ರಾಯಚೂರು | ಒಳಮೀಸಲಾತಿ ಜಾರಿ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್ ಮಾತು ತಪ್ಪಿದೆ: ಹರಿರಾಮ್

Date:

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಮೂಗಿಗೆ ತುಪ್ಪ ಸವರಿ ಈಗ ಮಾತು ತಪ್ಪಿದ ಸರಕಾರವಾಗಿದೆ. ಅಕ್ಟೋಬರ್ 9ರ ಒಳಗೆ ಒಳಮೀಸಲಾತಿ ಜಾರಿ ಮಾಡುವುದಕ್ಕೆ ಗಡುವು ದಿನ ಎಂದು ಒಳ ಮೀಸಲಾತಿ ಸಂಚಾಲಕ ಹರಿರಾಮ್ ತಿಳಿಸಿದರು.

ರಾಯಚೂರು ಜಿಲ್ಲೆಯ ಮಸ್ಕಿ ನಗರದ ಭ್ರಮರಾಂಭ ಕಲ್ಯಾಣ್ ಮಂಟಪದಲ್ಲಿ ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿ ವತಿಯಿಂದ ಜಾರಿಗಾಗಿ ಐಕ್ಯ ಹೋರಾಟ ಬೃಹತ್ ರ್‍ಯಾಲಿ ಹಾಗೂ ಬಹಿರಂಗ ಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಅವರು ಮಾತನಾಡಿದರು.

ಚುನಾವಣೆಗೂ ಮುಂಚೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ ಮೀಸಲಾತಿ ಜಾರಿ ನಾವು ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದ್ದರು. ಮತ ಬ್ಯಾಂಕ್ ಪಡೆದು ಅಧಿಕಾರ ಚುಕ್ಕಾಣಿ ಹಿಡಿದು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ದೇಶದ ಬಹುತೇಕ ರಾಜ್ಯದಲ್ಲಿ ಜನಸಂಖ್ಯೆಯ ಪ್ರಕಾರ ಪಂಜಾಬ್, ತಮಿಳುನಾಡು, ಆಂಧ್ರಪ್ರದೇಶ ಸೇರಿ ಆಯಾ ಭಾಗದ ರಾಜ್ಯ ಸರಕಾರ ಒಳ ಮೀಸಲಾತಿ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರೂ ಕೂಡ ರಾಜ್ಯ ಸರಕಾರ ಜಾರಿಗೆ ಮಾಡಲು ಹಿಂದೇಟು ಹಾಕುತ್ತಿದೆ. ಹಿಂದೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದೇವೆ. ಮುಂದೆ ನೀವು ಜಾರಿ ಮಾಡಿಲ್ಲ ಅಂದರೆ ಬುಡದಿಂದ ಕಿತ್ತು ಎಸೆಯುತ್ತವೆ ಎಂದು ಎಚ್ಚರಿಕೆ ನೀಡಿದರು.

ಚುನಾವಣೆ ಸಮಯದಲ್ಲಿ ನಮ್ಮ ಮಾದಿಗ ಸಮುದಾಯವು ಪರಿಶ್ರಮ ಪಟ್ಟು ಅಧಿಕಾರಕ್ಕೆ ತಂದ ಋಣ ಸಿದ್ದರಾಮಯ್ಯ ಅವರು ಮರೆಯಬಾರದು ಎಂದು ತಿಳಿಸಿದರು.

ನಂತರ ಮಾತನಾಡಿದ ಒಳ ಮೀಸಲಾತಿ ಹೋರಾಟಗಾರ ಸಂತೋಷ್ ಕೋಡಿಹಳ್ಳಿ, ಕಾಂಗ್ರೆಸ್ ಪಕ್ಷವು 2022ರಲ್ಲಿ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಠ ಪಂಗಡಗಳ ಬೃಹತ್ ಸಮಾವೇಶವನ್ನು ಆಯೋಜಿಸಿ ಹಿರಿಯ ನಾಯಕರ ಸಮ್ಮುಖದಲ್ಲಿಯೇ ಸರ್ಕಾರ ರಚನೆಯಾದ ಮೊದಲ ಅಧಿವೇಶನದಲ್ಲಿಯೇ ಮೀಸಲಾತಿ ಬೇಡಿಕೆಯನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿತ್ತು. ಆದರೂ ಇದುವರೆಗೂ ಸಕಾರಾತ್ಮಕವಾದ ನಿಲುವನ್ನು ಕೈಗೊಳ್ಳದೆ ಮಾಡುತ್ತೇವೆ, ನೋಡುತ್ತೇವೆ ಎಂದು ಕಾಲಹರಣ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ರಾಯಚೂರು | ಶಾಲಾ ಪ್ರಾರ್ಥನೆಯ ವೇಳೆಯಲ್ಲಿ ಹೃದಯಾಘಾತ: 8ನೇ ತರಗತಿ ವಿದ್ಯಾರ್ಥಿ ಸಾವು

ತಾವು ಘೋಷಿಸಿದ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ರೂ.6೦ ಸಾವಿರ ಕೋಟಿ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಅನುದಾನದಿಂದಲೇ ಬಳಕೆ ಮಾಡಿದಾಗಲೂ ನಮ್ಮ ಸಮುದಾಯಗಳು ಅತ್ಯಂತ ಸಾಮಾಧಾನದಿಂದ ತಮ್ಮ ಬೆಂಬಲಕ್ಕೆ ನೈತಿಕವಾಗಿ ನಿಂತಿರುವುದನ್ನು ತಾವುಗಳು ಸೂಕ್ಷ್ಮವಾಗಿ ಗಮನಿಸಿದಂತೆ ಕಾಣುತ್ತಿಲ್ಲ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಸಮಿತಿ ಮುಖಂಡ ಅಂಬಣ್ಣ ಅರೊಲಿಕರ್, ಕರಿಯಪ್ಪ ಗುಡಿಮನಿ ,ಎಚ ಬಿ ಮುರಾರಿ , ಬಾಲಸ್ವಾಮಿ ಕೊಡ್ಲಿ , ಭಾಸ್ಕರ್ ಪ್ರಸಾದ , ಎಂ ಆರ್ ಭೇರಿ ,ಹನುಮಂತಪ್ಪ , ಅಬ್ರಾಹಂ ಹೊನ್ನಟಗಿ, ಸೇರಿದಂತೆ ನುರಾರು ಮುಖಂಡರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...