ರಾಯಚೂರು | ಬಹುಮಹಡಿಯ ಕಟ್ಟಡ ಮತ್ತೊಂದು ಕಟ್ಟಡದ ಮೇಲೆ ವಾಲಿದ ಘಟನೆ; ಪಾಲಿಕೆಯ ಆಯುಕ್ತರಿಂದ‌ ಮಾಲಕರಿಗೆ ನೋಟೀಸ್

Date:

ನಗರದ ವಾರ್ಡ ನಂಬರ್ 8ರ ಕೋಟ್ ತಲಾರ್ ಬಡಾವಣೆಯ ಮೋತಿ ಮಸೀದಿಯ ಬಳಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಮತ್ತೊಂದು ಅಂತಸ್ತಿನ ಕಟ್ಟಡದ ಮೇಲೆ ವಾಲಿದ ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರು ಅವೈಜ್ಞಾನಿಕವಾಗಿ ನಿರ್ಮಿಸಿದ್ದರಿಂದ ತಳಪಾಯ ಕುಸಿದಿದೆ ಎಂದು ಪಾಲಿಕೆಯಿಂದ ನೋಟಿಸ್ ನೀಡಿದ್ದು‌, ಸಾರ್ವಜನಿಕರು ‌ಕಟ್ಟಡದ ಸುತ್ತಮುತ್ತ ಓಡಾಡಬಾರದು ಎಂದು ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಬಹುಮಹಡಿ ಕಟ್ಟಡ ಮಾಲೀಕರಾದ ಮಹ್ಮದ್ ದಸ್ತಗಿರಿಸಾಬ್ ಅವರು ಕಟ್ಟಡ ನಿರ್ಮಾಣ ಮಾಡುವ ಸಮಯದಲ್ಲಿ ಮಣ್ಣನ್ನು ಎಸ್.ಬಿ.ಸಿ ಪರೀಕ್ಷೆ ಮಾಡದೇ ನುರಿತ ತಜ್ಞೆ ಸಿವಿಲ್ ಇಂಜಿನಿಯರ್ ಅವರಿಂದ ಕಟ್ಟಡದ ರಚನೆ ವಿನ್ಯಾಸ (Structure Design) ಪಡೆದುಕೊಳ್ಳಲಾರದೇ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದರಿಂದ ತಳಪಾಯ ಕುಸಿದಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ; ಬಿಜೆಪಿ ಯುವ ನಾಯಕ 6 ತಿಂಗಳು ಗಡಿಪಾರು

ಈಗಾಗಲೇ ಕಟ್ಟಡದ ಮಾಲೀಕರಿಗೆ ಸ್ವಂತ ಖರ್ಚಿನಲ್ಲಿ ಕಟ್ಟಡವನ್ನು ತೆರವುಗೊಳಿಸಲು ಜುಲೈ 26 ರಂದು ನೋಟಿಸ್‌ನ್ನು ಜಾರಿಗೊಳಿಸಲಾಗಿದೆ ಆದ್ದರಿಂದ ಸಾರ್ವಜನಿಕರು ಸದರಿ ಕಟ್ಟಡದ ಹತ್ತಿರ ಓಡಾಡಬಾರದೆಂದು ಪಾಲಿಕೆಯ ವಲಯ ಆಯುಕ್ತ-1 ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...