ರಾಯಚೂರು | ಕೇಂದ್ರ, ರಾಜ್ಯ ಸರ್ಕಾರಗಳ ಭೂನೀತಿಗೆ ಖಂಡನೆ; ವಿಧಾನಸೌಧದ ಎದುರು ಫೆ.10ರಿಂದ ಅನಿರ್ದಿಷ್ಟಾವಧಿ ಧರಣಿ

Date:

ಕೇಂದ್ರ, ರಾಜ್ಯ ಸರ್ಕಾರಗಳ ಭೂನೀತಿಗಳನ್ನು ಖಂಡಿಸಿ ಫೆ.10ರಿಂದ ವಿಧಾನಸೌಧದ ಎದುರು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, 10,000ಕ್ಕೂ ಅಧಿಕ ಮಂದಿ ರೈತರು, ಕಾರ್ಮಿಕರು, ಭೂ ಹಕ್ಕುಗಳಿಂದ ವಂಚಿತರಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ಹೇಳಿದರು.

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ಸರ್ಕಾರಿ ಅರಣ್ಯ ಇಲಾಖೆಯ ಭೂಮಿಯಲ್ಲಿ ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತ ಈಗ ಹಕ್ಕುಪತ್ರಕ್ಕಾಗಿ ಆಗ್ರಹಿಸುತ್ತಿರುವ ರೈತರಿಗೆ ಭೂಮಿ ನೀಡಲು ಮೀನಾ ಮೇಷ ಎಣಿಸುತ್ತಿರುವ ಸರ್ಕಾರಗಳು ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಾವಿರಾರು ಎಕರೆ ಭೂಮಿಯನ್ನು ಕೊಡುವುದಕ್ಕೆ ಮುಂದಾಗಿರುವುದು ಬಹುರಾಷ್ಟ್ರೀಯ ಕಂಪನಿಯ ಕೃಷಿಯತ್ತ ಗಮನಹರಿಸಿದಂತೆ ಕಾಣುತ್ತಿದೆ. ಇದನ್ನು ನಾವು ವಿರೋಧಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಕೊಡಲು ಉದ್ದೇಶಿಸಿರುವ ಭೂಮಿಯನ್ನು ಭೂಹೀನರಿಗೆ ನೀಡಬೇಕು” ಎಂದು ಆಗ್ರಹಿಸಲಾಗುವುದು.

“ಸಾಗುವಳಿ ಮಾಡುತ್ತಿರುವವರ ವಿಚಾರದಲ್ಲಿ ಅಕ್ರಮ-ಸಕ್ರಮ ಸಮಿತಿ ರಚಿಸಿ ಸಭೆಗಳನ್ನು ಮಾಡಿ ಕಂದಾಯ ಇಲಾಖೆಯಿಂದ ಸರ್ವೆ ಮಾಡಿಸಿ ಕಾನೂನಾತ್ಮಕವಾಗಿ ಭೂಮಿ ಹಂಚುವ ಕ್ರಿಯೆಗೆ ಚಾಲನೆ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಕ್ಕಳ ರಕ್ಷಣೆ ಕಾರ್ಯಾಚರಣೆ ಬಿರುಸು; 22 ಮಕ್ಕಳ ರಕ್ಷಣೆ, ಹೊಲದ ಮಾಲೀಕರ ವಿರುದ್ಧ ಪ್ರಕರಣ ದಾಖಲು

“ಬಗರ್ ಹುಕುಂ ಸಾಗುವಳಿದಾರರಿಗೆ ಪಟ್ಟಾ ನೀಡಬೇಕು. ಅಲ್ಲದೆ ಸರ್ಕಾರಿ ಯೋಜನೆಗಳಿಗೆ ಕೃಷಿಕರಿಂದ ಒತ್ತಾಯಪೂರ್ವಕವಾಗಿ ಭೂಮಿಯನ್ನು ಕಿತ್ತುಕೊಳ್ಳುವ ಬದಲು ಅವರನ್ನು ವಿಶ್ವಾಸಕ್ಕೆ ತೆಗೆದು ಅವರ ಆತಂಕವನ್ನು ದೂರ ಮಾಡಿ ಭೂಮಿ ಪಡೆದು ಅಭಿವೃದ್ಧಿ ಪೂರಕ ಕೆಲಸ ಮಾಡಬೇಕೆನ್ನುವುದು ನಮ್ಮ ಹಕ್ಕೊತ್ತಾಯ. ಈ ವಿಚಾರವನ್ನು ಮುಂದಿಟ್ಟುಕೊಂಡು ಬೆಂಗಳೂರಿನ ವಿಧಾನಸೌಧದ ಎದುರು ಫೆಬ್ರುವರಿ 10ರಿಂದ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ ಜಿ ವಿರೇಶ, ನರಸಣ್ಣ ನಾಯಕ, ಕರಿಯಪ್ಪ ಹಚ್ಚೊಳ್ಳಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...