ರಾಯಚೂರು | ಅಂಬೇಡ್ಕರ್‌ಗೆ ಭಾರತ ರತ್ನ ನೀಡದೇ ಅವಮಾನಗೈದ ಕಾಂಗ್ರೆಸ್ ನಿಜವಾದ ಸಂವಿಧಾನ ವಿರೋಧಿ: ಶಾಸಕ ಯತ್ನಾಳ್

Date:

ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿಲ್ಲ. ತಮಗೆ ತಾವೇ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ , ರಾಜೀವಗಾಂಧಿ ಅವರು ಭಾರತ ರತ್ನ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದೇ ಅವಮಾನ ಮಾಡಿದ ಕಾಂಗ್ರೆಸ್ ನಿಜವಾದ ಸಂವಿಧಾನ ವಿರೋಧಿ ಶಾಸಕ ಬಸನಗೌಡ ಪಾಟೀಲ್ ತಿಳಿಸಿದರು.

ರಾಯಚೂರಿನ ಅತ್ತನೂರ್ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ ವಕ್ಫ್ ಭೂಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಸಂವಿಧಾನ ವಿರೋಧಿ ಎಂದು ಹೇಳುವ ಕಾಂಗ್ರೆಸ್ ನಾಯಕರೇ ಸಂವಿಧಾನ ವಿರೋಧಿಗಳು, ಸಂವಿಧಾನ ಬರೆದ ಬಾಬಾ ಸಾಹೇಬರಿಗೆ ಅವಮಾನ ಮಾಡಿದ್ದಾರೆ. ಸತ್ತಾಗ ಜಾಗ ನೀಡಲಿಲ್ಲ. ಇದ್ದಾಗ ಸರಿಯಾಗಿ ನಡೆದುಕೊಂಡಿಲ್ಲ ಎಂದು ದೂರಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಅನೇಕ ನಾಯಕರು ಲೋಕಸಭೆ ಚುನಾವಣೆಗೂ ಮೊದಲು ಅಪಪ್ರಚಾರ ಮಾಡಿದ್ದರು. ಆದರೆ, ಅಟಲ್ ಬಿಹಾರಿ ವಾಜಪೇಯಿ ಅವಧಿಯಲ್ಲಿ ಹಾಗೂ ನರೇಂದ್ರ ಮೋದಿ ಅವರ 10 ವರ್ಷದ ಆಡಳಿತದಲ್ಲಿ ಸಂವಿಧಾನ ಬದಲಾಯಿಸಿದ್ದಾರಾ? ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದೇ ಅವಮಾನ ಮಾಡಿದ ಕಾಂಗ್ರೆಸ್ ನಿಜವಾದ ಸಂವಿಧಾನ ವಿರೋಧಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಿಗೆ ಮುಖಭಂಗವಾಗಿದೆ. ದೇಶದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ವಿರುದ್ಧ ವಕ್ಫ್ ನಡೆಯುತ್ತಿದ್ದು ಸಚಿವ ಜಮೀರ್ ಅಹ್ಮದ್ ವಕ್ಫ್ ಆಸ್ತಿ ನಮ್ಮ ಅಪ್ಪನ್ ಆಸ್ತಿ ಎಂದು ಮಾತನಾಡುತ್ತಾರೆ. ಇದರ ವಿರುದ್ಧ ಬೀದಿಗಿಳಿದ ಹೋರಾಟ ಮಾಡಬೇಕಿದೆ ಎಂದರು.

ಬಿಜೆಪಿ ವಿರುದ್ದ ಸುಳ್ಳು ಕಂತೆ ಸೃಷ್ಟಿಸಲಾಗುತ್ತಿದೆ. ಈಗ ಯಾವ ಎಲೆಕ್ಷನ್ ಇಲ್ಲ. ಆದರೆ ರೈತರು, ಮಠ,ಮಂದಿರಗಳ ವಕ್ಫ್‌ ಎಂದು ನಮೂದಿಸುವ ಕುತಂತ್ರದ ವಿರುದ್ದ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ನಾನು ಸೇರಿದಂತೆ ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ನಾಲ್ಕೈದು ಬಾರಿ ಶಾಸಕರು, ಸಚಿವರಾಗಿದ್ದೇವೆ. ನಮಗೇನು ಅಧಿಕಾರದ ಹುಚ್ಚು ಹಿಡಿದಿಲ್ಲ. ಈಗ ಚುನಾವಣೆಯೂ ಇಲ್ಲ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ , ಪಕ್ಷವನ್ನು ತಳಮಟ್ಟದಿಂದ ಗಟ್ಟಿಯಾಗಿ ಕಟ್ಟುವುದಕ್ಕೆ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ ಸಿಗಲು ಆಗ್ರಹಿಸಿ ಪ್ರತಿಭಟನೆ

ಮಾಜಿ ಸಚಿವ ರಮೇಶ ಜಾರಕಿಹೊಳಿ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಮಾಜಿ ಸಂಸದ ಬಿ.ವಿ. ನಾಯಕ, ಮುಖಂಡರಾದ ರಮಾನಂದ ಯಾದವ್, ಆಂಜನೇಯ, ನರಸಪ್ಪ ಯಕ್ಲಾಸಪೂರ, ಕೊಟ್ರೇಶಪ್ಪ ಕೋರಿ, ಹರೀಶ, ಸಂತೋಷ, ಶಶಿಧರ ಮಸ್ಕಿ, ಭೀಮೇಶ, ಬಂಡೇಶ ವಲ್ಕಂದಿನ್ನಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...