ 1 ಕೋಟಿ 88 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮಾನ್ವಿ ತಾಲೂಕು ಕೇಂದ್ರದ ಟೌನ್ ಹಾಲ್‌ಗೆ ₹25 ಲಕ್ಷದ ಪೀಠೋಪಕರಣಗಳು, ಅಂಗನವಾಡಿ ಕೇಂದ್ರಕ್ಕೆ ₹15 ಲಕ್ಷ , ಕೋನಾಪೂರ ಪೇಟೆಯಲ್ಲಿ ಹೈಟೆಕ್ ಶೌಚಾಲಯಕ್ಕೆ ₹20 ಲಕ್ಷ, ಸಣ್ಣ ಬಜಾರ್, ಅಂಬೇಡ್ಕರ್ ನಗರ ಸರ್ಕಾರಿ ಶಾಲೆಗಳಿಗೆ ತಲಾ ₹27 ಲಕ್ಷದ ಕೊಠಡಿಗಳು, ಸೋನಿಯಾಗಾಂಧಿ ನಗರ ಶಾಲೆಗೆ ₹26.68 ಲಕ್ಷದಲ್ಲಿ ಎರಡು ಕೊಠಡಿಗಳು, ಬಾಜಿವಾಡ ಶಾಲೆಗೆ ₹13.90 ಲಕ್ಷದಲ್ಲಿ ಒಂದು ಹೆಚ್ಚುವರಿ ಕೊಠಡಿ ಸೇರಿದಂತೆ ಒಟ್ಟು 14 ಕೋಟಿ 68 ಲಕ್ಷ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಅಮರೇಶ್ವರ ಕ್ಯಾಂಪ್‌ನಲ್ಲಿ ಸಿಸಿ ರಸ್ತೆಗೆ ₹10 ಲಕ್ಷ, ಶಾಲಾ ಕೊಠಡಿಗೆ ₹14 ಲಕ್ಷ, ಪೋತ್ನಾಳದಲ್ಲಿ ಬಸ್ ಶೆಲ್ಟರ್ ನಿರ್ಮಾಣಕ್ಕೆ ₹25 ಲಕ್ಷ, ಮೂರು ಸಿಸಿ ರಸ್ತೆಗಳ ನಿರ್ಮಾಣಕ್ಕೆ ₹30 ಲಕ್ಷ, ಮುದ್ದಂಗುಡ್ಡಿಯಲ್ಲಿ ಎರಡು ಶಾಲಾ ಕೊಠಡಿಗಳಿಗೆ ₹27 ಲಕ್ಷ, ಖರಾಬ್ ದಿನ್ನಿಯಲ್ಲಿ ಸಿಸಿ ರಸ್ತೆಗೆ ₹10 ಲಕ್ಷ, ದೇವಿಪುರದಲ್ಲಿ ಸಿಸಿ ರಸ್ತೆಗೆ ₹10 ಲಕ್ಷ, ಚಿಕ್ಕಕೊಟ್ನೇಕಲ್‌ನಲ್ಲಿ ಸಿಸಿ ರಸ್ತೆಗೆ ₹10 ಲಕ್ಷ ಸೇರಿದಂತೆ ಸಿರವಾರ ತಾಲೂಕು ಕೇಂದ್ರಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ₹4 ಕೋಟಿ ₹98 ಲಕ್ಷ, 2 ಕೋಟಿ ವೆಚ್ಚದಲ್ಲಿ 6 ತರಗತಿ ಕೊಠಡಿ, ಎರಡು ಶೌಚಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ವಿವಿಐಪಿ ಗೆಸ್ಟ್ ಹೌಸ್‌ಗೆ  ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ

ಈ ಸಂದರ್ಭದಲ್ಲಿ ಭೀಮರಡ್ಡಿ ಕಲ್ಲೂರು, ಜಿ ಶರಣಯ್ಯ ನಾಯಕ್, ಅಮರಪ್ಪ ಗೌಡ ಕಲ್ಲೂರು, ಖಾಲಿದ್ ಗುರು, ಗಫೂರ್ ಸಾಬ್, ರುದ್ರಪ್ಪ ಅಂಗಡಿ, ಬಸವರಾಜ್ ಪಾಟೀಲ್, ರೌಡೂರು ಮಹಾಂತೇಶ ಸ್ವಾಮಿ, ಗುರುಸ್ವಾಮಿ, ಜಹಾಂಗೀರ್ ಪಾಶಾ, ಸಂಗಪ್ಪ ಗೌಡ, ಡಾ. ಶರ್ಮಾ, ಪಂಪನಗೌಡ ಪೋತ್ನಾಳ, ಬಸವರಾಜ ನಾಡಗೌಡ, ರಮೇಶ ದರ್ಶನಪೂರ, ಬ್ರಿಜ್ಜೇಶ್ ಪಾಟೀಲ್, ಅರಕೇರಿ ಶಿವಕುಮಾರ್ ಚನ್ನಪ್ಪ, ಮಾನ್ವಿ ಪುರಸಭೆ ಸದಸ್ಯ‌ ಗುರುಸ್ವಾಮಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...