ರಾಯಚೂರು | ಒಳ ಮೀಸಲಾತಿ ವರ್ಗೀಕರಣ ಗೊಂದಲ; ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ತಾತ್ಕಾಲಿಕ ಸ್ಥಗಿತಕ್ಕೆ ಮನವಿ

Date:

ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಗೊಂದಲ ಇದ್ದ ಕಾರಣ ವಿಶ್ವ ವಿದ್ಯಾಲಯದಲ್ಲಿ ಯಾವುದೇ ರೀತಿಯ ಹುದ್ದೆಗಳ ನೇಮಕಾತಿಯನ್ನು ಅಧಿಕೃತ ಆದೇಶ ಬರುವವರೆಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬಾರದೆಂದು ಮಾದಿಗ ಮೀಸಲಾತಿ ಹೋರಾಟ ತಾಲೂಕ ಸಮಿತಿ ವತಿಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯದ ಕುಲಪತಿಗೆ ಮನವಿ ಸಲ್ಲಿಸಲಾಯಿತು.

ಪರಿಶಿಷ್ಟ ಜಾತಿಯಲ್ಲಿ ಬರುವ ಎಲ್ಲಾ ಸಮುದಾಯಗಳಿಗೆ ಮೀಸಲಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಬೇಕೆಂದು 30 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದೆ. ಸರ್ವೋಚ್ಚ ನ್ಯಾಯಾಲಯವು ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಪನ್ನು ನೀಡಿತ್ತು. ತೀರ್ಪಿನ ಅನ್ವಯ ರಾಜ್ಯ ಸರ್ಕಾರ ಹೆಚ್.ಎನ್. ನಾಗಮೋಹನ್‌ದಾಸ್ ರವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಸರ್ಕಾರ ತರಾತುರಿಯಲ್ಲಿ ಶೇ17 ರಲ್ಲಿ ಎಡಗೈ ಸಮುದಾಯಕ್ಕೆ ಶೇ 6, ಬಲಗೈ ಸಮುದಾಯಕ್ಕೆ ಶೇ 6, ಕೋಲಂಬಿಸ್ ಸಮುದಾಯಕ್ಕೆ ಶೇ 5 ಕೊರವ, ಕೊರಚ, ಲಂಬಾಣಿ, ಭೋವಿ ಸಮುದಾಯಗಳಿಗೆ ಮೀಸಲಾತಿಯನ್ನು ಹಂಚಲಾಗಿದೆ.

ಆದರೆ ಅಲೆಮಾರಿ ಜನಾಂಗಕ್ಕೆ ಮತ್ತು ಎಕೆ, ಎಡಿ, ಎಎ, ಈ ಜಾತಿಗಳ ಗೊಂದಲ ಮತ್ತು ಬ್ಯಾಕ್‌ಲಾಗ್ ಉದ್ಯೋಗಗಳಲ್ಲಿ 101 ಜಾತಿಗಳಿಗೆ ಮೋಸ ಮಾಡಿದೆ. ಸರ್ಕಾರದ ಈ ಧೋರಣೆಯ ವಿರುದ್ಧ ಒಳ ಮೀಸಲಾತಿಯ ವರದಿ ಹೈಕೋರ್ಟ್ ಮೆಟ್ಟಿಲೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಗೊಂದಲದಲ್ಲಿದ್ದು ಸರ್ಕಾರ ಅಧಿಕೃತ ಮತ್ತು ಆದೇಶ ಹೊರಡಿಸುವವರೆಗೆ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಭರ್ತಿ ಮಾಡಬಾರದೆಂದು ಹಾಗೂ ರಾಜ್ಯ ಸರ್ಕಾರದಿಂದ ಸಂಪೂರ್ಣ ಒಳ ಮೀಸಲಾತಿ ಅಧಿಕೃತ ಆದೇಶ ಬರುವವರೆಗೂ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಕಾಲಿಕ ಮಳೆಗೆ ಜೋಳ ಬೆಳೆ ಹಾನಿ; ಸಂಕಷ್ಟದಲ್ಲಿ ರೈತರು

ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ದುಳ್ಳಯ್ಯ ಗುಂಜಹಳ್ಳಿ,ಭೀಮೇಶ ತುಂಟಾಪೂರು, ಸುರೇಶ ದುಗನೂರ, ನಜಕ್ರಪ್ಪ ಹಂಚಿನಾಳ,ರAಜೀತ್ ದಂಡೋರ, ದಾವೀದ್ ಮರ್ಚೆಟ್ಟಾಳ, ಮಾರುತಿ ಮರ್ಚೆಟ್ಟಾಳ,ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...