ರಾಯಚೂರು| ಚುನಾವಣಾ ಆಯೋಗವನ್ನು ದುರ್ಬಲಗೊಳಿಸುವ ಹುನ್ನಾರ; ಟಿಯುಸಿಐ ಆರೋಪ

Date:

ಕೇಂದ್ರದ ಮೋದಿ ಸರ್ಕಾರವು ರಾಜ್ಯಸಭೆಯಲ್ಲಿ ಮಂಡಿಸಿದ ಹೊಸ ಚುನಾವಣಾ ಮಸೂದೆ ಅಂಗೀಕಾರವಾಗಿದ್ದೇ ಆದರೆ, ಸಂಸತ್ತು ಕೇವಲ ಕಲ್ಲು ಮಣ್ಣಿನ ಕಟ್ಟಡವಾಗಿ ಉಳಿಯಲಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್ ಮಾನಸಯ್ಯ ಆತಂಕ ವ್ಯಕ್ತಪಡಿಸಿದರು.

“ಪ್ರಜಾಪ್ರಭುತ್ವದ ಆಧಾರ ಸ್ಥಂಭವಾದ ಭಾರತ ಚುನಾವಣಾ ಆಯೋಗವು ನೂತನ ಮಸೂದೆ ಜಾರಿಯಾದರೆ ಭಾಜಪ ಚುನಾವಣಾ ಆಯೋಗವಾಗಲಿದೆ. ಪ್ರಸ್ತಾಪಿತ ಮಸೂದೆಯು ಭಾರತದ ಮುಖ್ಯ ನ್ಯಾಯಮೂರ್ತಿಯನ್ನು, ಸರ್ಕಾರದ ಕಾರ್ಯದರ್ಶಿ ದರ್ಜೆಗೆ ತಳ್ಳಲಿದೆ. ಭಾರತ ಮುಖ್ಯ ಚುನಾವಣಾಯುಕ್ತರನ್ನು ಚುನಾಯಿಸುವ(ನೇಮಿಸುವ)ಅಧಿಕಾರ ಪ್ರಧಾನಿ ಕಾರ್ಯಾಲಯದ ಪಾಲಾಗುತ್ತದೆ” ಎಂದು ಹೇಳಿದರು.

“ಸ್ವಾಯತ್ತತೆ ಕಳೆದುಕೊಂಡ, ಬಿಜೆಪಿ ಪ್ರಾಯೋಜಿತ ಚುನಾವಣಾ ಆಯೋಗವು ಬಿಜೆಪಿಯೇತರ ಪಕ್ಷಗಳನ್ನು ಅಧಿಕಾರಕ್ಕೇರಲು ಬಿಡಬಹುದೆ? ಪ್ರಜಾಪ್ರಭುತ್ವ ಹಾಗೂ ಪಾರದರ್ಶಕ ಪದ್ದತಿಯಡಿ ಬರುವ ಲೋಕಸಭಾ ಚುನಾವಣೆ ನಡೆದರೆ ಕರ್ನಾಟಕ ಕಲಿಸಿದ ಪಾಠವನ್ನೇ ಬಿಜೆಪಿ ಮರಳಿ ಕಲಿಯಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅನಧಿಕೃತ ಇ-ಖಾತೆಗಳು ಸೃಷ್ಠಿ; ಕ್ರಮಕ್ಕೆ ನಗರಸಭೆ ಪೌರಾಯುಕ್ತ ಆಗ್ರಹ

“ಬಿಜೆಪಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಾಗಿದೆ. ದರಿಂದ ಪಾರಾಗಲು ಚುನಾವಣಾ ಆಯೋಗವನ್ನೇ ತನ್ನ ರಾಜಕೀಯ ಸಂಸ್ಥೆಯನ್ನಾಗಿಸಲು ಈ ಮಸೂದೆಯ ಅಂಗೀಕಾರಕ್ಕೆ ಮುಂದಾಗಿದೆ” ಎಂದು ಆರೋಪಿಸಿದರು.

ದೇಶದ ಎಲ್ಲ ಪ್ರತಿಪಕ್ಷಗಳು, ಎಡ ಶಕ್ತಿಗಳು, ಕಾರ್ಮಿಕ-ರೈತ ಸಂಘಟನೆಗಳು, ದಮನಿತ ಸಮುದಾಯಗಳಾದ ದಲಿತ, ಕ್ರೈಸ್ತ, ಮುಸ್ಲಿಂ, ಆದಿವಾಸಿ ಜನಾಂಗಗಳು ವಿಶೇಷವಾಗಿ ಮಹಿಳೆ, ವಿದ್ಯಾರ್ಥಿಗಳು, ಯುವಜನಾಂಗಗಳು ಚುನಾವಣಾ ಆಯೋಗದ ಉಳಿವಿಗಾಗಿ ದನಿ ಎತ್ತಬೇಕಿದೆ ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...