ರಾಯಚೂರು | ಸಂಪೂರ್ಣ ಹದಗೆಟ್ಟ ರಸ್ತೆ: ಶೀಘ್ರವೇ ದುರಸ್ತಿ ಪಡಿಸುವಂತೆ ಗ್ರಾಮಸ್ಥರು, ವಿದ್ಯಾರ್ಥಿಗಳ ಆಗ್ರಹ

Date:

ರಾಯಚೂರು ತಾಲೂಕಿನ ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ಪೂರ್ತಿ ಹದೆಗೆಟ್ಟು,ತೆಗ್ಗು ಗುಂಡಿಗೆ ವಾಹನಗಳು ಕೆಟ್ಟು ನಿಲ್ಲುತ್ತಿವೆ. ತಕ್ಷಣವೇ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ತೆಗ್ಗುಗುಂಡಿಯಿಂದ ಕೂಡಿದ್ದು ವಾಹನ ಸವಾರರಿಗೆ , ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಅದನ್ನು ಸಂಬಂಧಪಟ್ಟ ಇಲಾಖೆ ದುರಸ್ತಿಗೊಳಿಸಿ, ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮಕ್ಕೆ ಸಾರಿಗೆ ಬಸ್ ದಿನನಿತ್ಯ ಸಂಚರಿಸಿ ಶಾಲಾ ಕಾಲೇಜು ಮಕ್ಕಳಿಗೆ ನಗರಕ್ಕೆ ಬರುವುದಕ್ಕೆ ಅನುಕೂಲವಾಗುತ್ತಿತ್ತು. ರಸ್ತೆ ಪೂರ್ತಿ ಹದೆಗೆಟ್ಟು, ಸಾರಿಗೆ ಬಸ್‌ಗಳಿಗೂ ಹಾನಿಯಾಗುತ್ತಿದೆ. ಇದರಿಂದಾಗಿ ಗ್ರಾಮಕ್ಕೆ ಬರುವುದಕ್ಕೆ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 10 at 10.51.33 1

ದಿನನಿತ್ಯ ಬಸ್ ಶಾಲಾ ಮಕ್ಕಳಿಗೆ ಕರೆದುಕೊಂಡು ಹೋಗುವುದಕ್ಕೆ ಬರುತ್ತಿತ್ತು. ರಸ್ತೆ ಗುಂಡಿಗೆ ಕೆಟ್ಟು ನಿಂತು ವಾರ ಕಳೆದರೂ ಬಸ್ಬಾ ರದೆ ಶಾಲಾ ಕಾಲೇಜು ಮಕ್ಕಳಿಗೆ ನಗರಕ್ಕೆ ಹೋಗಲು ಸಮಸ್ಯೆ ಎದುರಾಗಿದೆ. ಇದರಿಂದ ಮಕ್ಕಳು ಶಿಕ್ಷಣದಿಂದ ದೂರು ಉಳಿಯುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಬೀಳುವ ಹಂತಕ್ಕೆ ತಲುಪಿದ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ ಕಟ್ಟಡ

ಈ ಬಗ್ಗೆ ಗ್ರಾಮಸ್ಥ ಶಿವುಕುಮಾರ ಮಾತನಾಡಿ, ರಸ್ತೆಯಲ್ಲಿ ಗುಂಡಿಗಳೋ, ಗುಂಡಿಗಳಲ್ಲಿ ರಸ್ತೆಯೋ ಎನ್ನುವ ಭೀತಿಯಾಗಿದೆ. ಮಳೆಗಾಲದ ಸಮಯದಲ್ಲಿ ತೆಗ್ಗುಗಳಲ್ಲಿ ನೀರು ನಿಂತು ಅಪಘಾತಗಳು ಸಂಭವಿಸಿವೆ. ಸಾರಿಗೆ ಬಸ್ ದಿನನಿತ್ಯ ಬೆಳಗ್ಗೆ ಶಾಲಾ ಕಾಲೇಜು ಮಕ್ಕಳನ್ನು ಕರೆದುಕೊಂಡು ನಗರಕ್ಕೆ ಸಂಚರಿಸುತ್ತಿತ್ತು. ಬಸ್ ಕೆಟ್ಟು ಹೋಗಿ ವಾರವಾದರೂ ಬಸ್ ಬಾರದೆ ಮಕ್ಕಳಿಗೆ ಹೋಗುವುದಕ್ಕೆ ಸಮಸ್ಯೆ ಎದುರಾಗಿದೆ. ಡಿಪೋದವರನ್ನು ಕೇಳಿದರೆ ಆ ರಸ್ತೆಗೆ ಓಡಾಡುವ ಬಸ್‌ಗಳು ಕೆಟ್ಟು ಹೋಗುತ್ತಿವೆ. ರಸ್ತೆ ಗುಂಡಿಗೆ ಬಸ್‌ಗಳು ಪಲ್ಟಿ ಆಗುವ ಸಾಧ್ಯತೆಯಿರುತ್ತದೆ. ಘಟನೆಗಳು ಸಂಭವಿಸಿದರೆ ಯಾರ ಹೊಣೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ಹೇಳಿದರು.

WhatsApp Image 2024 09 10 at 10.52.06

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳಲು ಆಗ್ರಹಿಸಿ ಗ್ರಾಮದ ಶಾಲಾ ಮಕ್ಕಳು ರಾಯಚೂರು ಅಪರ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...