ರಾಯಚೂರು | ಕೋವಿಡ್‌ ಲಸಿಕೆಯ ಅಡ್ಡಪರಿಣಾಮ; ಗೆಜ್ಜಲಗಟ್ಟಾ ಗ್ರಾಮದ ಹುಸೇನಪ್ಪ ರಿಮ್ಸ್‌ಗೆ ದಾಖಲು

Date:

ಕೋವಿಡ್ ಸೋಂಕು ಲಸಿಕೆಯಿಂದ ಅಡ್ಡಪರಿಣಾಮವಾಗಿ ಗೆಜ್ಜಲಗಟ್ಟಾ ಗ್ರಾಮದ ಹುಸೇನಪ್ಪ ಎಂಬುವವರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೋವಿಡ್ ಲಸಿಕೆ ಅಡ್ಡ ಪರಿಣಾಮದ ಆಧ್ಯಯನ ನಡೆಸಿರುವ ಸಮಿತಿಗಳು ಉಲ್ಲೇಖಿಸಿರುವ ಸಮಸ್ಯೆಗಳಿಂದಲೇ ಬಳಲುತ್ತಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಘೋಷಿಸಬೇಕು ಎಂದು ಸಿಪಿಐ(ಎಂಎಲ್)ರೆಡ್ ಸ್ಟಾರ್ ಪಾಲಿಟೋ ಬರೋ ಸದಸ್ಯ ಆರ್ ಮಾನಸಯ್ಯ ಒತ್ತಾಯಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಕೋವಿಡ್ ಸೋಂಕಿನ ಸಂದ‌ರ್ಭದಲ್ಲಿ ರೋಗಕ್ಕಿಂತ ಔಷಧಿ ಭಯಂಕರವಾಗಿರುವ ಜನರಿಂದ ಉದ್ಘಾರ ವ್ಯಕ್ತವಾಗಿತ್ತು. ಈಗ ಸಾಬೀತಾಗುತ್ತಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ತೀವ್ರ ತಲೆನೋವು, ಹೊಟ್ಟೆನೋವು, ವಾಂತಿ, ಜ್ವರ, ಕೈಕಾಲು ಊತ ಕಾಣಿಸುತ್ತಿರುವುದು ಅಡ್ಡಪರಿಣಾಮದ ಲಕ್ಷಣಗಳಾಗಿವೆ” ಎಂದು ಹೇಳಿದರು.

“ಲಸಿಕೆ ಕುರಿತಾಗಿ ಅಧ್ಯಯನ ನಡೆಸಿರುವ ಬನಾರಸ, ದೆಹಲಿ, ಹೈದ್ರಾಬಾದ್‌, ಕೇರಳಗಳಲ್ಲಿ ನಡೆದಿರುವ ಅಧ್ಯಯನದಲ್ಲಿ ಉಲ್ಲೇಖಿಸಿರುವ ಲಕ್ಷಣಗಳು ಹುಸೇನಪ್ಪ ಗೆಜ್ಜಲಟ್ಟಾ ಅವರ ದೇಹದಲ್ಲಿ ಕಂಡಿದ್ದು, ಕಳೆದ ಹತ್ತು ದಿನಗಳಿಂದ ರಿಮ್ಸ್‌ನಲ್ಲಿ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ರಿಮ್ಸ್ ವೈದ್ಯರು ನಿರಂತರ ಪ್ರಯತ್ನ ಮುಂದುವರೆಸಿದ್ದಾರೆ. ಲಸಿಕೆ ಅಡ್ಡಪರಿಣಾಮಗಳಿಂದಲೇ ಅನೇಕ ಸಮಸ್ಯೆಗಳನ್ನು ಎದುರಿಸಲಾಗುತ್ತಿದೆ. ಅಸ್ಟ್ರಾಜೆನೆಕಾ ಕಂಪನಿ ಪೂರೈಸಿರುವ ಲಸಿಕೆ ಅಡ್ಡಪರಿಣಾಮ ದೃಢಪಟ್ಟಿರುವ ಹಿನ್ನಲೆಯಲ್ಲಿಯೇ ಲಸಿಕೆಯನ್ನು ಕಂಪನಿ ಹಿಂಪಡೆದಿದೆ. ಆದರೆ ಅಡ್ಡಪರಿಣಾಮದಿಂದ ಜೀವ ಕಳೆದುಕೊಳ್ಳುತ್ತಿರುವವರ ಜೀವ ರಕ್ಷಣೆ ಹೇಗೆ ಎಂಬದನ್ನು ಸರ್ಕಾರಗಳು ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಶೀಲ್ಡ್ ಲಸಿಕೆಯೊಂದಿಗೆ ಕೋವ್ ವಾಕ್ಸಿನ್ ಕೂಡಾ ಅಡ್ಡಪರಿಣಾಮ ಹೊಂದಿರುವುದು ಬಯಲುಗೊಂಡಿದೆ. ಆದರೆ ಅಡ್ಡ ಪರಿಣಾಮದ ಲಸಿಕೆಯಿಂದ ಎದುರಾಗಿರುವ ಸಮಸ್ಯೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಲಸಿಕೆ ನೀಡುವಾಗ ಜನರಿಗೆ ಬೆದರಿಸಿ ಲಸಿಕೆ ನೀಡಲಾಯಿತು. ಪಡಿತರ ಕಡಿತ, ಸಾರಿಗೆ ಸಂಚಾರ ಸ್ಥಗಿತಗೊಳಿಸುವುದಾಗಿ ಹೇಳಲಾಗುತ್ತಿತ್ತು. ಆದರೀಗ ಲಸಿಕೆ ಪಡೆದವರು ಭಯ ಪಡುವಂತಾಗುತ್ತಿದೆ” ಎಂದರು.

“ಆರೋಗ್ಯ ಇಲಾಖೆ ರಾಯಚೂರಿನಲ್ಲಿ ಪ್ರಥಮ ಬಾರಿಗೆ ಪತ್ತೆಯಾಗಿರುವ ಲಸಿಕೆ ಅಡ್ಡ ಪರಿಣಾಮದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಲಸಿಕೆ ಉತ್ಪಾದಿಸಿರುವ ಕಂಪನಿಗಳು ಹಾಗೂ ಲಸಿಕೆ ಹಾಕಿಸಿಕೊಳ್ಳಲು ಅಧಿಕೃತ ನೋಟಿಫಿಕೇಷನ್ ಹೊರಡಿಸಿರುವ ಕಾನೂನು ಕ್ರಮ ಕೈಗೊಂಡು ಸಂಕಷ್ಟದಲ್ಲಿರುವ ರೋಗಿಗಳಿಗೆ ನೆರವು ನೀಡಬೇಕು” ಎಂದು ಆಗ್ರಹಿಸಿದರು.

ಕೋವಿಶೀಲ್ಡ್ ಅಡ್ಡಪರಿಣಾಮದಿಂದ‌ ಆಸ್ಪತ್ರೆಗಳಿಗೆ ದಾಖಲಾಗಿರುವ ರೋಗಿಗಳನ್ನು ಪತ್ತೆ ಮಾಡಲು ಸಮೀಕ್ಷೆ ನಡೆಸಬೇಕು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಟಿಟಿಎಸ್ ಚಿಕಿತ್ಸಾ ಕೇಂದ್ರ ಪ್ರಾರಂಭಿಸಿ ಜನರಲ್ಲಿ ಉಂಟಾಗುತ್ತಿರುವ ಭಯವನ್ನು ನಿವಾರಿಸಬೇಕು. ಲಸಿಕೆ ಕುರಿತಾದ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ ಆರ್ಟಿಕಲ್ 22 ರನ್ವಯ ಒತ್ತಾಯದಿಂದ ಚಿಕಿತ್ಸೆ ನೀಡುವುದು ಅಪರಾಧವೆಂದು ಹೇಳಿದೆ. ಅಡ್ಡಪರಿಣಾಮಕ್ಕೆ ಸರ್ಕಾರಗಳೇ ಹೊಣೆಯೆಂದೂ ಉಲ್ಲೇಖಿಸಿದೆ. 2019 ಕೋವಿಡ್ ವರ್ಷವಾದಂತೆ 2024-25 ಕೋವಿಡ್ ಅಡ್ಡ ಪರಿಣಾಮದ ವರ್ಷ ಆಗದಂತೆ ಎಚ್ಚರ ವಹಿಸಬೇಕಿದೆ. ಯುರೋಪ್, ಅಮೆರಿಕಾ ಸೇರಿದಂತೆ ಅನೇಕ ದೇಶಗಳು ಲಸಿಕೆ ಕುರಿತು ಎಚ್ಚರಿಕೆ ವಹಿಸುತ್ತಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲೋಕಸಭಾ ಚುನಾವಣೆಯಲ್ಲಿ ತಲ್ಲೀನವಾಗಿವೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ; ಮೇ 30ರಂದು ಜನಪರ ಚಳವಳಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

“ಜನರು ಭಯಭೀತರಾಗದೇ ಎಚ್ಚರ ವಹಿಸಿಕೊಳ್ಳಬೇಕು. ಲಕ್ಷಣಗಳು ಕಂಡುಬಂದರೆ ವೈದ್ಯರ ಸಲಹೆ ಪಡೆಯಬೇಕು. ಪ್ರಕರಣದ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ. ರಿಮ್ಸ್ ವೈದ್ಯರ ವರದಿ ಪಡೆದು ರಾಜ್ಯಕ್ಕೆ ರವಾನಿಸುವುದಾಗಿ ಭರವಸೆ ನೀಡಿದ್ದಾರೆ. ಕೂಡಲೇ ಹುಸೇನಪ್ಪ ಗೆಜ್ಜಲಗಟ್ಟಾ ಅವರ ಪ್ರಾಣ ಉಳಿಸುವ ಜತೆಗೆ ಸೂಕ್ತ ಪರಿಹಾರ ನೀಡಬೇಕು. ಸರ್ಕಾರಗಳು ಪರಿಸ್ಥಿತಿ ಕೈ ಮೀರವ ಮುನ್ನ ಮುಂಜಾಗ್ರತ ಕ್ರಮಗಳನ್ನು ಘೋಷಿಸಬೇಕು” ಎಂದು ಹೇಳಿದರು.

ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ, ಎಂ. ಗಗಾಧರ, ಅಜೀಜ್ ಜಹಾಗೀರದಾರ, ಲಕ್ಷ್ಮಣ ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...