ರಾಯಚೂರು | ದೇಶದ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ: ಸತ್ಯ ನಾರಾಯಣರಾವ್

Date:

ದೇಶ ಅಭಿವೃದ್ಧಿಯಾಗಲು ಸರ್ಕಾರದ ಜವಾಬ್ದಾರಿಯೊಂದಿಗೆ ಇನ್ನಿತರ ಸಂಘ ಸಂಸ್ಥೆಗಳ ಸಹಕಾರವೂ ಅತ್ಯಗತ್ಯವಾಗಿರುತ್ತದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಸತ್ಯನಾರಾಯಣರಾವ್ ಅಭಿಪ್ರಾಯಪಟ್ಟರು.

ಮಾ ಆಶಾಪುರಿ ಕಲ್ಯಾಣ ಮಂಟಪದಲ್ಲಿ ರೋಟರಿ ಕ್ಲಬ್ ರಾಯಚೂರು ವಲಯ, ಇನ್ನರ್‌ವೀಲ್ ಕ್ಲಬ್ ಹಾಗೂ ಬಿಜಿಆರ್ ಮೈನಿಂಗ್ ಮತ್ತು ಇನ್ಫ್ರಾ ಲಿಮಿಟೆಡ್ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ನಗರ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರಿಗೆ ಸ್ವಯಂ ಉದ್ಯೋಗ ಸೃಷ್ಟಿಸಿ, ಕೌಟುಂಬಿಕ ಭದ್ರತೆ ನೀಡಲು ರೋಟರಿ ಕ್ಲಬ್‌ನಿಂದ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದ್ದು, ವಿತರಣೆ ಜೊತೆಗೆ ಮಹಿಳೆಯರಿಗೆ ಹೊಲಿಗೆ ತರಬೇತಿಯನ್ನೂ ನೀಡಬೇಕು. ಇದರಿಂದ ಮಹಿಳೆಯರಿಗೆ ಜೀವನ ಭದ್ರತೆ ನೀಡಿದಂತಾಗುತ್ತದೆ” ಎಂದರು.

“ಜಿಲ್ಲೆಯು ಆರ್ಥಿಕವಾಗಿ ಬಡವಾಗಿರಬಹುದು ಆದರೆ ಹೃದಯ ವೈಶಾಲ್ಯತೆಯಲ್ಲಿ ಅತ್ಯಂತ ಶ್ರೀಮಂತ ಜಿಲ್ಲೆಯಾಗಿದೆ. ಇಂತಹ ಜಿಲ್ಲೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಸಂಘ ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ. ಇದರ ಜೊತೆಗೆ ಆರೋಗ್ಯ ಮತ್ತು ಶಿಕ್ಷಣ ರಂಗಗಳನ್ನು ಪ್ರೋತ್ಸಾಹಿಸಲು ಸಂಸ್ಥೆಗಳು ಮುಂದಾಗಬೇಕಿದೆ. ಹೊಲಿಗೆ ಯಂತ್ರಗಳನ್ನು ಪಡೆದ ಮಹಿಳೆಯರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ವಿತರಣೆ ಮಾಡಿದ ಸಂಸ್ಥೆಗಳು ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿ, ಗಾರ್ಮೆಂಟ್ಸ್‌ಗಳನ್ನು ಸ್ಥಾಪಿಸಿ ಅಲ್ಲಿಯೇ ಉದ್ಯೋಗ ಒದಗಿಸಬೇಕು” ಎಂದು ಮನವಿ ಮಾಡಿದರು.

ರೋಟರಿ ಕೇಂದ್ರ ಅಧ್ಯಕ್ಷ ಶರಣಬಸವ ಜೋಳದಡಗಿ ಮಾತನಾಡಿ, “ಮಹಿಳೆಯರಿಗೆ ನೀಡಲಾಗುತ್ತಿರುವ ಹೊಲಿಗೆ ಯಂತ್ರಗಳು ಅವರ ಸ್ವಾಭಿಮಾನದ ಸಂಕೇತವಾಗಿದೆ. ಎಷ್ಟೇ ಕಷ್ಟ ಕಾಲ ಎದುರಾದರೂ ಕುಟುಂಬವನ್ನು ನಡೆಸುವ ಮಹಿಳೆಯರಿಗೆ ಹೊಲಿಗೆ ಯಂತ್ರಗಳು ತುಂಬಾ ಸಹಕಾರಿಯಾಗಲಿವೆ” ಎಂದು ತಿಳಿಸಿದರು.

ರೋಟರಿ ಇಂಟರ್‌ನ್ಯಾಷನಲ್‌ನ ಗವರ್ನರ್ ತ್ರಿವಿಕ್ರಮ ಜೋಶಿ ಮಾತನಾಡಿ, “ಅಗತ್ಯ ಮತ್ತು ಬಡ ಮಹಿಳೆಯರಿಗೆ ನೀಡಲಾಗುತ್ತಿರುವ ಹೊಲಿಗೆ ಯಂತ್ರಗಳು ಮಹಿಳೆಯರಿಗೆ ಉಪಜೀವನ ನಡೆಸಲು ಸಹಕಾರಿಯಾಗಲಿದೆ. ಈಗಾಗಲೇ ರೋಟರಿ ಕ್ಲಬ್‌ನಿಂದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮುಂದೆ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳು ಆಗಬೇಕಿದೆ” ಎಂದರು.

ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ 70 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: ರಾಯಚೂರು | ಯುವಕರು ಉದ್ಯೋಗ ಮೇಳಗಳ ಪ್ರಯೋಜನ ಪಡೆದುಕೊಳ್ಳಿ: ಸಚಿವ ಶರಣಪ್ರಕಾಶ ಪಾಟೀಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಬಿಜಿಆರ್ ಮೈನಿಂಗ್ ಮತ್ತು ಇನ್ಫ್ರಾ ಲಿಮಿಟೆಡ್‌ನ ನಿರ್ದೇಶಕ ವಿ.ಬಾಲಕೋಟಿ ರೆಡ್ಡಿ, ಜುಬ್ಲಿ ಹಿಲ್ಸ್ ರೋಟರಿ ಕ್ಲಬ್‌ನ ಲಕ್ಷಿರೆಡ್ಡಿ, ರೋಟರಿ ಇಂಟರ್‌ನ್ಯಾಷನಲ್ ಸಹಾಯಕ ಗವರ್ನರ್ ಎಂ.ಕೆ.ವೆಂಕಟೇಶ, ರೋಟರಿ ಕ್ಲಬ್‌ನ ಯೋಜನಾ ಅಧ್ಯಕ್ಷ ಶಿವಗಿರೀಶ, ಪದಾಧಿಕಾರಿಗಳಾದ ಪ್ರಬಣ್ಣಗೌಡ, ಹನುಮಂತ ರೆಡ್ಡಿ, ಮಲ್ಲಿಕಾರ್ಜುನ, ಲಲಿತಾ ಸತ್ಯಕುಮಾರ ಸೇರಿದಂತೆ ಕ್ಲಬ್‌ನ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...