ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

Date:

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಬಾಲಕನೊಬ್ಬ ಮೃತಪಟ್ಟಿದ್ದ. ಇದೀಗ, ಲಿಂಗಸುಗೂರು ತಾಲೂಕಿನ ಜೂಲಗುಡ್ಡ ಗ್ರಾಮದಲ್ಲೂ ಕಲುಷಿತ ನೀರು ಕುಡಿದು 8 ಮಂದಿ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌

ಕುಡಿಯುವ ನೀರಿನ ಪೈಪ್ ಒಡೆದು ಇದಕ್ಕೆ ಕಲುಷಿತ ನೀರು ಸೇರಿದ ಪರಿಣಾಮ ಕಳೆದ ಮೂರು ದಿನಗಳಿಂದ ಈ ನೀರು ಕುಡಿದ ಗ್ರಾಮಸ್ಥರಲ್ಲಿ ತೀವ್ರ ವಾಂತಿ ಭೇದಿ ಕಾಣಿಸಿಕೊಂಡಿದೆ.

ಚರಂಡಿ ಮಗ್ಗುಲಲ್ಲೇ ಕುಡಿಯುವ ನೀರಿನ ಪೈಪ್ ಹಾದು ಹೋಗಿದ್ದು, ಮೂರು ಕಡೆ ಪೈಪ್‌ಗೆ ಹಾನಿಯಾಗಿದೆ. ಕುಡಿಯುವ ನೀರಿನ ‌ಪೈಪ್‌ನಲ್ಲಿ ಸಣ್ಣ ಸಣ್ಣ ತೂತಗಳಾಗಿವೆ. ಈ ಮೂಲಕ ಚರಂಡಿ ನೀರು ಮಿಶ್ರಣವಾಗಿರಬಹುದೆಂದು ಅಂದಾಜಿಸಲಾಗಿದೆ. ಸುಮಾರು 200 ಮನೆಗಳಿಗೆ ಚರಂಡಿ ಮಿಶ್ರಿತ ನೀರು ಪೂರೈಕೆ ಆಗಿದೆ. ಈ ನೀರನ್ನು ಕುಡಿದವರು ಅಸ್ವಸ್ಥಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೇಕಲಮರಡಿ: ನೀರು ಸರಬರಾಜು ಸ್ಥಗಿತ

ರೇಕಲಮರಡಿ ಗ್ರಾಮದಲ್ಲಿ ಜನರು ಕಲುಷಿತಗೊಂಡ ನೀರು ಸೇವಿಸಿದ್ದರಿಂದ ಗ್ರಾಮಸ್ಥರು ಅಸ್ವಸ್ಥರಾಗಿದ್ದರು. ಸಿರವಾರ ಸರ್ಕಾರಿ ಆಸ್ಪತ್ರೆ ಸೇರಿದ್ದ ಹನುಮೇಶ್‌ (5) ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮೃತಪಟ್ಟಿದ್ದ. ಇನ್ನು ಹನುಮೇಶ್‌ನ ಅಕ್ಕ ನರಸಮ್ಮ (8) ಕೂಡ ಅಸ್ವಸ್ಥಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರಿಗೆ ಬಾಲಕ ಬಲಿ; 30 ಮಂದಿ ಅಸ್ವಸ್ಥ

ಸದ್ಯ ರೆಕಲಮರಡಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಸ್ಥಗಿತಗೊಂಡಿದೆ. ಬೇರೆ ಗ್ರಾಮಗಳಿಂದ ಕುಡಿಯುವ ನೀರನ್ನು ವಾಟರ್ ಟ್ಯಾಂಕ್‌ಗಳ ಮೂಲಕ ತಂದು ಪೂರೈಕೆ ಮಾಡಲಾಗುತ್ತಿದೆ. ಇತ್ತ ಗ್ರಾಮದಲ್ಲಿ ಚಿಕಿತ್ಸಾ ಕ್ಯಾಂಪ್ ನಿರ್ಮಾಣ ಮಾಡಿದ್ದು, 2 ಆ್ಯಂಬುಲೆನ್ಸ್, ಹಿರಿಯ ವೈದ್ಯರು, ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ತೆರಳಿ ಗ್ರಾಮಸ್ಥರ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಗ್ರಾಮಸ್ಥರ ಆರೋಗ್ಯ ಸ್ಥಿತಿ ಹತೋಟಿಗೆ ಬಂದಿದ್ದು, ಸ್ಥಳಕ್ಕೆ ಶಾಸಕಿ ಕರಿಯಮ್ಮ ಜಿ ನಾಯಕ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...